ವಾಷಿಂಗ್ಟನ್ : ಮೊರಾಕೊದಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಸುಮಾರು 623 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದು, ಇನ್ನು ನೂರಾರು ಮಂದಿ ನಾಪತ್ತೆಯಾಗಿದ್ದಾರೆ.
ತಡರಾತ್ರಿ ಸಂಭವಿಸಿದ ಪ್ರಬಲ 6.8 ತೀವ್ರತೆಯ ಭೂಕಂಪದಲ್ಲಿ ಸುಮಾರು 632 ಜನರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಸರ್ಕಾರಿ ಎಣಿಕೆಯಲ್ಲಿ ತಿಳಿಸಲಾಗಿದೆ.
ಭೂಮಿ ಕಂಪಿಸಿದ ಮರಕೇಶ್ ಪ್ರದೇಶದಲ್ಲಿ ಹಲವಾರು ಕಟ್ಟಡಗಳು ನೆಲಸಮಗೊಳಿಸಿದ್ದರಿಂದ ಜನರ ಕಿರುಚಾಟ ಮುಗಿಲು ಮುಟ್ಟಿತ್ತು.
ಭೂಕಂಪನದಿಂದ 300ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ನಾವು ತುಂಬಾ ಹಿಂಸಾತ್ಮಕ ನಡುಕವನ್ನು ಅನುಭವಿಸಿದ್ದೇವೆ ಮತ್ತು ಇದು ಭೂಕಂಪ ಎಂದು ನಾನು ಅರಿತುಕೊಳ್ಳುವಷ್ಟರಲ್ಲಿ ಹಲವಾರು ಮಂದಿ ಪ್ರಾಣ ಕಳೆದುಕೊಂಡಿದ್ದರು ಎಂದು ಭೂಕಂಪನದಲ್ಲಿ ಬದುಕುಳಿದಿರುವ ಅಬ್ದೆಲ್ಹಾಕ್ ಎಲ್ ಅಮ್ರಾನಿ ಅವರು ತಿಳಿಸಿದರು.
ಕಟ್ಟಡಗಳು ಧರೆಗುರುಳುತ್ತಿರುವುದನ್ನು ನಾನು ನೋಡಿದೆ. ಈ ರೀತಿಯ ಪರಿಸ್ಥಿತಿಗೆ ನಾವು ಪ್ರತಿವರ್ತನವನ್ನು ಹೊಂದಿರಬೇಕಾಗಿಲ್ಲ. ನಂತರ ನಾನು ಹೊರಗೆ ಹೋದೆ ಮತ್ತು ಅಲ್ಲಿ ಬಹಳಷ್ಟು ಜನರಿದ್ದರು. ಜನರು ಎಲ್ಲರೂ ಆಘಾತ ಮತ್ತು ಗಾಬರಿಯಲ್ಲಿದ್ದರು. ಮಕ್ಕಳು ಅಳುತ್ತಿದ್ದರು ಮತ್ತು ಪೊಷಕರು ದಿಗ್ಭ್ರಮೆಗೊಂಡಿದ್ದರು ಎಂದು ಹೇಳಿಕೊಂಡಿದ್ಧಾರೆ.
10 ನಿಮಿಷಗಳ ಕಾಲ ವಿದ್ಯುತ್ ಸ್ಥಗಿತಗೊಂಡಿತು, ಮತ್ತು (ದೂರವಾಣಿ) ನೆಟ್ವರ್ಕ್ ಕೂಡ ಸ್ಥಗಿತಗೊಂಡಿತು, ಆದರೆ ನಂತರ ಅದು ಮತ್ತೆ ಪ್ರಾರಂಭವಾಯಿತು.
ಭೂಕಂಪನದ ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ಪರಿಹಾರ ಕಾರ್ಯವನ್ನು ತೀವ್ರಗೊಳಿಸಿದ್ದಾರೆ. ಗಾಯಾಳುಗಳನ್ನು ಮರ್ರಾಕೇಶ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.ಮರ್ರಾಕೇಶ್ನಲ್ಲಿರುವ ಪ್ರಾದೇಶಿಕ ರಕ್ತ ವರ್ಗಾವಣೆ ಕೇಂದ್ರವು ಗಾಯಗೊಂಡವರಿಗೆ ರಕ್ತದಾನ ಮಾಡಲು ನಿವಾಸಿಗಳಿಗೆ ಕರೆ ನೀಡಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…