BREAKING NEWS

ಅತಿಯಾದ ಕಠಿಣ ಶಿಕ್ಷೆ ಬಿಡಿ- ಮಕ್ಕಳಿಗೆ ಕಲಿಸುವುದರತ್ತ ಗಮನ ಕೊಡಿ: ಶಾಲೆಗಳಿಗೆ ಹೈಕೋರ್ಟ್ ತಪರಾಕಿ

ಬೆಂಗಳೂರು:  ಶಾಲೆಯಿಂದ ಸಸ್ಪೆಂಡ್ ಮಾಡಿದ್ದಕ್ಕೆ ಮನನೊಂದು ಕೊಡಗು ಜಿಲ್ಲೆಯ ಪ್ರತಿಷ್ಠಿತ ಖಾಸಗಿ ಶಾಲೆಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊಡಗು ಶಾಲೆಯೊಂದರ ಪ್ರಾಂಶುಪಾಲ, ವಾರ್ಡನ್ ಮತ್ತು ನಿರ್ದೇಶಕರ ಪರ ಪೊಲೀಸರು ಬಿ.ರಿಪೋರ್ಟ್  ಸಲ್ಲಿಸಿದ್ದರು.

ಆದರೆ ಈ ಬಿ ರಿಪೋರ್ಟ್ ವರದಿಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತಿರಸ್ಕರಿಸಿತ್ತು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದವು, ಈ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ಕೊಡಗಿನ ಪ್ರತಿಷ್ಠಿತ ಶಾಲೆಯಲ್ಲಿ 9 ನೇ ತರಗತಿಯಲ್ಲಿದ್ದ 15 ವರ್ಷದ ಹುಡುಗ, 2022 ರ ಅಕ್ಟೋಬರ್ 24 ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಅಶಿಸ್ತಿನ ಹಿನ್ನೆಲೆಯಲ್ಲಿ ಆತನನ್ನು ಶಾಲೆಯಿಂದ 21 ದಿನಗಳ ಕಾಲ ಅಮಾನತು ಮಾಡಲಾಗಿತ್ತು,  ಸಸ್ಪೆಂಡ್ ಮಾಡಿದ ನಂತರ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ಹೇಳಿದ್ದ ಶಾಲೆಯ ಆಡಳಿತ ಮಂಡಳಿ ಆನ್‌ಲೈನ್‌ನಲ್ಲಿ ಪ್ರಶ್ನೆ ಪತ್ರಿಕೆ ಕಳುಹಿಸುವುದಾಗಿ ಭರವಸೆ ನೀಡಿತ್ತು. ಆದರೆ ಗಂಟೆ ಗಟ್ಟಲೆ ಕಾದರು ಆತನಿಗೆ ಪ್ರಶ್ನೆ ಪತ್ರಿಕೆ ಕಳುಹಿಸಿರಲಿಲ್ಲ.

9ನೇ ತರಗತಿ ವಿದ್ಯಾರ್ಥಿ ಬೆಳಿಗ್ಗೆ 10.10 ರಿಂದ 12.30 ರವರೆಗೆ ಕಂಪ್ಯೂಟರ್ ಮುಂದೆ ಕುಳಿತು ಪ್ರಶ್ನೆ ಪತ್ರಿಕೆ ಲಿಂಕ್ ಗಾಗಿ ಕಾಯುತ್ತಿದ್ದ, ಆದರೆ ಶಾಲೆಯವರು ಅದನ್ನು ಕಳುಹಿಸಲಿಲ್ಲ. ಪರೀಕ್ಷೆಯ ಸಮಯ ಮತ್ತು ಉತ್ತರ ಪತ್ರಿಕೆ ಸಂಗ್ರಹ ಮುಗಿದಿತ್ತು. ಇದರಿಂದ ಮನನೊಂದ ಬಾಲಕ ಮಧ್ಯಾಹ್ನ 12.30ರಿಂದ 1 ಗಂಟೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದ, ಬಳಿಕ ಆತನ ಪೋಷಕರು ದೂರು ದಾಖಲಿಸಿದ್ದರು.

ಶಾಲೆಯ ಹಿರಿಯ ವಿದ್ಯಾರ್ಥಿ ಆದೇಶದ ಮೇರೆಗೆ ಮೃತ ವಿದ್ಯಾರ್ಥಿ ಮಿನರಲ್ ವಾಟರ್ ಬಾಟಲಿಯಲ್ಲಿ ಮದ್ಯವನ್ನು ಶಾಲೆಗೆ ಕೊಂಡೊಯ್ಯುತ್ತಿದ್ದ ವಿಚಾರ ಬೆಳಕಿಗೆ ಬಂದು ಆತನನ್ನು ಶಾಲೆಯಿಂದ ಅಮಾನತು ಮಾಡಲಾಗಿತ್ತು.  ನಂತರ ಪ್ರಕರಣ ದಾಖಲಾಗಿತ್ತು, ಆದರೆ ಪೊಲೀಸರು ಸರಿಯಾಗಿ ವಿಚಾರಣೆ ನಡೆಸದೆ ಪ್ರಕರಣಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು.

