BREAKING NEWS

ಬಡ್ಡಿ ದರ ಏರಿಕೆ ಮಾಡಿದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ

ಸಾರ್ವಜನಿಕ ವಲಯದ ಅತಿ ದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತೆ ತನ್ನ ಸಾಲದ ಮೇಲಿನ ಬಡ್ಡಿ ದರವನ್ನು ಏರಿಕೆ ಮಾಡಿದೆ. ಈ ಮೂಲಕ ಕೋಟಿಗಟ್ಟಲೆ ಗ್ರಾಹಕರಿಗೆ ಆಘಾತ ನೀಡಿದೆ. ಬ್ಯಾಂಕ್ ತನ್ನ ಕನಿಷ್ಠ ವೆಚ್ಚದ ಸಾಲದ ದರವನ್ನು 5 ಮೂಲ ಅಂಕಗಳಷ್ಟು ಹೆಚ್ಚಿಸಿದೆ. ಈ ಹೊಸ ದರಗಳು ಇದೇ ಜುಲೈ 15, 2023ರಿಂದ ಜಾರಿಗೆ ಬರಲಿವೆ.

ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾದ ಮಾಹಿತಿಯ ಪ್ರಕಾರ ವಿವಿಧ ಅವಧಿಗಳ ಎಂಸಿಎಲ್‌ಆರ್‌ ಶೇ. 8 ರಿಂದ ಶೇ. 8.75ರವರೆಗೆ ಇರಲಿದೆ. ಈ ಹೆಚ್ಚಳದ ನಂತರ, ಗೃಹ ಸಾಲ, ವಾಹನ ಸಾಲ, ಶಿಕ್ಷಣ ಸಾಲ, ವೈಯಕ್ತಿಕ ಸಾಲ ಇತ್ಯಾದಿಗಳ ಮಾಸಿಕ ಕಂತು ಅಂದರೆ ಇಎಂಐ ಹೊರೆ ಹೆಚ್ಚಲಿದೆ.

ಈ ಪರಿಷ್ಕರಣೆಯೊಂದಿಗೆ ಒಂದು ವರ್ಷದ ಅವಧಿಯ ಎಂಸಿಎಲ್‌ಆರ್ ಈ ಹಿಂದಿನ ಶೇ. 8.50 ರಿಂದ ಶೇ. 8.55ಕ್ಕೆ ಏರಿಕೆಯಾಗಿದೆ. ಹೆಚ್ಚಿನ ಸಾಲಗಳು ಒಂದು ವರ್ಷದ ಎಂಸಿಎಲ್‌ಆರ್ ದರಕ್ಕೆ ಸಂಬಂಧಿಸಿರುತ್ತವೆ. ಹೀಗಾಗಿ ಇದು ಗ್ರಾಹಕರ ಮೇಲೆ ನೇರ ಪರಿಣಾಮ ಬೀರಲಿದೆ.

ಒಂದು ತಿಂಗಳು ಮತ್ತು ಮೂರು ತಿಂಗಳ ಎಂಸಿಎಲ್‌ಆರ್‌ ಕ್ರಮವಾಗಿ 5 ಮೂಲ ಅಂಕಗಳ ಹೆಚ್ಚಳದೊಂದಿಗೆ ಶೇ. 8 ಮತ್ತು ಶೇ. 8.15ಕ್ಕೆ ತಲುಪಿದೆ. ಇದೇ ವೇಳೆ ಆರು ತಿಂಗಳ ಎಂಸಿಎಲ್‌ಆರ್‌ ಶೇ. 8.45ಕ್ಕೆ ಮುಟ್ಟಿದೆ.

ಇನ್ನು ಎರಡು ವರ್ಷಗಳ ಎಂಸಿಎಲ್‌ಆರ್‌ ಸಹ 5 ಮೂಲ ಅಂಕಗಳ ಹೆಚ್ಚಳದೊಂದಿಗೆ ಶೇ. 8.65ಕ್ಕೆ ತಲುಪಿದ್ದರೆ, ಮೂರು ವರ್ಷಗಳ ಎಂಸಿಎಲ್‌ಆರ್‌ ಶೇ. 8.75ಕ್ಕೆ ಏರಿಕೆ ಕಂಡಿದೆ.

