ಬೆಂಗಳೂರು: ಇಂದು (ಮೇ.9) ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಈ ಬಾರಿಯೂ ಕೂಡಾ ರಾಜ್ಯದಲ್ಲಿ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ. ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿ ಮೊದಲನೇ ಸ್ಥಾನ ಪಡೆದರೆ ಮೈಸೂರಿಗೆ ಏಳನೇ ಸ್ಥಾನ ಲಭಿಸಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರಾದ ಮಂಜುಶ್ರೀ ಅವರು ಮಾಹಿತಿ ನೀಡಿದ್ದಾರೆ.
ಈ ಬಾರಿ ರಾಜ್ಯಾದ್ಯಂತ ಶೇಕಡವಾರು 73.4 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಈ ಬಾರಿ ಒಟ್ಟು 8,59, 967 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ 6,31,204 ಮಂದಿ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಬಾಲಕರು 287416 ತೇರ್ಗಡೆ ಹೊಂದಿದ್ದು, 3,43,788 ಬಾಲಕೀಯರು ಪಾಸಾಗಿದ್ದು, ಬಾಲಕರಿಗಿಂತ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ. ಬಾಲಕರ ಶೇಕಡವಾರು 65.90 ರಷ್ಟು ಇದ್ದರೇ, ಶೇ 81.11 ರಷ್ಟು ಬಾಲಕೀಯರು ಪಾಸಾಗಿದ್ದಾರೆ.
ಉಡುಪಿಗೆ ಮೊದಲ ಸ್ಥಾನ. ಮೈಸೂರಿಗೆ ಏಳನೇ ಸ್ಥಾನ!
ಇನ್ನು ಜಿಲ್ಲಾವಾರು ಶೇಕಡ ಫಲಿತಾಂಶದಲ್ಲಿ ಉಡುಪಿಗೆ ಮೊದಲ ಸ್ಥಾನ ಲಭಿಸಿದೆ. ಉಡುಪಿ ಜಿಲ್ಲೆಯ ಶೇ. 94 ರಷ್ಟು ಫಲಿತಾಂಶ ಬಂದರೆ, ಕೊನೆಯ ಸ್ಥಾನದಲ್ಲಿ ಯಾದಗಿರಿ ಜಿಲ್ಲೆ ಶೇ. 50.59 ಫಲಿತಾಂಶ ಹೊಂದಿದ್ದು, ಕೊನೆಯ ಸ್ಥಾನದಲ್ಲಿದೆ. ಕ್ರಮವಾಗಿ ಎರಡನೇ ಸ್ಥಾನದಲ್ಲಿ ದಕ್ಷಿಣ ಕನ್ನಡ ಶೇ. 92.12, ಮೂರನೇ ಸ್ಥಾನದಲ್ಲಿ ಶಿವಮೊಗ್ಗ ಶೇ 88.67 ನಾಲ್ಕನೇ ಸ್ಥಾನದಲ್ಲಿ ಕೊಡಗು ಶೇ 88.67 ರಷ್ಟು ತೇರ್ಗಡೆ ಫಲಿತಾಂಶ ಹೊಂದಿವೆ.
ಇನ್ನು ಬಾಗಲಕೋಟೆಯ ಅಂಕಿತಾ ಬಸಪ್ಪ ಎಂಬುವವರು 625/625 ರಷ್ಟು ಅಂಕಗಳಿಸಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…