BREAKING NEWS

ಬಿಡದಿಯಲ್ಲಿ ರಾಜ್ಯದ ಪ್ರಥಮ ತ್ಯಾಜ್ಯ ಇಂಧನ ಘಟಕ ಸ್ಥಾಪನೆ: ಸಚಿವ ಜಾರ್ಜ್

ರಾಮನಗರ: ಜಿಲ್ಲೆಯ ಬಿಡದಿಯ ಬಳಿ ರಾಜ್ಯದ ಪ್ರಥಮ ತ್ಯಾಜ್ಯ ಇಂಧನ ಘಟಕ ಆರಂಭವಾಗಲಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ತಿಳಿಸಿದ್ದಾರೆ. ಬಿಬಿಎಂಪಿ ಮತ್ತು ಕೆಪಿಟಿಸಿಎಲ್ ಸಹೋಯೋಗದೊಂದಿಗೆ ಪ್ರಾಯೋಗಿಕವಾಗಿ ಒಂದು ಸ್ಥಾವರ ನಿರ್ಮಿಸುತ್ತಿದ್ದು, ಅದರ ವಿದ್ಯುತ್ ಉತ್ಪಾದನಾ‌ ಸಾಮರ್ಥ್ಯ ತಿಳಿದು ಮತ್ತಷ್ಟು ಸ್ಥಾವರ ನಿರ್ಮಾಣ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಬಿಡದಿ ಪಟ್ಟಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಥಮ ಬಾರಿಗೆ ರಾಜ್ಯದಲ್ಲಿ ತಾಜ್ಯ ಇಂಧನ ಘಟಕ ಆರಂಭವಾಲಿದೆ. ಬಿಡದಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಿರ್ಮಾಣವಾಗುತ್ತಿದ್ದು ಅಕ್ಟೋಬರ್ ತಿಂಗಳಲ್ಲಿ ಕಾರ್ಯಾರಂಭ ಆಗಲಿದೆ ಎಂದರು.

600 ಟನ್ ಸಾಮರ್ಥ್ಯದ ಘಟಕ : 15 ಎಕರೆ‌ ವಿಸ್ತೀರ್ಣದ ಜಾಗದಲ್ಲಿ ಸುಮಾರು 280 ಕೋಟಿ ವೆಚ್ಚದಲ್ಲಿ ಘಟಕ ನಿರ್ಮಾಣವಾಗುತ್ತಿದೆ. 600 ಟನ್ ಸಾಮರ್ಥ್ಯ ಇರೋ ಇಂಧನ ಘಟಕ ಇದಾಗಿದ್ದು ಇಲ್ಲಿ 11.5 ಮೆಗಾ ವ್ಯಾಟ್ ಪವರ್ ಉತ್ಪಾದನೆಯಾಗುತ್ತದೆ. ಪ್ರತಿ ದಿನ ಬೆಂಗಳೂರಿನಲ್ಲಿ 6 ಸಾವಿರ ಟನ್ ಕಸ ಉತ್ಪಾದನೆಯಾಗುತ್ತದೆ. ಏಳು ಪ್ಲಾಂಟ್ ನಲ್ಲಿ ಹಸಿ ಕಸವನ್ನು ಕಂಪ್ರೆಸ್ ಮಾಡಲಾಗುತ್ತಿದೆ. ಬಂಡೂರು, ಟೆರಾಫಾರಂನಲ್ಲಿ ಅವೈಜ್ಞಾನಿಕವಾಗಿ ಕಸ ಸುರಿಯಲಾಗುತ್ತಿತು. ಹಿಂದೆ ನಾನು ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿದ್ದ ವೇಳೆ ಈ ಬಗ್ಗೆ ಚಿಂತಿಸಲಾಗಿತ್ತು ಎಂದು ಹೇಳಿದರು.

ವಿದೇಶಗಳಲ್ಲಿ ಹೇಗೆ ಕೆಲಸಗಳು ನಡೆಯುತ್ತವೆ ಎಂಬುದನ್ನು ನೋಡಿದ್ದೇವೆ. ಫಾರಿನ್‌ಗಿಂತ ಇಲ್ಲೆ ಚೆನ್ನಾಗಿ ಕೆಲಸ ಆಗುತ್ತಿದೆ. ಬಿಬಿಎಂಪಿ ಮತ್ತು ಕೆಪಿಟಿಸಿಎಲ್ ಸಹೋಯೋಗದೊಂದಿಗೆ ಈ ಸ್ಥಾವರ ನಿರ್ಮಿಸುತ್ತಿದ್ದೆವೆ. ಇಲ್ಲಿ ಕಸದ ವಾಸನೆ ಬರುವುದಿಲ್ಲ. ಪ್ರಾಯೋಗಿಕವಾಗಿ ಒಂದು ಸ್ಥಾವರಕ್ಕೆ ಆರಂಭವಾಗಲಿದೆ. ವಿದ್ಯುತ್ ಉತ್ಪಾದನಾ‌ ಸಾಮರ್ಥ್ಯ ತಿಳಿದು ಮತ್ತಷ್ಟು ಸ್ಥಾವರ ನಿರ್ಮಾಣವ ಯೋಜನೆ‌ ಇದೆ.

