ಹಾಸನ : ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಮುಂದುವರಿದಿದ್ದು, ಬೇಲೂರಿನ ಮಲಸಾವರ ಗ್ರಾಮದಲ್ಲಿ ರೈತರು ಬೆಳೆದ ಅಪಾರ ಪ್ರಮಾಣದ ಬೆಳೆಯನ್ನು ನಾಶಮಾಡಿವೆ. ಗಜಪಡೆ ಬೆಳೆಗಳ ಮೇಲೆ ದಾಳಿ ಮಾಡುವುದನ್ನು ರೈತರು ಮೊಬೈಲ್ನಲ್ಲಿ ವೀಡಿಯೋ ಮಾಡಿ ಅರಣ್ಯಾಧಿಕಾರಿಗಳ ಮುಂದಿಟ್ಟು ಅಳಲು ತೋಡಿಕೊಂಡಿದ್ದಾರೆ.
20ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದು, ಕಾಫಿ, ಮೆಣಸು, ಏಲಕ್ಕಿ, ಅಡಕೆ ಗಿಡಗಳು ಹಾಗೂ ನಾಟಿ ಮಾಡಿದ್ದ ಭತ್ತದ ಗದ್ದೆಯನ್ನು ತುಳಿದು ಸಂಪೂರ್ಣವಾಗಿ ನಾಶ ಮಾಡಿವೆ. ಗ್ರಾಮದ ತೀರ್ಥಕುಮಾರ್, ಕಲ್ಲೇಶ್, ವಿಜಯ್, ಮಲ್ಲೇಶ್ ಹಾಗೂ ಇನ್ನಿತರ ರೈತರಿಗೆ ಸೇರಿದ ಜಮೀನಿನಲ್ಲಿ ಬೆಳೆದಿದ್ದ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಈ ದೃಶ್ಯವನ್ನು ರೈತರೊಬ್ಬರು ಎತ್ತರದ ಮರದ ಮೇಲೆ ಕುಳಿತು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.
ಲಕ್ಷಾಂತರ ರೂ. ಮೌಲ್ಯದ ಬೆಳೆ ಹಾನಿಯಿಂದ ರೈತರು ಕಂಗಾಲಾಗಿದ್ದಾರೆ. ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ರೈತರು ಆಗ್ರಹಿಸಿದ್ದಾರೆ. ಕಾಡಾನೆಗಳು ಹಿಂಡಿನ ದಾಳಿಯಿಂದ ಆತಂಕಗೊಂಡಿರುವ ಸ್ಥಳೀಯರು ಜೀವ ಭಯದಿಂದ ತೋಟ, ಹೊಲ, ಗದ್ದೆಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…