BREAKING NEWS

ಮೋದಿ ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ ಬಿಡುಗಡೆ ಮಾಡಿದ ಸುಬ್ರಮಣಿಯನ್‌ ಸ್ವಾಮಿ!

ನವದೆಹಲಿ: ಕಲಾ ವಿಭಾಗದಲ್ಲಿ ಗುಜರಾತ್‌ನ ವಿಶ್ವವಿದ್ಯಾಲಯದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಪಡೆದಿದ್ದಾರೆ ಎನ್ನಲಾದ ಸ್ನಾತಕೋತ್ತರ ಪದವಿ ಪ್ರಮಾಣ ಪತ್ರವನ್ನು ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಅವರು ಶನಿವಾರ ಬಿಡುಗಡೆ ಮಾಡಿದ್ದಾರೆ.

ಆದರೆ, 2016ರಲ್ಲಿ ಅಮಿತ್‌ ಶಾ ಮತ್ತು ಅರುಣ್‌ ಜೇಟ್ಲಿ ಅವರು ಪತ್ರಿಕಾಗೋಷ್ಠಿ ನಡೆಸಿ ಬಿಡುಗಡೆ ಮಾಡಿದ್ದ ಪ್ರಮಾಣ ಪತ್ರ ಇದಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

‘ಮೋದಿಯವರ ವಿದ್ಯಾರ್ಹತೆಯ ಬಗ್ಗೆ ಯಾಕೆ ಇಷ್ಟೊಂದು ಗಲಾಟೆ? ಆರು ವರ್ಷಗಳ ಹಿಂದೆ ಅಮಿತ್ ಶಾ ಮತ್ತು ಅರುಣ್‌ ಜೇಟ್ಲಿ ಜಂಟಿ ಮಾಧ್ಯಮಗೋಷ್ಠಿಯನ್ನು ನಡೆಸಿ, ನರೇಂದ್ರ ಮೋದಿ ಅವರ ಪದವಿ ಪ್ರಮಾಣ ಪತ್ರಗಳನ್ನು ಪ್ರದರ್ಶಿಸಿದ್ದರು. ಅದನ್ನು ಸುದ್ದಿ ಸಂಸ್ಥೆ ಎಎನ್‌ಐ ಪ್ರಕಟಿಸಿತ್ತು ಎಂದು ಭಾವಿಸುತ್ತೇನೆ’ ಎಂಬ ಒಕ್ಕಣೆಯನ್ನೂ ತಮ್ಮ ಟ್ವೀಟ್‌ನಲ್ಲಿ ಸ್ವಾಮಿ ಬರೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಬಿಎ ಮತ್ತು ಎಂಎ ಪದವಿ ಪ್ರಮಾಣ ಪತ್ರಗಳನ್ನು 2016 ರಲ್ಲಿ ಬಿಜೆಪಿ ಬಿಡುಗಡೆ ಮಾಡಿತ್ತು. ಈ ದಾಖಲೆಗಳನ್ನು ನಕಲಿ ಎಂದು ಎಎಪಿ ಆರೋಪಿಸಿತ್ತು.

ಎಎಪಿ ಮಾಜಿ ನಾಯಕ ಅಶುತೋಷ್ ಅವರು ದಾಖಲೆಗಳಲ್ಲಿನ ವ್ಯತ್ಯಾಸಗಳನ್ನು ಎತ್ತಿ ತೋರಿಸಿದ್ದರು. ಬಿಎ ಪದವಿಯಲ್ಲಿನ ಪ್ರಧಾನಿ ಹೆಸರು, ಎಂಎ ಪದವಿಗಿಂತ ಭಿನ್ನವಾಗಿದೆ ಎಂದು ಅವರು ಆರೋಪಿಸಿದ್ದರು.

ಈ ಹಿನ್ನೆಲೆಯಲ್ಲಿ ಸ್ವತಃ ಪತ್ರಿಕಾಗೋಷ್ಠಿ ನಡೆಸಿದ್ದ ಬಿಜೆಪಿಯ ಹಿರಿಯ ನಾಯಕರಾದ ಅಮಿತ್ ಶಾ ಮತ್ತು ದಿವಂಗತ ಅರುಣ್ ಜೇಟ್ಲಿ, ಪದವಿ ಪ್ರಮಾಣ ಪತ್ರಗಳ ಪ್ರತಿಗಳನ್ನು ಬಿಡುಗಡೆ ಮಾಡಿದ್ದರು. ಅಂದು ಅರವಿಂದ್ ಕೇಜ್ರಿವಾಲ್ ಅವರನ್ನು ಟೀಕಿಸಿದ್ದರು.

ಪದವಿ ಪಡೆಯಲು ಪ್ರಧಾನಿ ಮೋದಿ ಅವರು ವಿದ್ಯಾರ್ಥಿ ಜೀವನದಲ್ಲಿ ಪ್ರಯಾಸಪಟ್ಟಿದ್ದಾರೆ ಮತ್ತು ಕಠಿಣ ಪರಿಶ್ರಮ ಹಾಕಿದ್ದಾರೆ ಎಂದೂ ಜೇಟ್ಲಿ ಹೇಳಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಮಾಹಿತಿಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡುವಂತೆ ಕೇಂದ್ರ ಮಾಹಿತಿ ಆಯೋಗ (ಸಿಐಸಿ)ದ ಏಳು ವರ್ಷಗಳ ಹಿಂದಿನ ಆದೇಶವನ್ನು ಗುಜರಾತ್ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿತು. ಅಲ್ಲದೇ, ಕೇಜ್ರಿವಾಲ್‌ಗೆ ₹25 ಸಾವಿರ ದಂಡ ವಿಧಿಸಿತು.

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

3 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

3 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

3 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

3 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

3 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

3 hours ago