ಪ್ರತಿದಿನ 2.76 ಲಕ್ಷ ಯೂನಿಟ್ ಉತ್ಪಾದನೆ : ಎಲ್ಲ ಜಿಲ್ಲೆಯ ಕಸದ ಸಮಸ್ಯೆಯನ್ನು ಈ ರೀತಿ ನಿವಾರಣೆ ಆಗುತ್ತದೆ. ಪ್ರತಿ ಯುನಿಟ್ ಗೆ 8 ರೂ ಖರ್ಚಾಗಲಿದೆ. ಪ್ರತಿದಿನ 2.76 ಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆಯಾಗಲಿದೆ. ಇದು ಪೈಲೆಟ್ ಪ್ರಾಜೆಕ್ಟ್ ಮಾಡಿದ್ದು ಸ್ಥಳೀಯ ಕಸಕ್ಕೂ ಅವಕಾಶ ನೀಡಲಾಗುವುದು ಎಂದರು.

ಇನ್ನು ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚ ಆರೋಪ ವಿಚಾರವಾಗಿ ಮಾತನಾಡಿದ ಅವರು, ಆರೋಪ ಮಾಡುವವರು ಸಾಕ್ಷಿ ನೀಡಬೇಕು ಎಂದು ಆಗ್ರಹಿಸಿದರು. ಆರೋಪ ಮಾಡುವುದು ಸುಲಭ. ಆರೋಪದಲ್ಲಿ ಹುರುಳಿಲ್ಲ ಎಂದು ಚಲುವರಾಯಸ್ವಾಮಿ ಅಸೆಂಬ್ಲಿಯಲ್ಲೇ ಹೇಳಿದ್ದು ಈಗಾಗಲೇ ಸಿಎಂ ತನಿಖೆಗೆ ಆದೇಶಿದ್ದಾರೆ ಎಂದು ಜಾರ್ಜ್ ತಮ್ಮ ಸಂಪುಟದ ಸಚಿವರ ಬೆಂಬಲಕ್ಕೆ ನಿಂತರು.

ಸಿಎಂ‌ ಸಿದ್ದರಾಮಯ್ಯ ಲಜ್ಜೆಗೆಟ್ಟ ಸಿಎಂ ಎಂದಿದ್ದ ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಅವರು,
ಕುಮಾರಸ್ವಾಮಿ ಅವರ ಮಾತುಗಳು ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಟೀಕಿಸಿದರು.

ಪೆನ್ ಡ್ರೈವ್ ನಲ್ಲಿ ಏನಿದೆ ಎಂದು ತೋರಿಸಲಿ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಲಂಚದ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿ, ಡಿಸಿಎಂ ಸಹ ಉತ್ತರ ನೀಡಿದ್ದಾರೆ. ಇದನ್ನು ಅವರನ್ನೆ ಕೇಳಿ. ಕುಮಾರಸ್ವಾಮಿ ಬರೀ ಆರೋಪಗಳನ್ನ ಮಾಡುತ್ತಾರೆ. ಅದನ್ನ ಯಾರಾದ್ರೂ ಸಾಬೀತು ಮಾಡಿದ್ದರಾ? ಪೆನ್ ಡ್ರೈ ನಲ್ಲಿ ಏನಿದೆ ಎಂಬುದನ್ನು ಅವರು ತೋರಿಸಿಲ್ಲ‌ ಎಂದು ಕುಟುಕಿದರು.

ಶೇ.40 ರಷ್ಟು ಸರಕಾರ ಎಂದು ಹೇಳಿದ್ದು ನಾವಲ್ಲ. ಅದನ್ನ ಹೇಳಿದ್ದು ಗುತ್ತಿಗೆದಾರರು. ಬಿಜೆಪಿ ಅವರದ್ದೇ ಸರ್ಕಾರ ಇದ್ದಾಗ ತನಿಖೆ ಮಾಡಬಹುದಾಗಿತ್ತು. ಯಾಕೆ ಅವರು ತನಿಖೆ ಮಾಡಲಿಲ್ಲ? ನಮ್ಮ ಸರಕಾರ ಈಗಾಗಲೇ ನಿರ್ಣಯ ಕೈಗೊಂಡಿದೆ. ತನಿಖೆ ನಡೆಸಿ ಲೀಗಲ್ ಆಗಿ ಕ್ರಮ‌ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

andolanait

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

9 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

9 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

10 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

10 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

11 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

11 hours ago