BREAKING NEWS

ಮೋದಿ ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ ಬಿಡುಗಡೆ ಮಾಡಿದ ಸುಬ್ರಮಣಿಯನ್‌ ಸ್ವಾಮಿ!

ನವದೆಹಲಿ: ಕಲಾ ವಿಭಾಗದಲ್ಲಿ ಗುಜರಾತ್‌ನ ವಿಶ್ವವಿದ್ಯಾಲಯದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಪಡೆದಿದ್ದಾರೆ ಎನ್ನಲಾದ ಸ್ನಾತಕೋತ್ತರ ಪದವಿ ಪ್ರಮಾಣ ಪತ್ರವನ್ನು ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಅವರು ಶನಿವಾರ ಬಿಡುಗಡೆ ಮಾಡಿದ್ದಾರೆ.

ಆದರೆ, 2016ರಲ್ಲಿ ಅಮಿತ್‌ ಶಾ ಮತ್ತು ಅರುಣ್‌ ಜೇಟ್ಲಿ ಅವರು ಪತ್ರಿಕಾಗೋಷ್ಠಿ ನಡೆಸಿ ಬಿಡುಗಡೆ ಮಾಡಿದ್ದ ಪ್ರಮಾಣ ಪತ್ರ ಇದಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

‘ಮೋದಿಯವರ ವಿದ್ಯಾರ್ಹತೆಯ ಬಗ್ಗೆ ಯಾಕೆ ಇಷ್ಟೊಂದು ಗಲಾಟೆ? ಆರು ವರ್ಷಗಳ ಹಿಂದೆ ಅಮಿತ್ ಶಾ ಮತ್ತು ಅರುಣ್‌ ಜೇಟ್ಲಿ ಜಂಟಿ ಮಾಧ್ಯಮಗೋಷ್ಠಿಯನ್ನು ನಡೆಸಿ, ನರೇಂದ್ರ ಮೋದಿ ಅವರ ಪದವಿ ಪ್ರಮಾಣ ಪತ್ರಗಳನ್ನು ಪ್ರದರ್ಶಿಸಿದ್ದರು. ಅದನ್ನು ಸುದ್ದಿ ಸಂಸ್ಥೆ ಎಎನ್‌ಐ ಪ್ರಕಟಿಸಿತ್ತು ಎಂದು ಭಾವಿಸುತ್ತೇನೆ’ ಎಂಬ ಒಕ್ಕಣೆಯನ್ನೂ ತಮ್ಮ ಟ್ವೀಟ್‌ನಲ್ಲಿ ಸ್ವಾಮಿ ಬರೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಬಿಎ ಮತ್ತು ಎಂಎ ಪದವಿ ಪ್ರಮಾಣ ಪತ್ರಗಳನ್ನು 2016 ರಲ್ಲಿ ಬಿಜೆಪಿ ಬಿಡುಗಡೆ ಮಾಡಿತ್ತು. ಈ ದಾಖಲೆಗಳನ್ನು ನಕಲಿ ಎಂದು ಎಎಪಿ ಆರೋಪಿಸಿತ್ತು.

ಎಎಪಿ ಮಾಜಿ ನಾಯಕ ಅಶುತೋಷ್ ಅವರು ದಾಖಲೆಗಳಲ್ಲಿನ ವ್ಯತ್ಯಾಸಗಳನ್ನು ಎತ್ತಿ ತೋರಿಸಿದ್ದರು. ಬಿಎ ಪದವಿಯಲ್ಲಿನ ಪ್ರಧಾನಿ ಹೆಸರು, ಎಂಎ ಪದವಿಗಿಂತ ಭಿನ್ನವಾಗಿದೆ ಎಂದು ಅವರು ಆರೋಪಿಸಿದ್ದರು.

ಈ ಹಿನ್ನೆಲೆಯಲ್ಲಿ ಸ್ವತಃ ಪತ್ರಿಕಾಗೋಷ್ಠಿ ನಡೆಸಿದ್ದ ಬಿಜೆಪಿಯ ಹಿರಿಯ ನಾಯಕರಾದ ಅಮಿತ್ ಶಾ ಮತ್ತು ದಿವಂಗತ ಅರುಣ್ ಜೇಟ್ಲಿ, ಪದವಿ ಪ್ರಮಾಣ ಪತ್ರಗಳ ಪ್ರತಿಗಳನ್ನು ಬಿಡುಗಡೆ ಮಾಡಿದ್ದರು. ಅಂದು ಅರವಿಂದ್ ಕೇಜ್ರಿವಾಲ್ ಅವರನ್ನು ಟೀಕಿಸಿದ್ದರು.

ಪದವಿ ಪಡೆಯಲು ಪ್ರಧಾನಿ ಮೋದಿ ಅವರು ವಿದ್ಯಾರ್ಥಿ ಜೀವನದಲ್ಲಿ ಪ್ರಯಾಸಪಟ್ಟಿದ್ದಾರೆ ಮತ್ತು ಕಠಿಣ ಪರಿಶ್ರಮ ಹಾಕಿದ್ದಾರೆ ಎಂದೂ ಜೇಟ್ಲಿ ಹೇಳಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಮಾಹಿತಿಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡುವಂತೆ ಕೇಂದ್ರ ಮಾಹಿತಿ ಆಯೋಗ (ಸಿಐಸಿ)ದ ಏಳು ವರ್ಷಗಳ ಹಿಂದಿನ ಆದೇಶವನ್ನು ಗುಜರಾತ್ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿತು. ಅಲ್ಲದೇ, ಕೇಜ್ರಿವಾಲ್‌ಗೆ ₹25 ಸಾವಿರ ದಂಡ ವಿಧಿಸಿತು.

andolanait

Recent Posts

ಮೇ-1ರಿಂದ ಮೈಸೂರು-ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ: ಯದುವೀರ್

ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ…

3 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲು

ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…

3 hours ago

ಹೊರ್ಮುಜ್ ಜಲಸಂಧಿ ಹಡಗುಗಳ ಸಂಚಾರಕ್ಕೆ ಮುಕ್ತ ; ಇರಾನ್‌ ಮಹತ್ವದ ಘೋಷಣೆ,

ಟೆಹ್ರಾರ್‌ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…

4 hours ago

ಹನೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…

4 hours ago

ಮೈಸೂರಿನ ರೈಲ್ವೆ ಗೂಡ್ಸ್‌ ಶೆಡ್‌ ಸ್ಥಾಳಾಂತಕ್ಕೆ ಹುನ್ನಾರ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್‌ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…

5 hours ago

ಮಹಿಳಾ ಮೀಸಲಾತಿ ಕಾಯ್ದೆ ಏ.16 ರಿಂದಲೇ ಜಾರಿ

ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…

5 hours ago