BREAKING NEWS

ಎಂಎಸ್‌ ಧೋನಿಗೆ ಇದು ಕೊನೇ ಐಪಿಎಲ್ ಎನ್ನುವುದಕ್ಕೆ ಸಿಕ್ತು ಬಲವಾದ ಸಾಕ್ಷಿ!

ಅಹಮದಾಬಾದ್‌: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಈಗಾಗಲೇ ವಿದಾಯ ಹೇಳಿರುವ ಮಹೇಂದ್ರ ಸಿಂಗ್‌ ಧೋನಿ, 2023ರ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿ ಮುಗಿದ ಬಳಿಕ ಐಪಿಎಲ್‌ ವೃತ್ತಿ ಜೀವನಕ್ಕೂ ವಿದಾಯ ಹೇಳುವ ಸಾಧ್ಯತೆ ಇದೆ. ಆದರೆ, ಈ ಬಗ್ಗ ಚೆನ್ನೈ ಸೂಪರ್‌ ಕಿಂಗ್ಸ್‌ ಮಾಜಿ ನಾಯಕ ಅಧಿಕೃತವಾಗಿ ಎಲ್ಲಿಯೂ ಬಹಿರಂಗಪಡಿಸಿಲ್ಲ. ಆದರೆ, ಶುಕ್ರವಾರ ನಡೆದಿದ್ದ ಒಂದು ಘಟನೆಯಿಂದ ಎಂಎಸ್‌ ಧೋನಿಗೆ ಇದು ಕೊನೆಯ ಐಪಿಎಲ್‌ ಟೂರ್ನಿ ಎಂದು ಭಾಸವಾಗುತ್ತಿದೆ.

ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ 2023ರ ಐಪಿಎಲ್‌ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ 179 ರನ್ ಗುರಿ ಹಿಂಬಾಲಿಸಿದ ಗುಜರಾತ್ ಟೈಟನ್ಸ್ ತಂಡದ ಇನಿಂಗ್ಸ್‌ನಲ್ಲಿ ಎಂಎಸ್‌ ಧೋನಿ ಚೆಂಡನ್ನು ತಡೆಯುವ ಭರದಲ್ಲಿ ನೆಲಕ್ಕೆ ಉರುಳಿದ್ದರು. ಈ ವೇಳೆ ಅವರ ಎಡಗೈ ಮೊಣಕಾಲಿನಲ್ಲಿ ನೋವು ಕಾಣಿಸಿಕೊಂಡಿತ್ತು. ಪಂದ್ಯದ 19ನೇ ಓವರ್‌ನಲ್ಲಿ ದೀಪಕ್‌ ಚಹರ್‌ ಎಸೆತದಲ್ಲಿ ಚೆಂಡು ರಾಹುಲ್‌ ತೆವಾಟಿಯ ಪ್ಯಾಡ್‌ಗೆ ತಾಗಿ ಲೆಗ್ ಸ್ಲಿಪ್ ಕಡೆಗೆ ಹೋಗುತ್ತಿತ್ತು. ಈ ವೇಳೆ ಎಂಎಸ್‌ ಧೋನಿ ತಮ್ಮ ಬಲ ಭಾಗಕ್ಕೆ ಹಾರಿ ಚೆಂಡನ್ನು ತಡೆಯಲು ಪ್ರಯತ್ನಿಸಿದರು. ಆದರೆ, ಅವರಿಂದ ಚೆಂಡನ್ನು ತಡೆಯಲು ಸಾಧ್ಯವಾಗಿಲಿಲ್ಲ.

ಈ ವೇಳೆ ನೆಲಕ್ಕೆ ಉರುಳಿದ ಎಂಎಸ್‌ ಧೋನಿ ಅವರ ಎಡಗೈ ಮೊಣಕಾಲಿನಲ್ಲಿ ನೋವು ಕಾಣಿಸಿಕೊಂಡಿತು. ಈ ಸಂದರ್ಭದಲ್ಲಿ ಸಿಎಸ್‌ಕೆ ನಾಯಕ ತುಂಬಾ ನೋವು ಅನುಭವಿಸಿದರು.ತಮ್ಮ ಇಷ್ಟು ವರ್ಷಗಳ ಕ್ರಿಕೆಟ್‌ನಲ್ಲಿ ವೃತ್ತಿ ಜೀವನದಲ್ಲಿ ಎಂಎಸ್‌ ಧೋನಿ ಎಂದಿಗೂ ಈ ರೀತಿ ಮೈದಾನದಲ್ಲಿ ನೋವು ಅನುಭವಿಸಿರಲಿಲ್ಲ. ಆದರೆ, ಗುಜರಾತ್‌ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ನಡೆದ ಈ ಘಟನೆಯಿಂದ ಎಂಎಸ್‌ ಧೋನಿಯನ್ನು ನೋಡಲು ಅಭಿಮಾನಿಗಳಿಗೆ ಸಾಧ್ಯವಾಗಿರಲಿಲ್ಲ. ಸದಾ ಉತ್ಸಾಹದಲ್ಲಿ ಮೈದಾನದಲ್ಲಿ ಕಾಣುತ್ತಿದ್ದ ಎಂಎಸ್‌ ಧೋನಿಯನ್ನು ಈ ಸ್ಥಿತಿಯಲ್ಲಿ ನೋಡುವುದು ತುಂಬಾ ಕಠಿಣವಾಗಿತ್ತು.

ಈ ಎಲ್ಲಾ ಘಟನೆಗಳನ್ನು ವೀಕ್ಷಿಸಿದ ಬಳಿಕ ಎಂಎಸ್‌ ಧೋನಿಗೆ ಇದು ಕಟ್ಟ ಕಡೆಯ ಐಪಿಎಲ್‌ ಟೂರ್ನಿ ಎಂದು ಎಲ್ಲರಿಗೂ ಮನದಟ್ಟಾಗಿದೆ. ಅವರು ಈಗಲೂ ಅದ್ಭುತ ಫಿಟ್‌ನೆಸ್‌ ಕಾಯ್ದುಕೊಂಡಿದ್ದರೂ ಅವರಿಗೆ 40ಕ್ಕೂ ಹೆಚ್ಚಿನ ವಯಸ್ಸಾಗಿದೆ. ಈ ಹಿನ್ನೆಲೆಯಲ್ಲಿ ಅವರ ದೇಹ ಶೇಕಡಾ 100ರಷ್ಟು ಆಟಕ್ಕೆ ಸಹಕರಿಸುತ್ತಿಲ್ಲ.

ಅಂದಹಾಗೆ ಈ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ 5 ವಿಕೆಟ್‌ ಸೋಲು ಅನುಭವಿಸಿತು. ಕಳೆದ ಆವೃತ್ತಿಯ ಪಾಯಿಂಟ್ಸ್‌ ಟೇಬಲ್‌ನಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದ್ದ ಚನ್ನೈ ಸೂಪರ್‌ ಕಿಂಗ್ಸ್, ಇದೀಗ 2023ರ ಐಪಿಎಲ್ ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಸೋಲುವ ಮೂಲಕ ಶುಭಾರಂಭ ಪಡೆಯುವಲ್ಲಿ ವಿಫಲವಾಗಿದೆ. ಲಖನೌ ಸೂಪರ್‌ ಜಯಂಟ್ಸ್‌ ವಿರುದ್ಧ ತನ್ನ ಮುಂದಿನ ಪಂದ್ಯದಲ್ಲಿ ಸಿಎಸ್‌ಕೆ ಸೆಣಸಲಿದೆ.

 

lokesh

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

2 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

3 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

3 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

4 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

4 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

4 hours ago