ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯದಿಂದ ಜಾಮೀನು ಪಡೆದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಜಾಪ್ರಭುತ್ವದ ರಕ್ಷಣೆಗೆ ‘ಮಿತ್ರಕಾಲ’ದ ವಿರುದ್ಧದ ಹೋರಾಟ ಇದಾಗಿದೆ ಎಂದು ಹೇಳಿದ್ದಾರೆ.
ಬಂಡವಾಳಶಾಹಿ ಮಿತ್ರರಿಗೆ ಪ್ರಧಾನಿ ನರೇಂದ್ರ ಮೋದಿ ನೆರವು ನೀಡುತ್ತಿದ್ದಾರೆ ಎಂಬರ್ಥದಲ್ಲಿ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ, ಸತ್ಯವೇ ನನಗೆ ಆಸರೆ! ಎಂದು ಅವರು ಹೇಳಿದ್ದಾರೆ.
ಮೋದಿ ಉಪನಾಮ ವ್ಯಂಗ್ಯ ಕುರಿತ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಜಾಮೀನು ನೀಡಿರುವ ಸೂರತ್ ನ್ಯಾಯಾಲಯ, ಮುಂದಿನ ವಿಚಾರಣೆ ಏ.13ಕ್ಕೆ ಮುಂದೂಡಿದೆ.
ಇಂದು ಸೂರತ್ಗೆ ಆಗಮಿಸಿದ ರಾಹುಲ್, ತಮಗೆ ಜೈಲು ಶಿಕ್ಷೆ ವಿಧಿಸಿರುವುದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು.
ಮೋದಿ ಉಪನಾಮ ವ್ಯಂಗ್ಯ ಕುರಿತ ಮಾನನಷ್ಟ ಮೊಕದ್ದಮೆಯಲ್ಲಿ ಕೆಳ ಹಂತದ ನ್ಯಾಯಾಲಯ ಮಾ.23ರಂದು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಜತೆಗೆ ಶಿಕ್ಷೆಯನ್ನು 30 ದಿನಗಳ ಕಾಲ ಅಮಾನಲ್ಲಿರಿಸಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿತ್ತು.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…