BREAKING NEWS

ಬಡ್ಡಿ ದರ ಏರಿಕೆ ಮಾಡಿದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ

ಸಾರ್ವಜನಿಕ ವಲಯದ ಅತಿ ದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತೆ ತನ್ನ ಸಾಲದ ಮೇಲಿನ ಬಡ್ಡಿ ದರವನ್ನು ಏರಿಕೆ ಮಾಡಿದೆ. ಈ ಮೂಲಕ ಕೋಟಿಗಟ್ಟಲೆ ಗ್ರಾಹಕರಿಗೆ ಆಘಾತ ನೀಡಿದೆ. ಬ್ಯಾಂಕ್ ತನ್ನ ಕನಿಷ್ಠ ವೆಚ್ಚದ ಸಾಲದ ದರವನ್ನು 5 ಮೂಲ ಅಂಕಗಳಷ್ಟು ಹೆಚ್ಚಿಸಿದೆ. ಈ ಹೊಸ ದರಗಳು ಇದೇ ಜುಲೈ 15, 2023ರಿಂದ ಜಾರಿಗೆ ಬರಲಿವೆ.

ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾದ ಮಾಹಿತಿಯ ಪ್ರಕಾರ ವಿವಿಧ ಅವಧಿಗಳ ಎಂಸಿಎಲ್‌ಆರ್‌ ಶೇ. 8 ರಿಂದ ಶೇ. 8.75ರವರೆಗೆ ಇರಲಿದೆ. ಈ ಹೆಚ್ಚಳದ ನಂತರ, ಗೃಹ ಸಾಲ, ವಾಹನ ಸಾಲ, ಶಿಕ್ಷಣ ಸಾಲ, ವೈಯಕ್ತಿಕ ಸಾಲ ಇತ್ಯಾದಿಗಳ ಮಾಸಿಕ ಕಂತು ಅಂದರೆ ಇಎಂಐ ಹೊರೆ ಹೆಚ್ಚಲಿದೆ.

ಈ ಪರಿಷ್ಕರಣೆಯೊಂದಿಗೆ ಒಂದು ವರ್ಷದ ಅವಧಿಯ ಎಂಸಿಎಲ್‌ಆರ್ ಈ ಹಿಂದಿನ ಶೇ. 8.50 ರಿಂದ ಶೇ. 8.55ಕ್ಕೆ ಏರಿಕೆಯಾಗಿದೆ. ಹೆಚ್ಚಿನ ಸಾಲಗಳು ಒಂದು ವರ್ಷದ ಎಂಸಿಎಲ್‌ಆರ್ ದರಕ್ಕೆ ಸಂಬಂಧಿಸಿರುತ್ತವೆ. ಹೀಗಾಗಿ ಇದು ಗ್ರಾಹಕರ ಮೇಲೆ ನೇರ ಪರಿಣಾಮ ಬೀರಲಿದೆ.

ಒಂದು ತಿಂಗಳು ಮತ್ತು ಮೂರು ತಿಂಗಳ ಎಂಸಿಎಲ್‌ಆರ್‌ ಕ್ರಮವಾಗಿ 5 ಮೂಲ ಅಂಕಗಳ ಹೆಚ್ಚಳದೊಂದಿಗೆ ಶೇ. 8 ಮತ್ತು ಶೇ. 8.15ಕ್ಕೆ ತಲುಪಿದೆ. ಇದೇ ವೇಳೆ ಆರು ತಿಂಗಳ ಎಂಸಿಎಲ್‌ಆರ್‌ ಶೇ. 8.45ಕ್ಕೆ ಮುಟ್ಟಿದೆ.

ಇನ್ನು ಎರಡು ವರ್ಷಗಳ ಎಂಸಿಎಲ್‌ಆರ್‌ ಸಹ 5 ಮೂಲ ಅಂಕಗಳ ಹೆಚ್ಚಳದೊಂದಿಗೆ ಶೇ. 8.65ಕ್ಕೆ ತಲುಪಿದ್ದರೆ, ಮೂರು ವರ್ಷಗಳ ಎಂಸಿಎಲ್‌ಆರ್‌ ಶೇ. 8.75ಕ್ಕೆ ಏರಿಕೆ ಕಂಡಿದೆ.

