BREAKING NEWS

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟ : 52 ಜನ ಸಾವು

ಕರಾಚಿ : ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ ಪ್ರಾಂತ್ಯದ ಮಸೀದಿಯೊಂದರ ಬಳಿ ಶುಕ್ರವಾರ ಪ್ರವಾದಿ ಮುಹಮ್ಮದ್ ಅವರ ಜನ್ಮದಿನದ ಅಂಗವಾಗಿ ರ‍್ಯಾಲಿ ನಡೆಸಲು ಜನರು ಸೇರಿದ್ದಾಗ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ 52 ಜನರು ಸಾವಿಗೀಡಾಗಿದ್ದಾರೆ ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಮಸ್ತುಂಗ್ ಜಿಲ್ಲೆಯ ಮದೀನಾ ಮಸೀದಿ ಬಳಿ ಸ್ಫೋಟ ಸಂಭವಿಸಿದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ. ರ‍್ಯಾಲಿ ನಡೆಯುವ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಮಸ್ತುಂಗ್‌ನ ಉಪ ಪೊಲೀಸ್ ವರಿಷ್ಠಾಧಿಕಾರಿ ನವಾಜ್ ಗಶ್ಕೋರಿ ಕೂಡ ಸ್ಫೋಟದಲ್ಲಿ ಸಾವಿಗೀಡಾಗಿದ್ದಾರೆ.

ಪ್ರವಾದಿ ಮುಹಮ್ಮದ್ ಅವರ ಜನ್ಮದಿನದ ಈದ್ ಮಿಲಾದುನ್ ನಬಿಯನ್ನು ಆಚರಿಸಲು ಜನರು ಒಂದೆಡೆ ಸೇರಿದ್ದಾಗ ಪ್ರಬಲ ಸ್ಫೋಟ ಸಂಭವಿಸಿದೆ.

ನಗರದ ಸ್ಟೇಷನ್ ಹೌಸ್ ಆಫೀಸರ್ ಮೊಹಮ್ಮದ್ ಜಾವೇದ್ ಲೆಹ್ರಿ ಅವರು, ಆತ್ಮಾಹುತಿ ಬಾಂಬ್ ದಾಳಿಯಿಂದ ಸ್ಫೋಟ ಸಂಭವಿಸಿದ್ದು, ಡಿಎಸ್‌ಪಿ ಅವರ ಕಾರಿನ ಪಕ್ಕದಲ್ಲಿಯೇ ಆತ್ಮಾಹುತಿ ಬಾಂಬ್ ಅನ್ನು ಸ್ಫೋಟಿಸಿಕೊಳ್ಳಲಾಯಿತು. ಸದ್ಯ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿಯನ್ನು ವಿಧಿಸಲಾಗಿದ್ದು, ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಹೇಳಿದರು.

ಸ್ಫೋಟದಲ್ಲಿ ಕನಿಷ್ಠ 52 ಜನರು ಸಾವಿಗೀಡಾಗಿದ್ದಾರೆ ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಶಾಹೀದ್ ನವಾಬ್ ಘೌಸ್ ಬಕ್ಷ್ ರೈಸಾನಿ ಸ್ಮಾರಕ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸಯೀದ್ ಮಿರ್ವಾನಿ ಹೇಳಿದ್ದಾಗಿ ಡಾನ್ ಪತ್ರಿಕೆ ವರದಿ ಮಾಡಿದೆ.

ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಬಲೂಚಿಸ್ತಾನದ ಮಧ್ಯಂತರ ಮಾಹಿತಿ ಸಚಿವ ಜಾನ್ ಅಚಕ್ಝೈ ಅವರು ರಕ್ಷಣಾ ತಂಡಗಳನ್ನು ಮಸ್ತುಂಗ್‌ಗೆ ಕಳುಹಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಕ್ವೆಟ್ಟಾಕ್ಕೆ ವರ್ಗಾಯಿಸಲಾಗುತ್ತಿದೆ ಮತ್ತು ಎಲ್ಲಾ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿಯನ್ನು ವಿಧಿಸಲಾಗಿದೆ ಎಂದು ಹೇಳಿದರು.

ಶತ್ರುಗಳು ವಿದೇಶದ ಬೆಂಬಲದೊಂದಿಗೆ ಬಲೂಚಿಸ್ತಾನದಲ್ಲಿ ಧಾರ್ಮಿಕ ಸಹಿಷ್ಣುತೆ ಮತ್ತು ಶಾಂತಿಯನ್ನು ನಾಶಮಾಡಲು ಬಯಸಿದ್ದಾರೆ. ಸ್ಫೋಟವು ಅಸಹನೀಯವಾಗಿದೆ. ಸ್ಫೋಟಕ್ಕೆ ಕಾರಣರಾದವರನ್ನು ಬಂಧಿಸುವಂತೆ ನಿಯೋಜಿತ ಮುಖ್ಯಮಂತ್ರಿ ಅಲಿ ಮರ್ದಾನ್ ಡೊಮ್ಕಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಅವರು ಹೇಳಿದರು.

ಈ ಮಧ್ಯೆ, ಹಂಗಾಮಿ ಆಂತರಿಕ ಸಚಿವ ಸರ್ಫ್ರಾಜ್ ಅಹ್ಮದ್ ಬುಗ್ತಿ ಸ್ಫೋಟವನ್ನು ತೀವ್ರವಾಗಿ ಖಂಡಿಸಿದ್ದಾರೆ.

lokesh

Recent Posts

ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ನಿಧನಕ್ಕೆ ಗಣ್ಯಾತಿಗಣ್ಯರ ಸಂತಾಪ

ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್‌ ಪವಾರ್‌ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…

16 mins ago

ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ದುರ್ಮರಣ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್‌ ಪವಾರ್‌ ನಿಧನರಾಗಿದ್ದಾರೆ. ಅಜಿತ್‌…

40 mins ago

ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನ: ಡಿಸಿಎಂ ಅಜಿತ್‌ ಪವಾರ್‌ ಸೇರಿ 5 ಮಂದಿ ದುರ್ಮರಣ

ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…

1 hour ago

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

5 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

5 hours ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

5 hours ago