ರಾಯಚೂರು : ಹಠಾತ್ ಹೃದಯಾಘಾತದಿಂದ ಯುವಕರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕರ್ತವ್ಯದಲ್ಲಿದ್ದ ಯುವ ವೈದ್ಯ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಈ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಅಕ್ಕಮಹಾದೇವಿ ಆಸ್ಪತ್ರೆಯಲ್ಲಿ ನಡೆದಿದೆ. 34 ವರ್ಷದ ಜನರಲ್ ಸರ್ಜನ್ ಡಾ. ಚಂದ್ರಶೇಖರ ಮಾದಿನೂರು ಸಾವನ್ನಪ್ಪಿರುವ ವೈದ್ಯ.
ಎಂದಿನಂತೆ ರೋಗಿಗಳನ್ನ ಪರೀಕ್ಷೆ ಮಾಡಿ ಚಿಕಿತ್ಸೆ ನೀಡಿದ್ದರು. ಸ್ವಲ್ಪ ಒತ್ತಡ ಎನ್ನಿಸಿದ್ದರಿಂದ ವಿಶ್ರಾಂತಿ ಪಡೆಯಲು ಮನೆಗೆ ತೆರಳಲು ಮುಂದಾದಾಗ ಮೆಟ್ಟಿಲು ಹತ್ತುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಆಸ್ಪತ್ರೆ ಮೇಲ್ಮಹಡಿಯಲ್ಲೇ ಮನೆಯಿದ್ದಿದುದರಿಂದ ಮೆಟ್ಟಿಲು ಹತ್ತಿ ಹೋಗುವಾಗ ಎದೆನೋವು ಕಾಣಿಸಿಕೊಂಡಿದೆ. ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಠಾತ್ ಹೃದಯಾಘಾತದಿಂದ ಸಾವು ಸಂಭವಿಸಿದ್ದು ಇಡೀ ಆಸ್ಪತ್ರೆಯಲ್ಲಿ ನೀರವ ಮೌನ ಆವರಿಸಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…