BREAKING NEWS

ಎಂಎಸ್‌ ಧೋನಿಗೆ ಇದು ಕೊನೇ ಐಪಿಎಲ್ ಎನ್ನುವುದಕ್ಕೆ ಸಿಕ್ತು ಬಲವಾದ ಸಾಕ್ಷಿ!

ಅಹಮದಾಬಾದ್‌: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಈಗಾಗಲೇ ವಿದಾಯ ಹೇಳಿರುವ ಮಹೇಂದ್ರ ಸಿಂಗ್‌ ಧೋನಿ, 2023ರ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿ ಮುಗಿದ ಬಳಿಕ ಐಪಿಎಲ್‌ ವೃತ್ತಿ ಜೀವನಕ್ಕೂ ವಿದಾಯ ಹೇಳುವ ಸಾಧ್ಯತೆ ಇದೆ. ಆದರೆ, ಈ ಬಗ್ಗ ಚೆನ್ನೈ ಸೂಪರ್‌ ಕಿಂಗ್ಸ್‌ ಮಾಜಿ ನಾಯಕ ಅಧಿಕೃತವಾಗಿ ಎಲ್ಲಿಯೂ ಬಹಿರಂಗಪಡಿಸಿಲ್ಲ. ಆದರೆ, ಶುಕ್ರವಾರ ನಡೆದಿದ್ದ ಒಂದು ಘಟನೆಯಿಂದ ಎಂಎಸ್‌ ಧೋನಿಗೆ ಇದು ಕೊನೆಯ ಐಪಿಎಲ್‌ ಟೂರ್ನಿ ಎಂದು ಭಾಸವಾಗುತ್ತಿದೆ.

ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ 2023ರ ಐಪಿಎಲ್‌ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ 179 ರನ್ ಗುರಿ ಹಿಂಬಾಲಿಸಿದ ಗುಜರಾತ್ ಟೈಟನ್ಸ್ ತಂಡದ ಇನಿಂಗ್ಸ್‌ನಲ್ಲಿ ಎಂಎಸ್‌ ಧೋನಿ ಚೆಂಡನ್ನು ತಡೆಯುವ ಭರದಲ್ಲಿ ನೆಲಕ್ಕೆ ಉರುಳಿದ್ದರು. ಈ ವೇಳೆ ಅವರ ಎಡಗೈ ಮೊಣಕಾಲಿನಲ್ಲಿ ನೋವು ಕಾಣಿಸಿಕೊಂಡಿತ್ತು. ಪಂದ್ಯದ 19ನೇ ಓವರ್‌ನಲ್ಲಿ ದೀಪಕ್‌ ಚಹರ್‌ ಎಸೆತದಲ್ಲಿ ಚೆಂಡು ರಾಹುಲ್‌ ತೆವಾಟಿಯ ಪ್ಯಾಡ್‌ಗೆ ತಾಗಿ ಲೆಗ್ ಸ್ಲಿಪ್ ಕಡೆಗೆ ಹೋಗುತ್ತಿತ್ತು. ಈ ವೇಳೆ ಎಂಎಸ್‌ ಧೋನಿ ತಮ್ಮ ಬಲ ಭಾಗಕ್ಕೆ ಹಾರಿ ಚೆಂಡನ್ನು ತಡೆಯಲು ಪ್ರಯತ್ನಿಸಿದರು. ಆದರೆ, ಅವರಿಂದ ಚೆಂಡನ್ನು ತಡೆಯಲು ಸಾಧ್ಯವಾಗಿಲಿಲ್ಲ.

