BREAKING NEWS

ಚಂದ್ರಯಾನ-3ರ ಯಶಸ್ವಿ ಉಡಾವಣೆ: ಗಣ್ಯರು ಹೇಳಿದ್ದೇನು.?

ಶ್ರೀಹರಿಕೋಟಾ: “ಚಂದ್ರಯಾನ-3 ಚಂದ್ರನ ಕಡೆಗಿನ ತನ್ನ ಪ್ರಯಾಣವನ್ನು ಆರಂಭಿಸಿದೆ. ಅದಕ್ಕೆ ಶುಭವಾಗಲಿ ಎಂದು ಹಾರೈಸೋಣ” ಎಂದು ಸಂಭ್ರಮದ ಮುಖದೊಂದಿಗೆ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಹೇಳಿದರು.

ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಎರಡನೇ ಲಾಂಡ್ ಪ್ಯಾಡ್‌ನಿಂದ ಚಂದ್ರಯಾನ-3 ನೌಕೆಯನ್ನು ಹೊತ್ತ ಜಿಎಸ್‌ಎಲ್‌ವಿ ಮಾರ್ಕ್-3 ರಾಕೆಟ್ ಶುಕ್ರವಾರ ನಿಗದಿತ ಸಮಯ ಮಧ್ಯಾಹ್ನ 2.35ಕ್ಕೆ ಸರಿಯಾಗಿ ಉಡಾವಣೆಗೊಂಡಿತು. ನಂತರ ಚಂದ್ರಯಾನ ನೌಕೆಯು ತನ್ನ ಎಲ್ಲಾ ಮೂರೂ ಆರಂಭಿಕ ಹಂತಗಳನ್ನು ಯಶಸ್ವಿಯಾಗಿ ಪೂರೈಸುವುದರೊಂದಿಗೆ ನಿಗದಿತ ಕಕ್ಷೆ ಸೇರ್ಪಡೆಗೊಂಡಿತು.

ಈ ವೇಳೆ ಎಸ್ ಸೋಮನಾಥ್ ಹಾಗೂ ಇಸ್ರೋದ ಇತರೆ ವಿಜ್ಞಾನಿಗಳ ತಂಡದ ಸಂಭ್ರಮಕ್ಕೆ ಪಾರವಿರಲಿಲ್ಲ. ಇನ್ನು 40 ದಿನಗಳ ಬಳಿಕ ಆಗಸ್ಟ್ 23 ಅಥವಾ 24ರಂದು ಚಂದ್ರನ ನೆಲದ ಮೇಲೆ ವಿಕ್ರಂ ಲ್ಯಾಂಡರ್ ಅನ್ನು ಸುಗಮವಾಗಿ ಇಳಿಸುವ ಅತ್ಯಂತ ಸಾಹಸಮಯ ಕಾರ್ಯ ಬಾಕಿ ಇದ್ದು, ಈ ಸಮಯಕ್ಕಾಗಿ ವಿಜ್ಞಾನಿಗಳು ಕಾತರದಿಂದ ಕಾಯಲಿದ್ದಾರೆ.

ಉಡಾವಣೆ ಯಶಸ್ವಿಯಾದ ಬಳಿಕ ಮಾತನಾಡಿದ ಎಸ್ ಸೋಮನಾಥ್, ಎಲ್‌ವಿಎಂ 3- ಎಂ4 ರಾಕೆಟ್ ಚಂದ್ರಯಾನ-3 ಅನ್ನು ಉದ್ದೇಶಿತ ಕಕ್ಷೆಗೆ ಸೇರ್ಪಡೆ ಮಾಡಿದೆ ಎಂದು ತಿಳಿಸಿದರು. “ಎಲ್ಲವೂ ಅಂದುಕೊಂಡಂತೆ ಆದರೆ ಆಗಸ್ಟ್ 23ರ ಸಂಜೆ 5.47ರ ಸುಮಾರಿಗೆ ಚಂದ್ರನ ಮೇಲೆ ಲ್ಯಾಂಡರ್ ಸುಗಮವಾಗಿ ಇಳಿಯಲಿದೆ” ಎಂದು ಹೇಳಿದರು.

ವಿಕ್ರಂ ಸಾರಾಭಾಯ್ ಕನಸು: “ಖಂಡಿತವಾಗಿಯೂ ಇದು ಭಾರತದ ವೈಭವದ ಗಳಿಗೆ ಮತ್ತು ಇತಿಹಾಸ ನಿರ್ಮಾಣ ಕಾರ್ಯದಲ್ಲಿ ಭಾಗಿಯಾದ ನಮಗೆಲ್ಲರಿಗೂ ಮಹತ್ವದ ಕ್ಷಣ. ಭಾರತಕ್ಕೆ ಹೆಮ್ಮೆ ಉಂಟುಮಾಡಿದ್ದಕ್ಕಾಗಿ ಇಸ್ರೋಗೆ ಧನ್ಯವಾದಗಳು” ಎಂದು ಬಾಹ್ಯಾಕಾಶ ಸಚಿವ ಡಾ. ಜಿತೇಂದ್ರ ಸಿಂಗ್ ಹೇಳಿದರು.

