BREAKING NEWS

ಎಂಎಸ್‌ ಧೋನಿಗೆ ಇದು ಕೊನೇ ಐಪಿಎಲ್ ಎನ್ನುವುದಕ್ಕೆ ಸಿಕ್ತು ಬಲವಾದ ಸಾಕ್ಷಿ!

ಅಹಮದಾಬಾದ್‌: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಈಗಾಗಲೇ ವಿದಾಯ ಹೇಳಿರುವ ಮಹೇಂದ್ರ ಸಿಂಗ್‌ ಧೋನಿ, 2023ರ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿ ಮುಗಿದ ಬಳಿಕ ಐಪಿಎಲ್‌ ವೃತ್ತಿ ಜೀವನಕ್ಕೂ ವಿದಾಯ ಹೇಳುವ ಸಾಧ್ಯತೆ ಇದೆ. ಆದರೆ, ಈ ಬಗ್ಗ ಚೆನ್ನೈ ಸೂಪರ್‌ ಕಿಂಗ್ಸ್‌ ಮಾಜಿ ನಾಯಕ ಅಧಿಕೃತವಾಗಿ ಎಲ್ಲಿಯೂ ಬಹಿರಂಗಪಡಿಸಿಲ್ಲ. ಆದರೆ, ಶುಕ್ರವಾರ ನಡೆದಿದ್ದ ಒಂದು ಘಟನೆಯಿಂದ ಎಂಎಸ್‌ ಧೋನಿಗೆ ಇದು ಕೊನೆಯ ಐಪಿಎಲ್‌ ಟೂರ್ನಿ ಎಂದು ಭಾಸವಾಗುತ್ತಿದೆ.

ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ 2023ರ ಐಪಿಎಲ್‌ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ 179 ರನ್ ಗುರಿ ಹಿಂಬಾಲಿಸಿದ ಗುಜರಾತ್ ಟೈಟನ್ಸ್ ತಂಡದ ಇನಿಂಗ್ಸ್‌ನಲ್ಲಿ ಎಂಎಸ್‌ ಧೋನಿ ಚೆಂಡನ್ನು ತಡೆಯುವ ಭರದಲ್ಲಿ ನೆಲಕ್ಕೆ ಉರುಳಿದ್ದರು. ಈ ವೇಳೆ ಅವರ ಎಡಗೈ ಮೊಣಕಾಲಿನಲ್ಲಿ ನೋವು ಕಾಣಿಸಿಕೊಂಡಿತ್ತು. ಪಂದ್ಯದ 19ನೇ ಓವರ್‌ನಲ್ಲಿ ದೀಪಕ್‌ ಚಹರ್‌ ಎಸೆತದಲ್ಲಿ ಚೆಂಡು ರಾಹುಲ್‌ ತೆವಾಟಿಯ ಪ್ಯಾಡ್‌ಗೆ ತಾಗಿ ಲೆಗ್ ಸ್ಲಿಪ್ ಕಡೆಗೆ ಹೋಗುತ್ತಿತ್ತು. ಈ ವೇಳೆ ಎಂಎಸ್‌ ಧೋನಿ ತಮ್ಮ ಬಲ ಭಾಗಕ್ಕೆ ಹಾರಿ ಚೆಂಡನ್ನು ತಡೆಯಲು ಪ್ರಯತ್ನಿಸಿದರು. ಆದರೆ, ಅವರಿಂದ ಚೆಂಡನ್ನು ತಡೆಯಲು ಸಾಧ್ಯವಾಗಿಲಿಲ್ಲ.

ಈ ವೇಳೆ ನೆಲಕ್ಕೆ ಉರುಳಿದ ಎಂಎಸ್‌ ಧೋನಿ ಅವರ ಎಡಗೈ ಮೊಣಕಾಲಿನಲ್ಲಿ ನೋವು ಕಾಣಿಸಿಕೊಂಡಿತು. ಈ ಸಂದರ್ಭದಲ್ಲಿ ಸಿಎಸ್‌ಕೆ ನಾಯಕ ತುಂಬಾ ನೋವು ಅನುಭವಿಸಿದರು.ತಮ್ಮ ಇಷ್ಟು ವರ್ಷಗಳ ಕ್ರಿಕೆಟ್‌ನಲ್ಲಿ ವೃತ್ತಿ ಜೀವನದಲ್ಲಿ ಎಂಎಸ್‌ ಧೋನಿ ಎಂದಿಗೂ ಈ ರೀತಿ ಮೈದಾನದಲ್ಲಿ ನೋವು ಅನುಭವಿಸಿರಲಿಲ್ಲ. ಆದರೆ, ಗುಜರಾತ್‌ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ನಡೆದ ಈ ಘಟನೆಯಿಂದ ಎಂಎಸ್‌ ಧೋನಿಯನ್ನು ನೋಡಲು ಅಭಿಮಾನಿಗಳಿಗೆ ಸಾಧ್ಯವಾಗಿರಲಿಲ್ಲ. ಸದಾ ಉತ್ಸಾಹದಲ್ಲಿ ಮೈದಾನದಲ್ಲಿ ಕಾಣುತ್ತಿದ್ದ ಎಂಎಸ್‌ ಧೋನಿಯನ್ನು ಈ ಸ್ಥಿತಿಯಲ್ಲಿ ನೋಡುವುದು ತುಂಬಾ ಕಠಿಣವಾಗಿತ್ತು.

