BREAKING NEWS

ಹಠಾತ್ ಹೃದಯಾಘಾತ : ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ವೈದ್ಯ ಸಾವು

ರಾಯಚೂರು : ಹಠಾತ್ ಹೃದಯಾಘಾತದಿಂದ ಯುವಕರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕರ್ತವ್ಯದಲ್ಲಿದ್ದ ಯುವ ವೈದ್ಯ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಈ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಅಕ್ಕಮಹಾದೇವಿ ಆಸ್ಪತ್ರೆಯಲ್ಲಿ ನಡೆದಿದೆ. 34 ವರ್ಷದ ಜನರಲ್ ಸರ್ಜನ್ ಡಾ. ಚಂದ್ರಶೇಖರ ಮಾದಿನೂರು ಸಾವನ್ನಪ್ಪಿರುವ ವೈದ್ಯ.

ಎಂದಿನಂತೆ ರೋಗಿಗಳನ್ನ ಪರೀಕ್ಷೆ ಮಾಡಿ ಚಿಕಿತ್ಸೆ ನೀಡಿದ್ದರು. ಸ್ವಲ್ಪ ಒತ್ತಡ ಎನ್ನಿಸಿದ್ದರಿಂದ ವಿಶ್ರಾಂತಿ ಪಡೆಯಲು ಮನೆಗೆ ತೆರಳಲು ಮುಂದಾದಾಗ ಮೆಟ್ಟಿಲು ಹತ್ತುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಆಸ್ಪತ್ರೆ ಮೇಲ್ಮಹಡಿಯಲ್ಲೇ ಮನೆಯಿದ್ದಿದುದರಿಂದ ಮೆಟ್ಟಿಲು ಹತ್ತಿ ಹೋಗುವಾಗ ಎದೆನೋವು ಕಾಣಿಸಿಕೊಂಡಿದೆ. ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಠಾತ್ ಹೃದಯಾಘಾತದಿಂದ ಸಾವು ಸಂಭವಿಸಿದ್ದು ಇಡೀ ಆಸ್ಪತ್ರೆಯಲ್ಲಿ ನೀರವ ಮೌನ ಆವರಿಸಿದೆ.

lokesh

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ದೆಹಲಿ ಶೃಂಗ ಸಭೆ ಹೊರ ಹಾಕಿದ ಎಐ ಒಳನೋಟ

ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ…

24 mins ago

ದ್ವಿತೀಯ ಪಿಯುಸಿ: 5, 255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

ನವೀನ್ ಡಿಸೋಜ ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು…

29 mins ago

ಬೇಬಿ ಬೆಟ್ಟದ ಜಾತ್ರೆಯಲ್ಲಿ ಹಳ್ಳಿಕಾರ್ ದರ್ಬಾರ್!

ಎಸ್.ನಾಗಸುಂದರ್ ೫೦ ಸಾವಿರ ರೂ.ಗಳಿಂದ ೧೫ ಲಕ್ಷ ರೂ.ವರೆಗೆ ಬೆಲೆಬಾಳುವ ರಾಸುಗಳ ಪ್ರದರ್ಶನ ಪಾಂಡವಪುರ: ತಾಲ್ಲೂಕಿನ ಬೇಬಿಬೆಟ್ಟದಲ್ಲಿ ನಡೆಯುತ್ತಿರುವ ಭಾರೀ…

34 mins ago

ಹೀಗೊಂದು ಬೆಕ್ಕಾಯಣ

ಭಾರತಿ ಬಿ.ವಿ. ಕದ್ದುಮುಚ್ಚಿ ನಮ್ಮ ಮನೆಯ ಗರಾಜಿಗೆ ಅಂಟಿದಂತಿದ್ದ ಕೋಣೆಯಲ್ಲಿ ಮರಿ ಹಾಕಿ ಬೀಡುಬಿಟ್ಟ ಮೊದಲಲ್ಲಿ ನಮಗೆ ಹೆದರುತ್ತಿದ್ದ ಬೆಕ್ಕು…

39 mins ago

ಜಾತಿಬೇಲಿಯ ಕಳಚಿಬಿಡುವ ಮಾರಿಹಬ್ಬಗಳು

ಅಜಯ್ ಕುಮಾರ್ ಎಂ.ಗುಂಬಳ್ಳಿ ಮಾರಿಹಬ್ಬವೆಂದರೆ ಎಲ್ಲಾ ಕೋಮಿನ ಜನ ಸೇರಿ ನಡೆಸುತ್ತಾರೆ. ಅವರವರೇ ದೇವರ ಕೈಂಕರ್ಯಗಳನ್ನು ವಿಭಾಗಿಸಿಕೊಂಡು ಹಬ್ಬ ಮಾಡುತ್ತಾರೆ…

45 mins ago

‘ಗಾಡ್ ಫಾದರ್’ ಇಲ್ಲದೇ ಬರೆಯಲಾಗುವುದಿಲ್ಲವೇ?

ಅಕ್ಷತಾ ಏಕಲವ್ಯ ದ್ರೋಣರನ್ನು ಗುರುಗಳೆಂದು ಒಪ್ಪಿ, ಮರೆಯಲ್ಲೇ ನಿಂತು ಬಿಲ್ವಿದ್ಯೆ ಪ್ರವೀಣನಾದರೂ ದ್ರೋಣರು ಒಪ್ಪಿಕೊಂಡದ್ದು ಅರ್ಜುನನ ಮೇಲಿನ ಶಿಷ್ಯ ಪ್ರೀತಿಯನ್ನು!…

48 mins ago