BREAKING NEWS

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟ : 52 ಜನ ಸಾವು

ಕರಾಚಿ : ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ ಪ್ರಾಂತ್ಯದ ಮಸೀದಿಯೊಂದರ ಬಳಿ ಶುಕ್ರವಾರ ಪ್ರವಾದಿ ಮುಹಮ್ಮದ್ ಅವರ ಜನ್ಮದಿನದ ಅಂಗವಾಗಿ ರ‍್ಯಾಲಿ ನಡೆಸಲು ಜನರು ಸೇರಿದ್ದಾಗ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ 52 ಜನರು ಸಾವಿಗೀಡಾಗಿದ್ದಾರೆ ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಮಸ್ತುಂಗ್ ಜಿಲ್ಲೆಯ ಮದೀನಾ ಮಸೀದಿ ಬಳಿ ಸ್ಫೋಟ ಸಂಭವಿಸಿದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ. ರ‍್ಯಾಲಿ ನಡೆಯುವ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಮಸ್ತುಂಗ್‌ನ ಉಪ ಪೊಲೀಸ್ ವರಿಷ್ಠಾಧಿಕಾರಿ ನವಾಜ್ ಗಶ್ಕೋರಿ ಕೂಡ ಸ್ಫೋಟದಲ್ಲಿ ಸಾವಿಗೀಡಾಗಿದ್ದಾರೆ.

ಪ್ರವಾದಿ ಮುಹಮ್ಮದ್ ಅವರ ಜನ್ಮದಿನದ ಈದ್ ಮಿಲಾದುನ್ ನಬಿಯನ್ನು ಆಚರಿಸಲು ಜನರು ಒಂದೆಡೆ ಸೇರಿದ್ದಾಗ ಪ್ರಬಲ ಸ್ಫೋಟ ಸಂಭವಿಸಿದೆ.

ನಗರದ ಸ್ಟೇಷನ್ ಹೌಸ್ ಆಫೀಸರ್ ಮೊಹಮ್ಮದ್ ಜಾವೇದ್ ಲೆಹ್ರಿ ಅವರು, ಆತ್ಮಾಹುತಿ ಬಾಂಬ್ ದಾಳಿಯಿಂದ ಸ್ಫೋಟ ಸಂಭವಿಸಿದ್ದು, ಡಿಎಸ್‌ಪಿ ಅವರ ಕಾರಿನ ಪಕ್ಕದಲ್ಲಿಯೇ ಆತ್ಮಾಹುತಿ ಬಾಂಬ್ ಅನ್ನು ಸ್ಫೋಟಿಸಿಕೊಳ್ಳಲಾಯಿತು. ಸದ್ಯ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿಯನ್ನು ವಿಧಿಸಲಾಗಿದ್ದು, ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಹೇಳಿದರು.

ಸ್ಫೋಟದಲ್ಲಿ ಕನಿಷ್ಠ 52 ಜನರು ಸಾವಿಗೀಡಾಗಿದ್ದಾರೆ ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಶಾಹೀದ್ ನವಾಬ್ ಘೌಸ್ ಬಕ್ಷ್ ರೈಸಾನಿ ಸ್ಮಾರಕ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸಯೀದ್ ಮಿರ್ವಾನಿ ಹೇಳಿದ್ದಾಗಿ ಡಾನ್ ಪತ್ರಿಕೆ ವರದಿ ಮಾಡಿದೆ.

ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಬಲೂಚಿಸ್ತಾನದ ಮಧ್ಯಂತರ ಮಾಹಿತಿ ಸಚಿವ ಜಾನ್ ಅಚಕ್ಝೈ ಅವರು ರಕ್ಷಣಾ ತಂಡಗಳನ್ನು ಮಸ್ತುಂಗ್‌ಗೆ ಕಳುಹಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಕ್ವೆಟ್ಟಾಕ್ಕೆ ವರ್ಗಾಯಿಸಲಾಗುತ್ತಿದೆ ಮತ್ತು ಎಲ್ಲಾ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿಯನ್ನು ವಿಧಿಸಲಾಗಿದೆ ಎಂದು ಹೇಳಿದರು.

ಶತ್ರುಗಳು ವಿದೇಶದ ಬೆಂಬಲದೊಂದಿಗೆ ಬಲೂಚಿಸ್ತಾನದಲ್ಲಿ ಧಾರ್ಮಿಕ ಸಹಿಷ್ಣುತೆ ಮತ್ತು ಶಾಂತಿಯನ್ನು ನಾಶಮಾಡಲು ಬಯಸಿದ್ದಾರೆ. ಸ್ಫೋಟವು ಅಸಹನೀಯವಾಗಿದೆ. ಸ್ಫೋಟಕ್ಕೆ ಕಾರಣರಾದವರನ್ನು ಬಂಧಿಸುವಂತೆ ನಿಯೋಜಿತ ಮುಖ್ಯಮಂತ್ರಿ ಅಲಿ ಮರ್ದಾನ್ ಡೊಮ್ಕಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಅವರು ಹೇಳಿದರು.

ಈ ಮಧ್ಯೆ, ಹಂಗಾಮಿ ಆಂತರಿಕ ಸಚಿವ ಸರ್ಫ್ರಾಜ್ ಅಹ್ಮದ್ ಬುಗ್ತಿ ಸ್ಫೋಟವನ್ನು ತೀವ್ರವಾಗಿ ಖಂಡಿಸಿದ್ದಾರೆ.

lokesh

Recent Posts

ಜಾನಕಿ ಅಮ್ಮ ಮೊದಲು, ಕೊನೆಯ ಹಾಡು ಹಾಡಿದ್ದು, ಗಾಯನ ನಿಲ್ಲಿಸಿದ್ದು ಮೈಸೂರಿನಲ್ಲೇ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…

12 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಎಸ್‌ಐಆರ್ : ಕರ್ನಾಟಕದ ಕ್ರಮ ಬಿಜೆಪಿಗೆ ಕಹಿ ಗುಳಿಗೆ !

ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…

13 mins ago

ಮೈಸೂರು | ನೆಚ್ಚಿನ ತೋಟದಲ್ಲಿ ಎಸ್.ಜಾನಕಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ

ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು,…

2 hours ago

ಜಾನಕಿ ಅಮ್ಮನ ಸ್ಮಾರಕ ನಿರ್ಮಾಣವಾಗಬೇಕು : ಖ್ಯಾತ ನಿರ್ದೇಶಕ ಹಂಸಲೇಖ

ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು…

3 hours ago

ಹಾಡುಪಾಡು | ಎಸ್‌ಐಆರ್‌

ಫಾತಿಮಾ ರಲಿಯಾ ಯು ಟ್ಯೂಬ್‌ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್‌ಜಿಪಿಟಿಯ ಬಳಿ…

3 hours ago

ಹಾಡುಪಾಡು | ಯರಕನಗದ್ದೆ ಪೋಡಿನಲ್ಲಿ ವೋಟು ಕಾರ್ಡಿನ ಪರದಾಟ

ಜಯಶಂಕರ್ ನಾನು ಶಾಲೆಯ ಅಂಗಳದಲ್ಲಿ ಕುಳಿತುಕೊಂಡು ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವಂತಹ ಸಂದರ್ಭದಲ್ಲಿ ನಾಲ್ಕಾರು ಸೋಲಿಗರು ಗುಂಪಿನಲ್ಲಿ ಏನೇನೋ ಗೊಣಗಾಡಿಕೊಂಡು ಹೋಗುತ್ತಿದ್ದರು.…

3 hours ago