ಈ ವೇಳೆ ನೆಲಕ್ಕೆ ಉರುಳಿದ ಎಂಎಸ್‌ ಧೋನಿ ಅವರ ಎಡಗೈ ಮೊಣಕಾಲಿನಲ್ಲಿ ನೋವು ಕಾಣಿಸಿಕೊಂಡಿತು. ಈ ಸಂದರ್ಭದಲ್ಲಿ ಸಿಎಸ್‌ಕೆ ನಾಯಕ ತುಂಬಾ ನೋವು ಅನುಭವಿಸಿದರು.ತಮ್ಮ ಇಷ್ಟು ವರ್ಷಗಳ ಕ್ರಿಕೆಟ್‌ನಲ್ಲಿ ವೃತ್ತಿ ಜೀವನದಲ್ಲಿ ಎಂಎಸ್‌ ಧೋನಿ ಎಂದಿಗೂ ಈ ರೀತಿ ಮೈದಾನದಲ್ಲಿ ನೋವು ಅನುಭವಿಸಿರಲಿಲ್ಲ. ಆದರೆ, ಗುಜರಾತ್‌ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ನಡೆದ ಈ ಘಟನೆಯಿಂದ ಎಂಎಸ್‌ ಧೋನಿಯನ್ನು ನೋಡಲು ಅಭಿಮಾನಿಗಳಿಗೆ ಸಾಧ್ಯವಾಗಿರಲಿಲ್ಲ. ಸದಾ ಉತ್ಸಾಹದಲ್ಲಿ ಮೈದಾನದಲ್ಲಿ ಕಾಣುತ್ತಿದ್ದ ಎಂಎಸ್‌ ಧೋನಿಯನ್ನು ಈ ಸ್ಥಿತಿಯಲ್ಲಿ ನೋಡುವುದು ತುಂಬಾ ಕಠಿಣವಾಗಿತ್ತು.

ಈ ಎಲ್ಲಾ ಘಟನೆಗಳನ್ನು ವೀಕ್ಷಿಸಿದ ಬಳಿಕ ಎಂಎಸ್‌ ಧೋನಿಗೆ ಇದು ಕಟ್ಟ ಕಡೆಯ ಐಪಿಎಲ್‌ ಟೂರ್ನಿ ಎಂದು ಎಲ್ಲರಿಗೂ ಮನದಟ್ಟಾಗಿದೆ. ಅವರು ಈಗಲೂ ಅದ್ಭುತ ಫಿಟ್‌ನೆಸ್‌ ಕಾಯ್ದುಕೊಂಡಿದ್ದರೂ ಅವರಿಗೆ 40ಕ್ಕೂ ಹೆಚ್ಚಿನ ವಯಸ್ಸಾಗಿದೆ. ಈ ಹಿನ್ನೆಲೆಯಲ್ಲಿ ಅವರ ದೇಹ ಶೇಕಡಾ 100ರಷ್ಟು ಆಟಕ್ಕೆ ಸಹಕರಿಸುತ್ತಿಲ್ಲ.

ಅಂದಹಾಗೆ ಈ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ 5 ವಿಕೆಟ್‌ ಸೋಲು ಅನುಭವಿಸಿತು. ಕಳೆದ ಆವೃತ್ತಿಯ ಪಾಯಿಂಟ್ಸ್‌ ಟೇಬಲ್‌ನಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದ್ದ ಚನ್ನೈ ಸೂಪರ್‌ ಕಿಂಗ್ಸ್, ಇದೀಗ 2023ರ ಐಪಿಎಲ್ ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಸೋಲುವ ಮೂಲಕ ಶುಭಾರಂಭ ಪಡೆಯುವಲ್ಲಿ ವಿಫಲವಾಗಿದೆ. ಲಖನೌ ಸೂಪರ್‌ ಜಯಂಟ್ಸ್‌ ವಿರುದ್ಧ ತನ್ನ ಮುಂದಿನ ಪಂದ್ಯದಲ್ಲಿ ಸಿಎಸ್‌ಕೆ ಸೆಣಸಲಿದೆ.

 

lokesh

Recent Posts

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

3 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

3 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

3 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

3 hours ago

ನಾಳೆ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ

ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾ ಜಿದ್ದಿನ ರಣರಂಗವಾಗಿ ಏರ್ಪಟ್ಟು, 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ…

3 hours ago