BREAKING NEWS

ಸಿಎಂ ರೇಸ್ ಗೆ ವೇದಿಕೆ ಸಜ್ಜು : ಆಪ್ತರ ಸಭೆ ಬಳಿಕ ಶಾಸಕರ ಬೆಂಬಲ ಇದೆ ಎಂದ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರದ ಗದ್ದುಗೆ ಹಿಡಿಯಲು ಅಣಿಯಾಗಿರುವಾಗಲೇ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ಮುನ್ನೆಲೆಗೆ ಬಂದಿದ್ದು, ಮುಖ್ಯಮಂತ್ರಿ ಪಟ್ಟ ಯಾರಿಗೆ ಒಲಿಯಲಿದೆ ಎಂಬುದು ಕುತೂಹಲ ಮೂಡಿಸಿದೆ.

ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಹಾಗೆಯೇ, ಮುಖ್ಯಮಂತ್ರಿಯ ಹುದ್ದೆಯ ರೇಸ್‌ನಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಸಹ ಇದ್ದು, ಮುಖ್ಯಮಂತ್ರಿ ಹುದ್ದೆ ಯಾರ ಪಾಲಾಗಲಿದೆ ಎಂಬುದು ಕುತೂಹಲಕ್ಕೆಡೆ ಮಾಡಿಕೊಟ್ಟಿದೆ.

ಕಾಂಗ್ರೆಸ್‌ನಲ್ಲಿ ಮೊದಲಿನಿಂದಲೂ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಇದೆಯಾದರೂ ದಲಿತ ಸಿಎಂ ಕೂಗು ಕೇಳಿ ಬರುತ್ತಿದೆ. ಹಾಗಾಗಿ. ಡಾ. ಜಿ. ಪರಮೇಶ್ವರ್ ಹೆಸರು ಈಗ ಮುನ್ನಲೆಗೆ ಬಂದಿದೆ. ಇದೆಲ್ಲದರ ನಡುವೆ ಬಿಜೆಪಿಯ ವೋಟ್ ಬ್ಯಾಂಕ್ ಆಗಿದ್ದ ಲಿಂಗಾಯತ ಸಮುದಾಯ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪರ ನಿಂತಿದ್ದಾರೆ. ಹಾಗಾಗಿ. ಆ ಸಮುದಾಯಕ್ಕೆ ಸೇರಿದವರೇ ಮುಖ್ಯಮಂತ್ರಿಯಾಗಬೇಕು ಎಂಬ ಮಾತುಗಳು ಕೇಳಿ ಬರುತ್ತಿವೆ. ಲಿಂಗಾಯತ ಮುಖ್ಯಮಂತ್ರಿಯ ರೇಸ್‌ನಲ್ಲಿ ಎಂ.ಬಿ. ಪಾಟೀಲ್, ಈಶ್ವರ ಖಂಡ್ರೆ, ಎಸ್.ಎಸ್. ಮಲ್ಲಿಕಾರ್ಜುನ್ ಹೆಸರುಗಳು ಮುಂಚೂಣಿಯಲ್ಲಿವೆ.

ಯಾವುದೇ ರಾಜ್ಯದಲ್ಲಿ ಚುನಾವಣೆಗಳು ನಡೆದಾಗ ಆಯಾ ರಾಜ್ಯದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರುಗಳೇ ಮುಖ್ಯಮಂತ್ರಿಯಾಗುವುದು ಸಹಜವಾದರೂ, ಕೆಲ ಬಾರಿ ಈ ಸಂಪ್ರದಾಯವನ್ನು ಬದಿಗೊತ್ತಿ, ಹೈಕಮಾಂಡ್ ಸೂಚಿಸಿದವರು ಮುಖ್ಯಮಂತ್ರಿಯಾಗಿರುವ ನಿದರ್ಶನಗಳು ಕಾಂಗ್ರೆಸ್‌ನಲ್ಲಿದೆ. ಹಾಗಾಗಿ, ಮುಖ್ಯಮಂತ್ರಿ ಪಟ್ಟ ಶಿವಕುಮಾರ್‌ಗೋ ಸಿದ್ದರಾಮಯ್ಯಗೋ ಎಂಬುದು ಈಗ ಯಕ್ಷ ಪ್ರಶ್ನೆಯಾಗಿದೆ. ಮುಖ್ಯಮಂತ್ರಿ ಹುದ್ದೆ ಆಯ್ಕೆ ವರಿಷ್ಠರಿಗೆ ಸವಾಲಾಗಿದೆ. ಯಾರನ್ನು ಆಯ್ಕೆ ಮಾಡಬೇಕು ಎಂಬ ಸಂದಿಗ್ಧದಲ್ಲಿ ಹೈಕಮಾಂಡ್ ಇದೆ. ಹೈ ಕಮಾಂಡ್ ಎಲ್ಲರ ಜತೆ ಚರ್ಚಿಸಿ ಒಂದು ನಿರ್ಧಾರಕ್ಕೆ ಬರಲಿದೆ. ಹೈಕಮಾಂಡ್ ನಿರ್ಧರಿಸಿದವರೇ ಮುಖ್ಯಮಂತ್ರಿಯಾಗುವ ಸಾಧ್ಯತೆಗಳು ಹೆಚ್ಚಿವೆ.

ಶಾಸಕರ ಬೆಂಬಲ ಇದೆ ಎಂದ ಸಿದ್ದರಾಮಯ್ಯ : ಇನ್ನು ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮಾಜಿ ಸಿದ್ದರಾಮಯ್ಯ ತಮಗೆ ಶಾಸಕರ ಬೆಂಬಲವಿದೆ ಎಂದು ಹೇಳುವ ಮೂಲಕ ಸಿಎಂ ಸ್ಥಾನ ತಮಗೇ ನೀಡಬೇಕು ಎಂದು ಪ್ರತಿಪಾದಿಸಿದ್ದಾರೆ. ಇಂದು ಬೆಳಗ್ಗೆ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಬೈರತಿ ಸುರೇಶ್ ಅವರಿಗೆ ಸೇರಿದ್ದು ಎನ್ನಲಾದ ಹೊಟೆಲ್ ನಲ್ಲಿ ಸಿದ್ದರಾಮಯ್ಯ ಅವರ ಆಪ್ತ ಶಾಸಕರು ನಾಯಕರ ರಹಸ್ಯ ಕರೆಯಲಾಗಿತ್ತು. ಈ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನೇ ಕಾಂಗ್ರೆಸ್ ಪಕ್ಷದ ಸಿಎಂ ಆಗಿ ಆಯ್ಕೆ ಮಾಡಲು ಮಾಡಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಗಿದೆ ಎನ್ನಲಾಗಿದೆ. ಅಂತೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಶಾಸಕರ ಬೆಂಬಲ ಇರುವ ಕುರಿತು ಮಾಹಿತಿ ನೀಡಲಾಗಿದೆ ಎಂದು ಹೇಳಲಾಗಿದೆ.

lokesh

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

3 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

3 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

7 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

7 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

7 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

7 hours ago