BREAKING NEWS

ಬರನಿರ್ವಹಣೆ ಸೂಕ್ತ ಮುಂಜಾಗ್ರತಾ ಕ್ರಮ ವಹಿಸಲು ಕಟ್ಟುನಿಟ್ಟಿನ ಸೂಚನೆ : ಜಿಲ್ಲಾಧಿಕಾರಿಗಳ ಜತೆ ಸಿಎಂ ವಿಡಿಯೋ ಸಂವಾದ

ಮೈಸೂರು : ಈ ಬಾರಿ ಬರಗಾಲ ಎದುರಾಗಿದೆ. ಹಿಂಗಾರು ಹಾಗೂ ಮುಂಗಾರು ಮಳೆ ಕೊರತೆಯಾಗಿ ಬರಗಾಲ ಪರಿಸ್ಥಿತಿ ಉದ್ಭವಿಸಿದೆ. ಜೂನ್ ಅಂತ್ಯದವರೆಗೆ ಬರ ನಿರ್ವಹಣೆಗೆ ಸೂಕ್ತ ಯೋಜನೆ ರೂಪಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಕುಡಿಯುವ ನೀರು, ಬರ ನಿರ್ವಹಣೆ, ಕೃಷಿ, ಮೇವು ಹಾಗೂ ಉದ್ಯೋಗಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ನಡೆದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಕುಡಿಯುವ ನೀರು ಕೊರತೆ, ಬೆಳೆಹಾನಿ, ಮೇವು ಕೊರತೆ ಸೇರಿದಂತೆ ಇದುವರಗೆ ಆಗಿರುವ ಸಮಸ್ಯೆಗಳು ಮತ್ತು ಮುಂದೆ ಉಸ್ಭವಿಸಬಹುದಾದ ಸಮಸ್ಯೆಗಳ ನಿವಾರಣೆಗೆ ಈಗಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಬರಗಾಲದಿಂದ 48 ಲಕ್ಷ ಹೆಕ್ಟೇರ್ ಬೆಳೆಹಾನಿಯಾಗಿದೆ. ಮಾರ್ಚ್, ಏಪ್ರಿಲ್ ಹಾಗೂ‌ ಮೇ ತಿಂಗಳುಗಳಲ್ಲಿ ಪರಿಸ್ಥಿತಿ ಗಂಭೀರವಾಗಲಿದೆ.ಪೂರ್ವ ಮುಂಗಾರು ಮಳೆ ಕೆಲವೆಡೆ ನಿರೀಕ್ಷಿಸಲಾಗಿದೆ.

ಆದಾಗ್ಯೂ ಪ್ರತಿಯೊಂದು ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಸಿಇಓ ಪರಿಸ್ಥಿತಿಯನ್ನು ಅವಲೋಕಿಸಿ ಸೂಕ್ತ ಯೋಜನೆ ರೂಪಿಸಬೇಕು.
ಮಾಧ್ಯಮಗಳಲ್ಲಿ ಪ್ರಕಟವಾಗುವ ಜನರ‌ ಸಮಸ್ಯೆಗಳ ಕುರಿತ ವರದಿಗಳನ್ನು ಪರಿಶೀಲಿಸಿ, ಅವುಗಳಿಗೆ ತಕ್ಷಣವೇ ಸ್ಪಂದಿಸಬೇಕು ಎಂದರ.

ಕುಡಿಯುವ ನೀರಿನ ತೊಂದರೆಯಾಗಬಾರದು. ಟ್ಯಾಂಕರ್, ಖಾಸಗಿ ಕೊಳವೆಬಾವಿ ಸೇರಿದಂತೆ ಯಾವುದೇ ಜಲಮೂಲಗಳಿಂದ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು. ನೀರು ಪೂರೈಕೆಗೆ ಅಗತ್ಯವಿರುವ ಅನುದಾನವನ್ನು ರಾಜ್ಯ ಸರ್ಕಾರ ಒದಗಿಸಲಿದೆ ಎಂದು ತಿಳಿಸಿದರು.

ಬರಗಾಲ ಸಂದರ್ಭದಲ್ಲಿ ನರೇಗಾ ಉದ್ಯೋಗ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸಬೇಕು ಎಂದು ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ.

ನರೇಗಾ ಉದ್ಯೋಗ ದಿನಗಳನ್ನು ಹೆಚ್ಚಿಸುವುದರಿಂದ ಜನರು ಗುಳೆ ಹೋಗುವುದನ್ನು ತಪ್ಪಿಸಬಹುದು ಎಂದು ಮುಖ್ಯಮಂತ್ರಿಗಳು ಹೇಳಿದರು.