“ಇದು ದಿಗ್ವಿಜಯದ ದಿನ. ಆರು ದಶಕಗಳ ಹಿಂದೆ ಡಾ. ವಿಕ್ರಂ ಸಾರಾಭಾಯ್ ಅವರು ಕಂಡ ಕನಸು ಈಡೇರಿದ ದಿನ. ಯಾವುದೇ ಮುಜುಗರ ಅಥವಾ ಹಿಂಜರಿಕೆ ಇಲ್ಲದೆ ಬೈಸಿಕಲ್‌ನಲ್ಲಿ ಉಡಾವಣಾ ವಾಹನಗಳನ್ನು ಸಾಗಿಸಿದ ಆ ಚಿತ್ರಗಳನ್ನು ಕಂಡಾಗ, ವಿಕ್ರಂ ಮತ್ತು ಅವರ ತಂಡಕ್ಕೆ ಭಾರತದ ಶಕ್ತಿಯ ಬಗ್ಗೆ ನಂಬಿಕೆ ಇತ್ತು ಎಂಬ ಅರಿವಾಗುತ್ತದೆ. ಮತ್ತು ನಾವು ಈಗ ಭಾರತದ ಸ್ವದೇಶಿ ಸಾಮರ್ಥ್ಯಗಳನ್ನು ಬಲಪಡಿಸುತ್ತಿದ್ದೇವೆ” ಎಂದು ಬಣ್ಣಿಸಿದರು.

ನರೇಂದ್ರ ಮೋದಿ ಟ್ವೀಟ್: “ಚಂದ್ರಯಾನ-3 ಭಾರತದ ಬಾಹ್ಯಾಕಾಶ ಚರಿತ್ರೆಯಲ್ಲಿ ಹೊಸ ಅಧ್ಯಾಯವನ್ನು ಬರೆದಿದೆ. ಇದು ಎತ್ತರಕ್ಕೆ ಸಾಗುತ್ತಾ, ಪ್ರತಿ ಭಾರತೀಯನ ಕನಸು ಹಾಗೂ ಮಹತ್ವಾಕಾಂಕ್ಷೆಯನ್ನು ಮೇಲೆ ಕೊಂಡೊಯ್ಯುತ್ತಿದೆ. ಈ ಮಹತ್ವದ ಸಾಧನೆಯು ನಮ್ಮ ವಿಜ್ಞಾನಿಗಳ ಅವಿರತ ಬದ್ಧತೆಗೆ ಸಾಕ್ಷಿ. ಅವರ ಉತ್ಸಾಹ ಮತ್ತು ದಕ್ಷತೆಗೆ ನಾನು ವಂದಿಸುತ್ತೇನೆ!” ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

“ಭಾರತವು ಇಂದು ಚಂದ್ರಯಾನ- 3ರ ಯಶಸ್ವಿ ಉಡಾವಣೆಯೊಂದಿಗೆ ತನ್ನ ಐತಿಹಾಸಿಕ ಬಾಹ್ಯಾಕಾಶ ಪ್ರಯಾಣವನ್ನು ಆರಂಭಿಸಿದೆ. ಹಲವು ಪೀಳಿಗೆಗಳು ಸಂಭ್ರಮಿಸುವಂತಹ ಬಾಹ್ಯಾಕಾಶ ಚರಿತ್ರೆಯನ್ನು ಸೃಷ್ಟಿಸುವ ಹಾದಿಯಲ್ಲಿ ಭಾರತವನ್ನು ಕೊಂಡೊಯ್ಯಲು ಸತತ ಪರಿಶ್ರಮಪಡುತ್ತಿರುವ ಇಸ್ರೋ ವಿಜ್ಞಾನಿಗಳಿಗೆ ಮನಃಪೂರ್ವಕ ಅಭಿನಂದನೆಗಳು” ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಸಿದ್ದರಾಮಯ್ಯ ಅಭಿನಂದನೆ: “ಚಂದ್ರಯಾನ-3ರ ಯಶಸ್ವಿ ಉಡಾವಣೆಗಾಗಿ ಇಸ್ರೋಗೆ ಅಭಿನಂದನೆಗಳು. ಇದು ಭಾರತಕ್ಕೆ ಹೆಮ್ಮೆಯ ಕ್ಷಣ ಮತ್ತು ಭಾರತದ ಬಾಹ್ಯಾಕಾಶ ಸಂಶೋಧನೆ ಹಾಗೂ ಆವಿಷ್ಕಾರದಲ್ಲಿ ಹೊಸ ಮೈಲುಗಲ್ಲು. ಈ ಸಾಧನೆಯು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ನಡೆಸಲು ಯುವ ಮನಸ್ಸುಗಳಿಗೆ ಸ್ಫೂರ್ತಿ ನೀಡುತ್ತದೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

andolanait

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

7 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

20 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

20 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

20 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

20 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

21 hours ago