BREAKING NEWS

ಬಡ್ಡಿ ದರ ಏರಿಕೆ ಮಾಡಿದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ

ಸಾರ್ವಜನಿಕ ವಲಯದ ಅತಿ ದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತೆ ತನ್ನ ಸಾಲದ ಮೇಲಿನ ಬಡ್ಡಿ ದರವನ್ನು ಏರಿಕೆ ಮಾಡಿದೆ. ಈ ಮೂಲಕ ಕೋಟಿಗಟ್ಟಲೆ ಗ್ರಾಹಕರಿಗೆ ಆಘಾತ ನೀಡಿದೆ. ಬ್ಯಾಂಕ್ ತನ್ನ ಕನಿಷ್ಠ ವೆಚ್ಚದ ಸಾಲದ ದರವನ್ನು 5 ಮೂಲ ಅಂಕಗಳಷ್ಟು ಹೆಚ್ಚಿಸಿದೆ. ಈ ಹೊಸ ದರಗಳು ಇದೇ ಜುಲೈ 15, 2023ರಿಂದ ಜಾರಿಗೆ ಬರಲಿವೆ.

ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾದ ಮಾಹಿತಿಯ ಪ್ರಕಾರ ವಿವಿಧ ಅವಧಿಗಳ ಎಂಸಿಎಲ್‌ಆರ್‌ ಶೇ. 8 ರಿಂದ ಶೇ. 8.75ರವರೆಗೆ ಇರಲಿದೆ. ಈ ಹೆಚ್ಚಳದ ನಂತರ, ಗೃಹ ಸಾಲ, ವಾಹನ ಸಾಲ, ಶಿಕ್ಷಣ ಸಾಲ, ವೈಯಕ್ತಿಕ ಸಾಲ ಇತ್ಯಾದಿಗಳ ಮಾಸಿಕ ಕಂತು ಅಂದರೆ ಇಎಂಐ ಹೊರೆ ಹೆಚ್ಚಲಿದೆ.

ಈ ಪರಿಷ್ಕರಣೆಯೊಂದಿಗೆ ಒಂದು ವರ್ಷದ ಅವಧಿಯ ಎಂಸಿಎಲ್‌ಆರ್ ಈ ಹಿಂದಿನ ಶೇ. 8.50 ರಿಂದ ಶೇ. 8.55ಕ್ಕೆ ಏರಿಕೆಯಾಗಿದೆ. ಹೆಚ್ಚಿನ ಸಾಲಗಳು ಒಂದು ವರ್ಷದ ಎಂಸಿಎಲ್‌ಆರ್ ದರಕ್ಕೆ ಸಂಬಂಧಿಸಿರುತ್ತವೆ. ಹೀಗಾಗಿ ಇದು ಗ್ರಾಹಕರ ಮೇಲೆ ನೇರ ಪರಿಣಾಮ ಬೀರಲಿದೆ.

ಒಂದು ತಿಂಗಳು ಮತ್ತು ಮೂರು ತಿಂಗಳ ಎಂಸಿಎಲ್‌ಆರ್‌ ಕ್ರಮವಾಗಿ 5 ಮೂಲ ಅಂಕಗಳ ಹೆಚ್ಚಳದೊಂದಿಗೆ ಶೇ. 8 ಮತ್ತು ಶೇ. 8.15ಕ್ಕೆ ತಲುಪಿದೆ. ಇದೇ ವೇಳೆ ಆರು ತಿಂಗಳ ಎಂಸಿಎಲ್‌ಆರ್‌ ಶೇ. 8.45ಕ್ಕೆ ಮುಟ್ಟಿದೆ.

ಇನ್ನು ಎರಡು ವರ್ಷಗಳ ಎಂಸಿಎಲ್‌ಆರ್‌ ಸಹ 5 ಮೂಲ ಅಂಕಗಳ ಹೆಚ್ಚಳದೊಂದಿಗೆ ಶೇ. 8.65ಕ್ಕೆ ತಲುಪಿದ್ದರೆ, ಮೂರು ವರ್ಷಗಳ ಎಂಸಿಎಲ್‌ಆರ್‌ ಶೇ. 8.75ಕ್ಕೆ ಏರಿಕೆ ಕಂಡಿದೆ.

