BREAKING NEWS

ಬಿಡದಿಯಲ್ಲಿ ರಾಜ್ಯದ ಪ್ರಥಮ ತ್ಯಾಜ್ಯ ಇಂಧನ ಘಟಕ ಸ್ಥಾಪನೆ: ಸಚಿವ ಜಾರ್ಜ್

ರಾಮನಗರ: ಜಿಲ್ಲೆಯ ಬಿಡದಿಯ ಬಳಿ ರಾಜ್ಯದ ಪ್ರಥಮ ತ್ಯಾಜ್ಯ ಇಂಧನ ಘಟಕ ಆರಂಭವಾಗಲಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ತಿಳಿಸಿದ್ದಾರೆ. ಬಿಬಿಎಂಪಿ ಮತ್ತು ಕೆಪಿಟಿಸಿಎಲ್ ಸಹೋಯೋಗದೊಂದಿಗೆ ಪ್ರಾಯೋಗಿಕವಾಗಿ ಒಂದು ಸ್ಥಾವರ ನಿರ್ಮಿಸುತ್ತಿದ್ದು, ಅದರ ವಿದ್ಯುತ್ ಉತ್ಪಾದನಾ‌ ಸಾಮರ್ಥ್ಯ ತಿಳಿದು ಮತ್ತಷ್ಟು ಸ್ಥಾವರ ನಿರ್ಮಾಣ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಬಿಡದಿ ಪಟ್ಟಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಥಮ ಬಾರಿಗೆ ರಾಜ್ಯದಲ್ಲಿ ತಾಜ್ಯ ಇಂಧನ ಘಟಕ ಆರಂಭವಾಲಿದೆ. ಬಿಡದಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಿರ್ಮಾಣವಾಗುತ್ತಿದ್ದು ಅಕ್ಟೋಬರ್ ತಿಂಗಳಲ್ಲಿ ಕಾರ್ಯಾರಂಭ ಆಗಲಿದೆ ಎಂದರು.

600 ಟನ್ ಸಾಮರ್ಥ್ಯದ ಘಟಕ : 15 ಎಕರೆ‌ ವಿಸ್ತೀರ್ಣದ ಜಾಗದಲ್ಲಿ ಸುಮಾರು 280 ಕೋಟಿ ವೆಚ್ಚದಲ್ಲಿ ಘಟಕ ನಿರ್ಮಾಣವಾಗುತ್ತಿದೆ. 600 ಟನ್ ಸಾಮರ್ಥ್ಯ ಇರೋ ಇಂಧನ ಘಟಕ ಇದಾಗಿದ್ದು ಇಲ್ಲಿ 11.5 ಮೆಗಾ ವ್ಯಾಟ್ ಪವರ್ ಉತ್ಪಾದನೆಯಾಗುತ್ತದೆ. ಪ್ರತಿ ದಿನ ಬೆಂಗಳೂರಿನಲ್ಲಿ 6 ಸಾವಿರ ಟನ್ ಕಸ ಉತ್ಪಾದನೆಯಾಗುತ್ತದೆ. ಏಳು ಪ್ಲಾಂಟ್ ನಲ್ಲಿ ಹಸಿ ಕಸವನ್ನು ಕಂಪ್ರೆಸ್ ಮಾಡಲಾಗುತ್ತಿದೆ. ಬಂಡೂರು, ಟೆರಾಫಾರಂನಲ್ಲಿ ಅವೈಜ್ಞಾನಿಕವಾಗಿ ಕಸ ಸುರಿಯಲಾಗುತ್ತಿತು. ಹಿಂದೆ ನಾನು ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿದ್ದ ವೇಳೆ ಈ ಬಗ್ಗೆ ಚಿಂತಿಸಲಾಗಿತ್ತು ಎಂದು ಹೇಳಿದರು.

ವಿದೇಶಗಳಲ್ಲಿ ಹೇಗೆ ಕೆಲಸಗಳು ನಡೆಯುತ್ತವೆ ಎಂಬುದನ್ನು ನೋಡಿದ್ದೇವೆ. ಫಾರಿನ್‌ಗಿಂತ ಇಲ್ಲೆ ಚೆನ್ನಾಗಿ ಕೆಲಸ ಆಗುತ್ತಿದೆ. ಬಿಬಿಎಂಪಿ ಮತ್ತು ಕೆಪಿಟಿಸಿಎಲ್ ಸಹೋಯೋಗದೊಂದಿಗೆ ಈ ಸ್ಥಾವರ ನಿರ್ಮಿಸುತ್ತಿದ್ದೆವೆ. ಇಲ್ಲಿ ಕಸದ ವಾಸನೆ ಬರುವುದಿಲ್ಲ. ಪ್ರಾಯೋಗಿಕವಾಗಿ ಒಂದು ಸ್ಥಾವರಕ್ಕೆ ಆರಂಭವಾಗಲಿದೆ. ವಿದ್ಯುತ್ ಉತ್ಪಾದನಾ‌ ಸಾಮರ್ಥ್ಯ ತಿಳಿದು ಮತ್ತಷ್ಟು ಸ್ಥಾವರ ನಿರ್ಮಾಣವ ಯೋಜನೆ‌ ಇದೆ.

