ಇಂಫಾಲ: ರಾಜ್ಯದಲ್ಲಿ ಹಿಂಸಾಚಾರವನ್ನು ನಿಲ್ಲಿಸದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಸೋಮವಾರ ಜನರಿಗೆ ಎಚ್ಚರಿಕೆ ನೀಡಿದ್ದಾರೆ.
ಭಾನುವಾರ ರಾತ್ರಿ ಇಂಫಾಲ್ ವೆಸ್ಟ್ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ನಂತರ ಸೇನಾ ಯೋಧನಿಗೆ ಉಂಟಾದ ಗಾಯದ ಕುರಿತು ಅವರು ಪ್ರತಿಕ್ರಿಯಿಸಿ, ಹಿಂಸೆಯನ್ನು ನಿಲ್ಲಿಸಿ. ಇಲ್ಲದಿದ್ದರೆ, ಅವರು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ನಾನು ಜನರಿಗೆ ಮನವಿ ಮಾಡುತ್ತೇನೆ. ಶಸ್ತ್ರಾಸ್ತ್ರ ಹೊಂದಿರುವ ಮೈತೇಯ್ ಜನರು ಯಾವುದರ ಮೇಲೂ ದಾಳಿ ಮಾಡಬೇಡಿ ಮತ್ತು ಶಾಂತಿಯನ್ನು ಕಾಪಾಡಿ ಇದರಿಂದ ನಾವು ರಾಜ್ಯದಲ್ಲಿ ಸಹಜತೆಯನ್ನು ಪುನಃಸ್ಥಾಪಿಸಬಹುದು ”ಎಂದರು.
ಒಂದು ತಿಂಗಳ ಹಿಂದೆ ಮಣಿಪುರದಲ್ಲಿ ಮೈತೇಯ್ ಮತ್ತು ಕುಕಿ ಸಮುದಾಯದ ಜನರ ನಡುವೆ ಆರಂಭವಾದ ಜನಾಂಗೀಯ ಹಿಂಸಾಚಾರದಲ್ಲಿ 100 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈಶಾನ್ಯ ರಾಜ್ಯದಲ್ಲಿ ಶಾಂತಿ ಮರುಸ್ಥಾಪಿಸಲು ಸೇನೆ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…