ಕೊಡಗಿನ ವಿಚಾರಣಾ ನ್ಯಾಯಾಲಯವು 2023 ರ ಮೇ 16 ರಂದು ಪೊಲೀಸರು ಸಲ್ಲಿಸಿದ್ದ ಬಿ. ರಿಪೋರ್ಟ್  ವರದಿಯನ್ನು ತಿರಸ್ಕರಿಸಿತ್ತು. ಮ್ಯಾಜಿಸ್ಟ್ರೇಟ್ ಕೋರ್ಟ್ ನ ಆದೇಶದ ವಿರುದ್ಧ  ಗೌರಮ್ಮ, ದಾತಾ ಕರುಂಬಯ್ಯ ಮತ್ತು ಚೇತನ್ ಬೋಪಣ್ಣ ಹೈಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಸಂಬಂಧಪಟ್ಟ ನ್ಯಾಯಾಲಯದ ಪ್ರಕ್ರಿಯೆಗಳಲ್ಲಿ ಮಧ್ಯಪ್ರವೇಶಿಸಿದರೆ ಮತ್ತು ಈ ಹಂತದಲ್ಲಿ ಆದೇಶವನ್ನು ರದ್ದುಗೊಳಿಸಲಾಗದು,  ಶಾಲೆಯ ಎಲ್ಲಾ ಕೃತ್ಯಗಳಿಗೆ ವಿಚಾರಣೆ ನಡೆಸದೆ ಬಿ ರಿಪೋರ್ಟ್ ಹಾಕಲು ಅನುಮತಿಸಲಾಗದು ಎಂದು ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಸೋಮವಾರ ಹೇಳಿದ್ದಾರೆ.

ಈ ರೀತಿಯ ಪ್ರಕರಣವು ನಕಾರಾತ್ಮಕ ಸ್ವ-ಮೌಲ್ಯಮಾಪನಕ್ಕೆ ಕಾರಣವಾಗುತ್ತದೆ ಎಂದು ನ್ಯಾಯಾಧೀಶರು ಗಮನ ಸೆಳೆದರು. ಇದರಿಂದ ಮಕ್ಕಳು ತಮ್ಮ ಬಗ್ಗೆ ಕೆಟ್ಟ ಭಾವನೆ ಹೊಂದುತ್ತಾರೆ. “ಶಿಕ್ಷಣ ಸಂಸ್ಥೆಗಳು, ಆದ್ದರಿಂದ, ಈ ಅತಿಯಾದ/ಕಠಿಣ ಶಿಸ್ತಿನ ವರ್ತನೆ ಬಿಡಬೇಕು,  ಬೇರೆ ರೀತಿಯಲ್ಲಿ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಬೇಕು, ಈ ರೀತಿ ಮಾಡಿದರೆ ಇದರಿಂದ ಯುವ ಆತ್ಮಗಳ ಜೀವಗಳು ಉಳಿಯುತ್ತವೆ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.

ಶಿಕ್ಷಣ ಸಂಸ್ಥೆಗಳು ಹಳೆಯ ತತ್ವಗಳು ಈಗ ಬದಲಾಗಿವೆ ಎಂಬುದನ್ನು ಗಮನಿಸಬೇಕು,  ಹಿಂದೆಲ್ಲ ರಾಡ್ ಬಿಟ್ಟು ಮಗುವಿಗೆ ಕಲಿಸಿ’ ಎಂದು ಎಂದು ನ್ಯಾಯಾಧೀಶರು ಸೂಚಿಸಿದರು. ಮಗುವು ತೊಂದರೆ ಕೊಟ್ಟರೆ, ಚೇಷ್ಟೆ ಮಾಡಿದರೆ ಅಮಾನತು ಮತ್ತು ಹೊರಹಾಕುವಿಕೆಯಂತಹ ಅತಿಯಾದ ಶಿಸ್ತಿನ ಕ್ರಮಗಳು ಕೆಲವೊಮ್ಮೆ ಮಗುವಿಗೆ ಸಹಾಯ ಮಾಡುವುದಿಲ್ಲ.  ಆದ್ದರಿಂದ, ಕಠಿಣ ಶಿಸ್ತನ್ನು ಜಾರಿಗೊಳಿಸುವ ಶಾಲೆಗಳು ಮಾದರಿ ಬದಲಾವಣೆಯ ಬಗ್ಗೆ ಯೋಚಿಸಬೇಕು ಎಂದಿದೆ.

andolanait

Recent Posts

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…

1 hour ago

ಟ್ರಂಪ್‌ ಸುಂಕ ರದ್ದುಪಡಿಸಿದ ಅಮೆರಿಕಾ ಸುಪ್ರೀಂಕೋರ್ಟ್‌ : ಭಾರತ ಹೇಳಿದ್ದೇನು?

ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…

2 hours ago

ಗಡಿ ಭದ್ರತೆಗೆ ಒತ್ತು : ತಮಿಳುನಾಡು ಚುನಾವಣೆಗೆ ಕರ್ನಾಟಕ ಪೊಲೀಸ್ ಸಹಕಾರ ಭರವಸೆ

ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…

2 hours ago

ಶಾರ್ಟ್ ಸರ್ಕ್ಯೂಟ್ : ಎಲೆಕ್ಟ್ರಾನಿಕ್ಸ್ ಅಂಗಡಿ ಸುಟ್ಟು ಭಸ್ಮ, ಲಕ್ಷಾಂತರ ರೂ. ನಷ್ಟ

ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…

3 hours ago

ಇವಿ ಹಬ್ ಆಗಿ ಕರ್ನಾಟಕ ರೂಪಾಂತರ ; ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…

3 hours ago

ಶೇ.10 ರಷ್ಟು ಜಾಗತಿಕ ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…

3 hours ago