ಪ್ರತಿದಿನ 2.76 ಲಕ್ಷ ಯೂನಿಟ್ ಉತ್ಪಾದನೆ : ಎಲ್ಲ ಜಿಲ್ಲೆಯ ಕಸದ ಸಮಸ್ಯೆಯನ್ನು ಈ ರೀತಿ ನಿವಾರಣೆ ಆಗುತ್ತದೆ. ಪ್ರತಿ ಯುನಿಟ್ ಗೆ 8 ರೂ ಖರ್ಚಾಗಲಿದೆ. ಪ್ರತಿದಿನ 2.76 ಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆಯಾಗಲಿದೆ. ಇದು ಪೈಲೆಟ್ ಪ್ರಾಜೆಕ್ಟ್ ಮಾಡಿದ್ದು ಸ್ಥಳೀಯ ಕಸಕ್ಕೂ ಅವಕಾಶ ನೀಡಲಾಗುವುದು ಎಂದರು.

ಇನ್ನು ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚ ಆರೋಪ ವಿಚಾರವಾಗಿ ಮಾತನಾಡಿದ ಅವರು, ಆರೋಪ ಮಾಡುವವರು ಸಾಕ್ಷಿ ನೀಡಬೇಕು ಎಂದು ಆಗ್ರಹಿಸಿದರು. ಆರೋಪ ಮಾಡುವುದು ಸುಲಭ. ಆರೋಪದಲ್ಲಿ ಹುರುಳಿಲ್ಲ ಎಂದು ಚಲುವರಾಯಸ್ವಾಮಿ ಅಸೆಂಬ್ಲಿಯಲ್ಲೇ ಹೇಳಿದ್ದು ಈಗಾಗಲೇ ಸಿಎಂ ತನಿಖೆಗೆ ಆದೇಶಿದ್ದಾರೆ ಎಂದು ಜಾರ್ಜ್ ತಮ್ಮ ಸಂಪುಟದ ಸಚಿವರ ಬೆಂಬಲಕ್ಕೆ ನಿಂತರು.

ಸಿಎಂ‌ ಸಿದ್ದರಾಮಯ್ಯ ಲಜ್ಜೆಗೆಟ್ಟ ಸಿಎಂ ಎಂದಿದ್ದ ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಅವರು,
ಕುಮಾರಸ್ವಾಮಿ ಅವರ ಮಾತುಗಳು ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಟೀಕಿಸಿದರು.

ಪೆನ್ ಡ್ರೈವ್ ನಲ್ಲಿ ಏನಿದೆ ಎಂದು ತೋರಿಸಲಿ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಲಂಚದ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿ, ಡಿಸಿಎಂ ಸಹ ಉತ್ತರ ನೀಡಿದ್ದಾರೆ. ಇದನ್ನು ಅವರನ್ನೆ ಕೇಳಿ. ಕುಮಾರಸ್ವಾಮಿ ಬರೀ ಆರೋಪಗಳನ್ನ ಮಾಡುತ್ತಾರೆ. ಅದನ್ನ ಯಾರಾದ್ರೂ ಸಾಬೀತು ಮಾಡಿದ್ದರಾ? ಪೆನ್ ಡ್ರೈ ನಲ್ಲಿ ಏನಿದೆ ಎಂಬುದನ್ನು ಅವರು ತೋರಿಸಿಲ್ಲ‌ ಎಂದು ಕುಟುಕಿದರು.

ಶೇ.40 ರಷ್ಟು ಸರಕಾರ ಎಂದು ಹೇಳಿದ್ದು ನಾವಲ್ಲ. ಅದನ್ನ ಹೇಳಿದ್ದು ಗುತ್ತಿಗೆದಾರರು. ಬಿಜೆಪಿ ಅವರದ್ದೇ ಸರ್ಕಾರ ಇದ್ದಾಗ ತನಿಖೆ ಮಾಡಬಹುದಾಗಿತ್ತು. ಯಾಕೆ ಅವರು ತನಿಖೆ ಮಾಡಲಿಲ್ಲ? ನಮ್ಮ ಸರಕಾರ ಈಗಾಗಲೇ ನಿರ್ಣಯ ಕೈಗೊಂಡಿದೆ. ತನಿಖೆ ನಡೆಸಿ ಲೀಗಲ್ ಆಗಿ ಕ್ರಮ‌ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

andolanait

Recent Posts

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

57 mins ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

2 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

4 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

4 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

5 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

6 hours ago