ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ರಾಜ್ಯದೆಲ್ಲೆಡೆ ಕಾವೇರಿ ಕಿಚ್ಚು ಭುಗಿಲೆದ್ದಿದೆ. ಮಂಡ್ಯ, ರಾಮನಗರದಲ್ಲಿ ಉಗ್ರ ಪ್ರತಿಭಟನೆಗಳು ಮುಂದುವರೆದಿವೆ. ಇದರ ನಡುವೆ ಕಾವೇರಿ ನದಿ ನೀರಿನ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಕ್ತದ ಮೂಲಕ ಪತ್ರ ಬರೆದು ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರು ಅಭಿಯಾನ ಆರಂಭಿಸಿದ್ದಾರೆ. ಕಾವೇರಿ ನಮ್ಮದು. ಕಾವೇರಿ ವಿಚಾರವಾಗಿ ರಾಜ್ಯಕ್ಕೆ ನ್ಯಾಯ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರು ರಕ್ತದಲ್ಲಿ ಪತ್ರ ಬರೆದು ಮನವಿ ಮಾಡಿದ್ದಾರೆ.
ಕರವೇ ನಾರಾಯಣ ಗೌಡ ಅವರು ರಕ್ತದ ಮೂಲಕ ಸುಮಾರು 75 ಪದ ಬರೆದು ಮೋದಿ ಅವರಿಗೆ ಕಾವೇರಿ ನೀರಿಗಾಗಿ ಮನವಿ ಮಾಡಿದ್ದಾರೆ. ಕರವೇ ಕಾರ್ಯಕರ್ತರಿಂದಲೂ ರಕ್ತದ ಮೂಲಕ 5 ಪದ ಬರೆದು ಪತ್ರ ಫೋಸ್ಟ್ ಮಾಡಲಾಗಿದೆ. ಪ್ರಧಾನಿಗಳೇ ಕಾವೇರಿ ವಿಚಾರದಲ್ಲಿ ಮಧ್ಯ ಪ್ರವೇಶಿಸಿ ಅಂತ ಗಾಂಧೀನಗರದ ಕರವೇ ಕೇಂದ್ರ ಕಚೇರಿಯಲ್ಲಿ ರಕ್ತದಲ್ಲಿ ಪತ್ರ ಬರೆದು ಚಳುವಳಿ ಆರಂಭಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ರಕ್ತದಲ್ಲಿ ಪತ್ರ ಬರೆದು ಅಭಿಯಾನ ಮಾಡಲಾಗುತ್ತದೆ. ಒಂದು ಲಕ್ಷಕ್ಕೂ ಅಧಿಕ ರಕ್ತದ ಪತ್ರವನ್ನು ಬರೆದು ಕೂಡಲೇ ಪ್ರಧಾನಿ ಕಚೇರಿ ವಿಳಾಸಕ್ಕೆ ಪೋಸ್ಟ್ ಮಾಡಲು ಕರವೇ ಮುಂದಾಗಿದೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…