ರೆಪೋ ದರ ಸ್ಥಿರವಾದ ನಂತರವೂ ಹೆಚ್ಚುತ್ತಿದೆ ಬಡ್ಡಿ ದರ

ಹಣದುಬ್ಬರ ಈಗಾಗಲೇ ಒಂದು ಹಂತಕ್ಕೆ ನಿಯಂತ್ರಣಕ್ಕೆ ಬಂದಿದ್ದು, ಇದಾದ ಬಳಿಕ ರಿಸರ್ವ್ ಬ್ಯಾಂಕ್ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ರೆಪೋ ದರ ಶೇ. 6.50ರಲ್ಲೇ ಸ್ಥಿರವಾಗಿದೆ. ಆದರೆ ಹೀಗಿದ್ದೂ ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರಗಳನ್ನು ಏರಿಕೆ ಮಾಡುತ್ತಿವೆ.

ಮತ್ತೊಂದೆಡೆ ಮೇ 2022 ರಿಂದ ಇಲ್ಲಿಯವರೆಗೆ, ಕೇಂದ್ರ ಬ್ಯಾಂಕ್ ರೆಪೋ ದರವನ್ನು ಒಟ್ಟು 2.50 ಪ್ರತಿಶತದಷ್ಟು ಹೆಚ್ಚಿಸಿದೆ. ಆದರೆ ಇತ್ತೀಚಿನ ತಿಂಗಳುಗಳಲ್ಲಿ ಹಣದುಬ್ಬರ ನಿಯಂತ್ರಣಕ್ಕೆ ಬಂದ ಬಳಿಕ ರಿಸರ್ವ್ ಬ್ಯಾಂಕ್ ರೆಪೋ ದರದಲ್ಲಿ ಯಾವುದೇ ಬದಲಾವಣೆಯನ್ನು ಮಾಡಿಲ್ಲ. ಈ ನಿರ್ಧಾರದ ನಂತರವೂ ಬ್ಯಾಂಕುಗಳು ತಮ್ಮ ಬಡ್ಡಿ ದರಗಳನ್ನು ನಿರಂತರವಾಗಿ ಹೆಚ್ಚಿಸುತ್ತಿವೆ. ಇದರಿಂದ ಗ್ರಾಹಕರು ದುಬಾರಿ ಬಡ್ಡಿ ತೆರಬೇಕಾಗಿದೆ.

ಎಚ್‌ಡಿಎಫ್‌ಸಿ ಬಡ್ಡಿದರವೂ ಸಹ ಬಡ್ಡಿ ದರ ಏರಿಕೆ ಮಾಡಿದೆ

ಎಸ್‌ಬಿಐಗಿಂತ ಮೊದಲು ಖಾಸಗಿ ವಲಯದ ಅತಿದೊಡ್ಡ ಬ್ಯಾಂಕ್ ಎಚ್‌ಡಿಎಫ್‌ಸಿ ಬ್ಯಾಂಕ್ ಕೂಡ ತನ್ನ ಬಡ್ಡಿದರಗಳನ್ನು ಹೆಚ್ಚಿಸಿತ್ತು. ಎಚ್‌ಡಿಎಫ್‌ಸಿ ಬ್ಯಾಂಕ್ ಎಂಸಿಎಲ್‌ಆರ್ ಅನ್ನು ಶೇ. 0.15 ರಷ್ಟು ಹೆಚ್ಚಿಸಿದೆ. ಕೆಲವು ಆಯ್ದ ಅವಧಿಯ ಸಾಲಗಳ ಮೇಲೆ ಈ ಹೆಚ್ಚಳ ಮಾಡಲಾಗಿದೆ. ಹೊಸ ದರಗಳು ಜುಲೈ 7, 2023 ರಿಂದಲೇ ಜಾರಿಗೆ ಬಂದಿವೆ.

andolanait

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

3 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

7 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

8 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

11 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

14 hours ago