ಕುಡಿಯುವ ನೀರು ಸಮಸ್ಯೆ ಕಂಡುಬಂದಾಗ ಅಧಿಕಾರಿಗಳು ತಕ್ಷಣವೇ ಸ್ಪಂದಿಸಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ‌ ತೋರುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಜನರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಲು ಅನುಕೂಲವಾಗುವಂತೆ ತಾಲ್ಲೂಕು ಮಟ್ಟದಲ್ಲಿ ಕಂಟ್ರೋಲ್ ರೂಮ್ ಆರಂಭಿಸಬೇಕು.
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ರಜೆ ಮೇಲೆ ತೆರಳದೇ ಜನರ ಸಮಸ್ಯೆ ನಿವಾರಣೆಗೆ ಶ್ರಮಿಸಬೇಕು.

ತಾಲ್ಲೂಕುಮಟ್ಟದ ಟಾಸ್ಕ್ ಫೋರ್ಸ್ ಗಳು ನಿಯಮಿತವಾಗಿ ಸಭೆ ನಡೆಸುವ ಮೂಲಕ ಮುಂಜಾಗ್ರತಾ ಕ್ರಮಗಳ ಬಗ್ಗೆ ನಿರ್ಧರಿಸಬೇಕು ಎಂದು ಹೇಳಿದರು.

ಮೇವಿನ ಕಿಟ್ ಗಳನ್ನು ರೈತರಿಗೆ ನೀಡಲಾಗಿದೆ. ರೈತರಯ ಬೆಳೆದ ಮೇವು ಶೇಖರಣೆಗೆ ಕ್ರಮ ವಹಿಸಬೇಕು. ಇದಲ್ಲದೇ ಅಂತರ್ ಜಿಲ್ಲಾ ಮೇವು ಸಾಗಾಣಿಕೆ ಮೇಲೆ ನಿಗಾ ವಹಿಸಬೇಕು.

ಬರ ನಿರ್ವಹಣೆಗೆ ಸರಕಾರ‌ ಅನೇಕ ಕ್ರಮಗಳನ್ನು ಈಗಾಗಲೇ ತೆಗೆದುಕೊಂಡಿದೆ. ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದ ಈ ಬಾರಿ ಬರಗಾಲದ ತೀವ್ರತೆಯಲ್ಲಿಯೂ ಜನರಿಗೆ ಅನುಕೂಲವಾಗಿದೆ.

ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಪಿ.ಡಿ.ಖಾತೆಯಲ್ಲಿ ಅನುದಾನವಿದೆ. ಹೆಚ್ಚುವರಿಯಾಗಿ ಪ್ರತಿ ಜಿಲ್ಲೆಗೆ ಎರಡು ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದರು.

ವಿದ್ಯುಚ್ಛಕ್ತಿ ತೊಂದರೆಯಾಗಬಾರದು.‌ಹೊಸ ಕೊಳವೆಬಾವಿಗಳಿಗೆ ಯಾವುದೇ ನೆಪ ಹೇಳದೇ ಕೂಡಲೇ ವಿದ್ಯುತ್ ಸಂಪರ್ಕ ಒದಗಿಸಬೇಕು ಎಂದು ಕೆಪಿಟಿಎಸಿಎಲ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅಗತ್ಯ ಕಂಡುಬಂದರೆ ಖಾಸಗಿ ಕೊಳವೆಬಾವಿಗಳು ಹಾಗೂ ಟ್ಯಾಂಕರ್ ಗಳ ಮಾಲೀಕರ ಜತೆ ಮುಂಚಿವಾಗಿಯೇ ಒಪ್ಪಂದ ಮಾಡಿಕೊಳ್ಳಬೇಕು. ಹೀಗೆ ಮಾಡುವ ಮೂಲಕ ಜೂನ್ ಅಂತ್ಯದವರೆಗೆ ನೀರು ಕೊರತೆಯಾಗದಂತೆ ಎಚ್ಚರಿಕೆ ವಹಿಸಬಹುದು. ಇದರಲ್ಲಿ ನಿರ್ಲಕ್ಯ ತೋರುವ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಚುನಾವಣಾ ನೀತಿಸಂಹಿತೆ ಜಾರಿಯಾಗಲಿರುವುದರಿಂದ ಚುನಾವಣಾ ಕೆಲಸದ ಜತೆಗೆ ಬರ ನಿರ್ವಹಣೆಯನ್ನು ನಿರ್ಲಕ್ಷಿಸಬಾರದು. ಬರನಿರ್ವಹಣೆಗೆ ನೀತಿಸಂಹಿತೆಯು ಅಡ್ಡಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

andolana

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

6 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

6 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

7 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

7 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

7 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

8 hours ago