ಈ ಎಲ್ಲಾ ಘಟನೆಗಳನ್ನು ವೀಕ್ಷಿಸಿದ ಬಳಿಕ ಎಂಎಸ್‌ ಧೋನಿಗೆ ಇದು ಕಟ್ಟ ಕಡೆಯ ಐಪಿಎಲ್‌ ಟೂರ್ನಿ ಎಂದು ಎಲ್ಲರಿಗೂ ಮನದಟ್ಟಾಗಿದೆ. ಅವರು ಈಗಲೂ ಅದ್ಭುತ ಫಿಟ್‌ನೆಸ್‌ ಕಾಯ್ದುಕೊಂಡಿದ್ದರೂ ಅವರಿಗೆ 40ಕ್ಕೂ ಹೆಚ್ಚಿನ ವಯಸ್ಸಾಗಿದೆ. ಈ ಹಿನ್ನೆಲೆಯಲ್ಲಿ ಅವರ ದೇಹ ಶೇಕಡಾ 100ರಷ್ಟು ಆಟಕ್ಕೆ ಸಹಕರಿಸುತ್ತಿಲ್ಲ.

ಅಂದಹಾಗೆ ಈ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ 5 ವಿಕೆಟ್‌ ಸೋಲು ಅನುಭವಿಸಿತು. ಕಳೆದ ಆವೃತ್ತಿಯ ಪಾಯಿಂಟ್ಸ್‌ ಟೇಬಲ್‌ನಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದ್ದ ಚನ್ನೈ ಸೂಪರ್‌ ಕಿಂಗ್ಸ್, ಇದೀಗ 2023ರ ಐಪಿಎಲ್ ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಸೋಲುವ ಮೂಲಕ ಶುಭಾರಂಭ ಪಡೆಯುವಲ್ಲಿ ವಿಫಲವಾಗಿದೆ. ಲಖನೌ ಸೂಪರ್‌ ಜಯಂಟ್ಸ್‌ ವಿರುದ್ಧ ತನ್ನ ಮುಂದಿನ ಪಂದ್ಯದಲ್ಲಿ ಸಿಎಸ್‌ಕೆ ಸೆಣಸಲಿದೆ.

 

lokesh

Recent Posts

ಮ.ಬೆಟ್ಟದಲ್ಲಿ ಸ್ವಚ್ಛತಾ ನಡಿಗೆ : ಕಸ ಸಂಗ್ರಹಿಸಿದ ಕಾಲೇಜು ವಿದ್ಯಾರ್ಥಿಗಳು

ಹನೂರು : ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಕೊಳ್ಳೇಗಾಲ ವಾಸವಿ ಪ್ರಥಮ ದರ್ಜೆ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು…

8 mins ago

ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್?

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ…

1 hour ago

ಕಾಂಗ್ರೆಸ್‌ ಹೈಕಮಾಂಡ್‌ಗೆ ಕರ್ನಾಟಕ ರಾಜ್ಯವೇ ಎಟಿಎಂ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್‌…

1 hour ago

ಫೆ.14ರಿಂದ 18ರವರೆಗೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ: ಸಿದ್ಧತೆ ಪರಿಶೀಲಿಸಿದ ಎಈ ರಘು

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ…

2 hours ago

ಅಂತರರಾಷ್ಟ್ರೀಯ ವಾಣಿಜ್ಯ ಮೇಳ 2026: ಉತ್ಪಾದನೋತ್ತರ ಕೃಷಿ ಕಾರ್ಯಕ್ರಮವನ್ನು ಯಶ್ವಸಿಗೊಳಿಸಿ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…

2 hours ago

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ತಡೆ: ಕೇಂದ್ರ ಅರಣ್ಯ ಸಚಿವರ ಜೊತೆ ಎಚ್‌ಡಿಕೆ ಮಾತುಕತೆ

ನವದೆಹಲಿ: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್‌…

2 hours ago