BREAKING NEWS

ಎಂಎಸ್‌ ಧೋನಿಗೆ ಇದು ಕೊನೇ ಐಪಿಎಲ್ ಎನ್ನುವುದಕ್ಕೆ ಸಿಕ್ತು ಬಲವಾದ ಸಾಕ್ಷಿ!

ಅಹಮದಾಬಾದ್‌: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಈಗಾಗಲೇ ವಿದಾಯ ಹೇಳಿರುವ ಮಹೇಂದ್ರ ಸಿಂಗ್‌ ಧೋನಿ, 2023ರ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿ ಮುಗಿದ ಬಳಿಕ ಐಪಿಎಲ್‌ ವೃತ್ತಿ ಜೀವನಕ್ಕೂ ವಿದಾಯ ಹೇಳುವ ಸಾಧ್ಯತೆ ಇದೆ. ಆದರೆ, ಈ ಬಗ್ಗ ಚೆನ್ನೈ ಸೂಪರ್‌ ಕಿಂಗ್ಸ್‌ ಮಾಜಿ ನಾಯಕ ಅಧಿಕೃತವಾಗಿ ಎಲ್ಲಿಯೂ ಬಹಿರಂಗಪಡಿಸಿಲ್ಲ. ಆದರೆ, ಶುಕ್ರವಾರ ನಡೆದಿದ್ದ ಒಂದು ಘಟನೆಯಿಂದ ಎಂಎಸ್‌ ಧೋನಿಗೆ ಇದು ಕೊನೆಯ ಐಪಿಎಲ್‌ ಟೂರ್ನಿ ಎಂದು ಭಾಸವಾಗುತ್ತಿದೆ.

ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ 2023ರ ಐಪಿಎಲ್‌ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ 179 ರನ್ ಗುರಿ ಹಿಂಬಾಲಿಸಿದ ಗುಜರಾತ್ ಟೈಟನ್ಸ್ ತಂಡದ ಇನಿಂಗ್ಸ್‌ನಲ್ಲಿ ಎಂಎಸ್‌ ಧೋನಿ ಚೆಂಡನ್ನು ತಡೆಯುವ ಭರದಲ್ಲಿ ನೆಲಕ್ಕೆ ಉರುಳಿದ್ದರು. ಈ ವೇಳೆ ಅವರ ಎಡಗೈ ಮೊಣಕಾಲಿನಲ್ಲಿ ನೋವು ಕಾಣಿಸಿಕೊಂಡಿತ್ತು. ಪಂದ್ಯದ 19ನೇ ಓವರ್‌ನಲ್ಲಿ ದೀಪಕ್‌ ಚಹರ್‌ ಎಸೆತದಲ್ಲಿ ಚೆಂಡು ರಾಹುಲ್‌ ತೆವಾಟಿಯ ಪ್ಯಾಡ್‌ಗೆ ತಾಗಿ ಲೆಗ್ ಸ್ಲಿಪ್ ಕಡೆಗೆ ಹೋಗುತ್ತಿತ್ತು. ಈ ವೇಳೆ ಎಂಎಸ್‌ ಧೋನಿ ತಮ್ಮ ಬಲ ಭಾಗಕ್ಕೆ ಹಾರಿ ಚೆಂಡನ್ನು ತಡೆಯಲು ಪ್ರಯತ್ನಿಸಿದರು. ಆದರೆ, ಅವರಿಂದ ಚೆಂಡನ್ನು ತಡೆಯಲು ಸಾಧ್ಯವಾಗಿಲಿಲ್ಲ.

ಈ ವೇಳೆ ನೆಲಕ್ಕೆ ಉರುಳಿದ ಎಂಎಸ್‌ ಧೋನಿ ಅವರ ಎಡಗೈ ಮೊಣಕಾಲಿನಲ್ಲಿ ನೋವು ಕಾಣಿಸಿಕೊಂಡಿತು. ಈ ಸಂದರ್ಭದಲ್ಲಿ ಸಿಎಸ್‌ಕೆ ನಾಯಕ ತುಂಬಾ ನೋವು ಅನುಭವಿಸಿದರು.ತಮ್ಮ ಇಷ್ಟು ವರ್ಷಗಳ ಕ್ರಿಕೆಟ್‌ನಲ್ಲಿ ವೃತ್ತಿ ಜೀವನದಲ್ಲಿ ಎಂಎಸ್‌ ಧೋನಿ ಎಂದಿಗೂ ಈ ರೀತಿ ಮೈದಾನದಲ್ಲಿ ನೋವು ಅನುಭವಿಸಿರಲಿಲ್ಲ. ಆದರೆ, ಗುಜರಾತ್‌ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ನಡೆದ ಈ ಘಟನೆಯಿಂದ ಎಂಎಸ್‌ ಧೋನಿಯನ್ನು ನೋಡಲು ಅಭಿಮಾನಿಗಳಿಗೆ ಸಾಧ್ಯವಾಗಿರಲಿಲ್ಲ. ಸದಾ ಉತ್ಸಾಹದಲ್ಲಿ ಮೈದಾನದಲ್ಲಿ ಕಾಣುತ್ತಿದ್ದ ಎಂಎಸ್‌ ಧೋನಿಯನ್ನು ಈ ಸ್ಥಿತಿಯಲ್ಲಿ ನೋಡುವುದು ತುಂಬಾ ಕಠಿಣವಾಗಿತ್ತು.

ಈ ಎಲ್ಲಾ ಘಟನೆಗಳನ್ನು ವೀಕ್ಷಿಸಿದ ಬಳಿಕ ಎಂಎಸ್‌ ಧೋನಿಗೆ ಇದು ಕಟ್ಟ ಕಡೆಯ ಐಪಿಎಲ್‌ ಟೂರ್ನಿ ಎಂದು ಎಲ್ಲರಿಗೂ ಮನದಟ್ಟಾಗಿದೆ. ಅವರು ಈಗಲೂ ಅದ್ಭುತ ಫಿಟ್‌ನೆಸ್‌ ಕಾಯ್ದುಕೊಂಡಿದ್ದರೂ ಅವರಿಗೆ 40ಕ್ಕೂ ಹೆಚ್ಚಿನ ವಯಸ್ಸಾಗಿದೆ. ಈ ಹಿನ್ನೆಲೆಯಲ್ಲಿ ಅವರ ದೇಹ ಶೇಕಡಾ 100ರಷ್ಟು ಆಟಕ್ಕೆ ಸಹಕರಿಸುತ್ತಿಲ್ಲ.

ಅಂದಹಾಗೆ ಈ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ 5 ವಿಕೆಟ್‌ ಸೋಲು ಅನುಭವಿಸಿತು. ಕಳೆದ ಆವೃತ್ತಿಯ ಪಾಯಿಂಟ್ಸ್‌ ಟೇಬಲ್‌ನಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದ್ದ ಚನ್ನೈ ಸೂಪರ್‌ ಕಿಂಗ್ಸ್, ಇದೀಗ 2023ರ ಐಪಿಎಲ್ ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಸೋಲುವ ಮೂಲಕ ಶುಭಾರಂಭ ಪಡೆಯುವಲ್ಲಿ ವಿಫಲವಾಗಿದೆ. ಲಖನೌ ಸೂಪರ್‌ ಜಯಂಟ್ಸ್‌ ವಿರುದ್ಧ ತನ್ನ ಮುಂದಿನ ಪಂದ್ಯದಲ್ಲಿ ಸಿಎಸ್‌ಕೆ ಸೆಣಸಲಿದೆ.

 

lokesh

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

9 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

9 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

10 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

12 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

12 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

12 hours ago