BREAKING NEWS

ಬಡ್ಡಿ ದರ ಏರಿಕೆ ಮಾಡಿದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ

ಸಾರ್ವಜನಿಕ ವಲಯದ ಅತಿ ದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತೆ ತನ್ನ ಸಾಲದ ಮೇಲಿನ ಬಡ್ಡಿ ದರವನ್ನು ಏರಿಕೆ ಮಾಡಿದೆ. ಈ ಮೂಲಕ ಕೋಟಿಗಟ್ಟಲೆ ಗ್ರಾಹಕರಿಗೆ ಆಘಾತ ನೀಡಿದೆ. ಬ್ಯಾಂಕ್ ತನ್ನ ಕನಿಷ್ಠ ವೆಚ್ಚದ ಸಾಲದ ದರವನ್ನು 5 ಮೂಲ ಅಂಕಗಳಷ್ಟು ಹೆಚ್ಚಿಸಿದೆ. ಈ ಹೊಸ ದರಗಳು ಇದೇ ಜುಲೈ 15, 2023ರಿಂದ ಜಾರಿಗೆ ಬರಲಿವೆ.

ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾದ ಮಾಹಿತಿಯ ಪ್ರಕಾರ ವಿವಿಧ ಅವಧಿಗಳ ಎಂಸಿಎಲ್‌ಆರ್‌ ಶೇ. 8 ರಿಂದ ಶೇ. 8.75ರವರೆಗೆ ಇರಲಿದೆ. ಈ ಹೆಚ್ಚಳದ ನಂತರ, ಗೃಹ ಸಾಲ, ವಾಹನ ಸಾಲ, ಶಿಕ್ಷಣ ಸಾಲ, ವೈಯಕ್ತಿಕ ಸಾಲ ಇತ್ಯಾದಿಗಳ ಮಾಸಿಕ ಕಂತು ಅಂದರೆ ಇಎಂಐ ಹೊರೆ ಹೆಚ್ಚಲಿದೆ.

ಈ ಪರಿಷ್ಕರಣೆಯೊಂದಿಗೆ ಒಂದು ವರ್ಷದ ಅವಧಿಯ ಎಂಸಿಎಲ್‌ಆರ್ ಈ ಹಿಂದಿನ ಶೇ. 8.50 ರಿಂದ ಶೇ. 8.55ಕ್ಕೆ ಏರಿಕೆಯಾಗಿದೆ. ಹೆಚ್ಚಿನ ಸಾಲಗಳು ಒಂದು ವರ್ಷದ ಎಂಸಿಎಲ್‌ಆರ್ ದರಕ್ಕೆ ಸಂಬಂಧಿಸಿರುತ್ತವೆ. ಹೀಗಾಗಿ ಇದು ಗ್ರಾಹಕರ ಮೇಲೆ ನೇರ ಪರಿಣಾಮ ಬೀರಲಿದೆ.

ಒಂದು ತಿಂಗಳು ಮತ್ತು ಮೂರು ತಿಂಗಳ ಎಂಸಿಎಲ್‌ಆರ್‌ ಕ್ರಮವಾಗಿ 5 ಮೂಲ ಅಂಕಗಳ ಹೆಚ್ಚಳದೊಂದಿಗೆ ಶೇ. 8 ಮತ್ತು ಶೇ. 8.15ಕ್ಕೆ ತಲುಪಿದೆ. ಇದೇ ವೇಳೆ ಆರು ತಿಂಗಳ ಎಂಸಿಎಲ್‌ಆರ್‌ ಶೇ. 8.45ಕ್ಕೆ ಮುಟ್ಟಿದೆ.

ಇನ್ನು ಎರಡು ವರ್ಷಗಳ ಎಂಸಿಎಲ್‌ಆರ್‌ ಸಹ 5 ಮೂಲ ಅಂಕಗಳ ಹೆಚ್ಚಳದೊಂದಿಗೆ ಶೇ. 8.65ಕ್ಕೆ ತಲುಪಿದ್ದರೆ, ಮೂರು ವರ್ಷಗಳ ಎಂಸಿಎಲ್‌ಆರ್‌ ಶೇ. 8.75ಕ್ಕೆ ಏರಿಕೆ ಕಂಡಿದೆ.