ರೆಪೋ ದರ ಸ್ಥಿರವಾದ ನಂತರವೂ ಹೆಚ್ಚುತ್ತಿದೆ ಬಡ್ಡಿ ದರ

ಹಣದುಬ್ಬರ ಈಗಾಗಲೇ ಒಂದು ಹಂತಕ್ಕೆ ನಿಯಂತ್ರಣಕ್ಕೆ ಬಂದಿದ್ದು, ಇದಾದ ಬಳಿಕ ರಿಸರ್ವ್ ಬ್ಯಾಂಕ್ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ರೆಪೋ ದರ ಶೇ. 6.50ರಲ್ಲೇ ಸ್ಥಿರವಾಗಿದೆ. ಆದರೆ ಹೀಗಿದ್ದೂ ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿ ದರಗಳನ್ನು ಏರಿಕೆ ಮಾಡುತ್ತಿವೆ.

ಮತ್ತೊಂದೆಡೆ ಮೇ 2022 ರಿಂದ ಇಲ್ಲಿಯವರೆಗೆ, ಕೇಂದ್ರ ಬ್ಯಾಂಕ್ ರೆಪೋ ದರವನ್ನು ಒಟ್ಟು 2.50 ಪ್ರತಿಶತದಷ್ಟು ಹೆಚ್ಚಿಸಿದೆ. ಆದರೆ ಇತ್ತೀಚಿನ ತಿಂಗಳುಗಳಲ್ಲಿ ಹಣದುಬ್ಬರ ನಿಯಂತ್ರಣಕ್ಕೆ ಬಂದ ಬಳಿಕ ರಿಸರ್ವ್ ಬ್ಯಾಂಕ್ ರೆಪೋ ದರದಲ್ಲಿ ಯಾವುದೇ ಬದಲಾವಣೆಯನ್ನು ಮಾಡಿಲ್ಲ. ಈ ನಿರ್ಧಾರದ ನಂತರವೂ ಬ್ಯಾಂಕುಗಳು ತಮ್ಮ ಬಡ್ಡಿ ದರಗಳನ್ನು ನಿರಂತರವಾಗಿ ಹೆಚ್ಚಿಸುತ್ತಿವೆ. ಇದರಿಂದ ಗ್ರಾಹಕರು ದುಬಾರಿ ಬಡ್ಡಿ ತೆರಬೇಕಾಗಿದೆ.

ಎಚ್‌ಡಿಎಫ್‌ಸಿ ಬಡ್ಡಿದರವೂ ಸಹ ಬಡ್ಡಿ ದರ ಏರಿಕೆ ಮಾಡಿದೆ

ಎಸ್‌ಬಿಐಗಿಂತ ಮೊದಲು ಖಾಸಗಿ ವಲಯದ ಅತಿದೊಡ್ಡ ಬ್ಯಾಂಕ್ ಎಚ್‌ಡಿಎಫ್‌ಸಿ ಬ್ಯಾಂಕ್ ಕೂಡ ತನ್ನ ಬಡ್ಡಿದರಗಳನ್ನು ಹೆಚ್ಚಿಸಿತ್ತು. ಎಚ್‌ಡಿಎಫ್‌ಸಿ ಬ್ಯಾಂಕ್ ಎಂಸಿಎಲ್‌ಆರ್ ಅನ್ನು ಶೇ. 0.15 ರಷ್ಟು ಹೆಚ್ಚಿಸಿದೆ. ಕೆಲವು ಆಯ್ದ ಅವಧಿಯ ಸಾಲಗಳ ಮೇಲೆ ಈ ಹೆಚ್ಚಳ ಮಾಡಲಾಗಿದೆ. ಹೊಸ ದರಗಳು ಜುಲೈ 7, 2023 ರಿಂದಲೇ ಜಾರಿಗೆ ಬಂದಿವೆ.

andolanait

Recent Posts

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

1 hour ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

2 hours ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

3 hours ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

3 hours ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

19 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

21 hours ago