ಹಾಸನ : ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಮುಂದುವರಿದಿದ್ದು, ಬೇಲೂರಿನ ಮಲಸಾವರ ಗ್ರಾಮದಲ್ಲಿ ರೈತರು ಬೆಳೆದ ಅಪಾರ ಪ್ರಮಾಣದ ಬೆಳೆಯನ್ನು ನಾಶಮಾಡಿವೆ. ಗಜಪಡೆ ಬೆಳೆಗಳ ಮೇಲೆ ದಾಳಿ ಮಾಡುವುದನ್ನು ರೈತರು ಮೊಬೈಲ್ನಲ್ಲಿ ವೀಡಿಯೋ ಮಾಡಿ ಅರಣ್ಯಾಧಿಕಾರಿಗಳ ಮುಂದಿಟ್ಟು ಅಳಲು ತೋಡಿಕೊಂಡಿದ್ದಾರೆ.
20ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದು, ಕಾಫಿ, ಮೆಣಸು, ಏಲಕ್ಕಿ, ಅಡಕೆ ಗಿಡಗಳು ಹಾಗೂ ನಾಟಿ ಮಾಡಿದ್ದ ಭತ್ತದ ಗದ್ದೆಯನ್ನು ತುಳಿದು ಸಂಪೂರ್ಣವಾಗಿ ನಾಶ ಮಾಡಿವೆ. ಗ್ರಾಮದ ತೀರ್ಥಕುಮಾರ್, ಕಲ್ಲೇಶ್, ವಿಜಯ್, ಮಲ್ಲೇಶ್ ಹಾಗೂ ಇನ್ನಿತರ ರೈತರಿಗೆ ಸೇರಿದ ಜಮೀನಿನಲ್ಲಿ ಬೆಳೆದಿದ್ದ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಈ ದೃಶ್ಯವನ್ನು ರೈತರೊಬ್ಬರು ಎತ್ತರದ ಮರದ ಮೇಲೆ ಕುಳಿತು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.
ಲಕ್ಷಾಂತರ ರೂ. ಮೌಲ್ಯದ ಬೆಳೆ ಹಾನಿಯಿಂದ ರೈತರು ಕಂಗಾಲಾಗಿದ್ದಾರೆ. ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ರೈತರು ಆಗ್ರಹಿಸಿದ್ದಾರೆ. ಕಾಡಾನೆಗಳು ಹಿಂಡಿನ ದಾಳಿಯಿಂದ ಆತಂಕಗೊಂಡಿರುವ ಸ್ಥಳೀಯರು ಜೀವ ಭಯದಿಂದ ತೋಟ, ಹೊಲ, ಗದ್ದೆಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…