ರೆಪೋ ದರ ಸ್ಥಿರವಾದ ನಂತರವೂ ಹೆಚ್ಚುತ್ತಿದೆ ಬಡ್ಡಿ ದರ

ಹಣದುಬ್ಬರ ಈಗಾಗಲೇ ಒಂದು ಹಂತಕ್ಕೆ ನಿಯಂತ್ರಣಕ್ಕೆ ಬಂದಿದ್ದು, ಇದಾದ ಬಳಿಕ ರಿಸರ್ವ್ ಬ್ಯಾಂಕ್ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ರೆಪೋ ದರ ಶೇ. 6.50ರಲ್ಲೇ ಸ್ಥಿರವಾಗಿದೆ. ಆದರೆ ಹೀಗಿದ್ದೂ ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರಗಳನ್ನು ಏರಿಕೆ ಮಾಡುತ್ತಿವೆ.

ಮತ್ತೊಂದೆಡೆ ಮೇ 2022 ರಿಂದ ಇಲ್ಲಿಯವರೆಗೆ, ಕೇಂದ್ರ ಬ್ಯಾಂಕ್ ರೆಪೋ ದರವನ್ನು ಒಟ್ಟು 2.50 ಪ್ರತಿಶತದಷ್ಟು ಹೆಚ್ಚಿಸಿದೆ. ಆದರೆ ಇತ್ತೀಚಿನ ತಿಂಗಳುಗಳಲ್ಲಿ ಹಣದುಬ್ಬರ ನಿಯಂತ್ರಣಕ್ಕೆ ಬಂದ ಬಳಿಕ ರಿಸರ್ವ್ ಬ್ಯಾಂಕ್ ರೆಪೋ ದರದಲ್ಲಿ ಯಾವುದೇ ಬದಲಾವಣೆಯನ್ನು ಮಾಡಿಲ್ಲ. ಈ ನಿರ್ಧಾರದ ನಂತರವೂ ಬ್ಯಾಂಕುಗಳು ತಮ್ಮ ಬಡ್ಡಿ ದರಗಳನ್ನು ನಿರಂತರವಾಗಿ ಹೆಚ್ಚಿಸುತ್ತಿವೆ. ಇದರಿಂದ ಗ್ರಾಹಕರು ದುಬಾರಿ ಬಡ್ಡಿ ತೆರಬೇಕಾಗಿದೆ.

ಎಚ್‌ಡಿಎಫ್‌ಸಿ ಬಡ್ಡಿದರವೂ ಸಹ ಬಡ್ಡಿ ದರ ಏರಿಕೆ ಮಾಡಿದೆ

ಎಸ್‌ಬಿಐಗಿಂತ ಮೊದಲು ಖಾಸಗಿ ವಲಯದ ಅತಿದೊಡ್ಡ ಬ್ಯಾಂಕ್ ಎಚ್‌ಡಿಎಫ್‌ಸಿ ಬ್ಯಾಂಕ್ ಕೂಡ ತನ್ನ ಬಡ್ಡಿದರಗಳನ್ನು ಹೆಚ್ಚಿಸಿತ್ತು. ಎಚ್‌ಡಿಎಫ್‌ಸಿ ಬ್ಯಾಂಕ್ ಎಂಸಿಎಲ್‌ಆರ್ ಅನ್ನು ಶೇ. 0.15 ರಷ್ಟು ಹೆಚ್ಚಿಸಿದೆ. ಕೆಲವು ಆಯ್ದ ಅವಧಿಯ ಸಾಲಗಳ ಮೇಲೆ ಈ ಹೆಚ್ಚಳ ಮಾಡಲಾಗಿದೆ. ಹೊಸ ದರಗಳು ಜುಲೈ 7, 2023 ರಿಂದಲೇ ಜಾರಿಗೆ ಬಂದಿವೆ.

andolanait

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

46 seconds ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

8 mins ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

17 mins ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

29 mins ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

3 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

3 hours ago