ರೆಪೋ ದರ ಸ್ಥಿರವಾದ ನಂತರವೂ ಹೆಚ್ಚುತ್ತಿದೆ ಬಡ್ಡಿ ದರ

ಹಣದುಬ್ಬರ ಈಗಾಗಲೇ ಒಂದು ಹಂತಕ್ಕೆ ನಿಯಂತ್ರಣಕ್ಕೆ ಬಂದಿದ್ದು, ಇದಾದ ಬಳಿಕ ರಿಸರ್ವ್ ಬ್ಯಾಂಕ್ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ರೆಪೋ ದರ ಶೇ. 6.50ರಲ್ಲೇ ಸ್ಥಿರವಾಗಿದೆ. ಆದರೆ ಹೀಗಿದ್ದೂ ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರಗಳನ್ನು ಏರಿಕೆ ಮಾಡುತ್ತಿವೆ.

ಮತ್ತೊಂದೆಡೆ ಮೇ 2022 ರಿಂದ ಇಲ್ಲಿಯವರೆಗೆ, ಕೇಂದ್ರ ಬ್ಯಾಂಕ್ ರೆಪೋ ದರವನ್ನು ಒಟ್ಟು 2.50 ಪ್ರತಿಶತದಷ್ಟು ಹೆಚ್ಚಿಸಿದೆ. ಆದರೆ ಇತ್ತೀಚಿನ ತಿಂಗಳುಗಳಲ್ಲಿ ಹಣದುಬ್ಬರ ನಿಯಂತ್ರಣಕ್ಕೆ ಬಂದ ಬಳಿಕ ರಿಸರ್ವ್ ಬ್ಯಾಂಕ್ ರೆಪೋ ದರದಲ್ಲಿ ಯಾವುದೇ ಬದಲಾವಣೆಯನ್ನು ಮಾಡಿಲ್ಲ. ಈ ನಿರ್ಧಾರದ ನಂತರವೂ ಬ್ಯಾಂಕುಗಳು ತಮ್ಮ ಬಡ್ಡಿ ದರಗಳನ್ನು ನಿರಂತರವಾಗಿ ಹೆಚ್ಚಿಸುತ್ತಿವೆ. ಇದರಿಂದ ಗ್ರಾಹಕರು ದುಬಾರಿ ಬಡ್ಡಿ ತೆರಬೇಕಾಗಿದೆ.

ಎಚ್‌ಡಿಎಫ್‌ಸಿ ಬಡ್ಡಿದರವೂ ಸಹ ಬಡ್ಡಿ ದರ ಏರಿಕೆ ಮಾಡಿದೆ

ಎಸ್‌ಬಿಐಗಿಂತ ಮೊದಲು ಖಾಸಗಿ ವಲಯದ ಅತಿದೊಡ್ಡ ಬ್ಯಾಂಕ್ ಎಚ್‌ಡಿಎಫ್‌ಸಿ ಬ್ಯಾಂಕ್ ಕೂಡ ತನ್ನ ಬಡ್ಡಿದರಗಳನ್ನು ಹೆಚ್ಚಿಸಿತ್ತು. ಎಚ್‌ಡಿಎಫ್‌ಸಿ ಬ್ಯಾಂಕ್ ಎಂಸಿಎಲ್‌ಆರ್ ಅನ್ನು ಶೇ. 0.15 ರಷ್ಟು ಹೆಚ್ಚಿಸಿದೆ. ಕೆಲವು ಆಯ್ದ ಅವಧಿಯ ಸಾಲಗಳ ಮೇಲೆ ಈ ಹೆಚ್ಚಳ ಮಾಡಲಾಗಿದೆ. ಹೊಸ ದರಗಳು ಜುಲೈ 7, 2023 ರಿಂದಲೇ ಜಾರಿಗೆ ಬಂದಿವೆ.

andolanait

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

5 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

5 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

5 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

5 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

5 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

5 hours ago