BREAKING NEWS

ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷರಾಗಿ ಸುನೀಲ್ ತಟ್ಕರೆ ನೇಮಿಸಿದ ಪ್ರಫುಲ್ ಪಟೇಲ್

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಕಾರ್ಯಾಧ್ಯಕ್ಷ ಸ್ಥಾನದಿಂದ ವಜಾಗೊಂಡ ಬೆನ್ನಲ್ಲೇ, ಪ್ರಫುಲ್ ಪಟೇಲ್ ಅವರು ಸೋಮವಾರ ಸಂಜೆ ಸಂಸದ ಸುನೀಲ್ ತಟ್ಕರೆ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಿರುವುದಾಗಿ ಘೋಷಿಸಿದ್ದಾರೆ.

ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷರಾಗಿದ್ದ ಜಯಂತ್ ಪಾಟೀಲ್ ಅವರನ್ನು ವಜಾಗೊಳಿಸಿ, ಅವರ ಸ್ಥಾನ ತಟ್ಕರೆ ಅವರನ್ನು ನೇಮಕ ಮಾಡಲಾಗಿದೆ ಮತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಎನ್ ಸಿಪಿ ಶಾಸಕಾಂಗ ಪಕ್ಷಧ ನಾಯಕರನ್ನಾಗಿ ನೇಮಿಸಲಾಗಿದೆ.

ಇದಕ್ಕೂ ಮೊದಲು, ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಪಕ್ಷದ ವಿರುದ್ಧ ಬಂಡಾಯವೆದ್ದ ಅಜಿತ್ ಪವಾರ್ ಪರ ನಿಂತ ಪ್ರಫುಲ್ ಪಟೇಲ್ ಮತ್ತು ತಟ್ಕರೆ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದರು.

ಕಳೆದ ತಿಂಗಳು ಎನ್‌ಸಿಪಿ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ರಾಜ್ಯಸಭಾ ಸದಸ್ಯ ಪಟೇಲ್ ಅವರು ಮುಂಬೈನಲ್ಲಿ ಪತ್ರಿಕಾಗೋಷ್ಠಿಯ ನಡೆಸಿ, ತಟ್ಕರೆ ಅವರಿಗೆ ಅಧಿಕಾರ ಹಸ್ತಾಂತರಿಸುವಂತೆ ಜಯಂತ್ ಪಾಟೀಲ್ ಅವರಿಗೆ ಸೂಚಿಸಿರುವುದಾಗಿ ಹೇಳಿದ್ದಾರೆ.

ಅಜಿತ್ ಪವಾರ್ ಎನ್‌ಸಿಪಿಯ ಶಾಸಕಾಂಗ ಪಕ್ಷದ ನಾಯಕರಾಗಲಿದ್ದಾರೆ ಎಂದು ಪಟೇಲ್ ತಿಳಿಸಿದ್ದಾರೆ.

“ಇಂದು ಗುರು ಪೂರ್ಣಿಮೆ; ಶರದ್ ಪವಾರ್ ನಮ್ಮನ್ನು ಆಶೀರ್ವದಿಸಲಿ ಎಂದು ನಾವೆಲ್ಲರೂ ಬಯಸುತ್ತೇವೆ” ಎಂದು ಪಟೇಲ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು, ತಮ್ಮೊಂದಿಗೆ ಅತಿ ಹೆಚ್ಚು ಎನ್‌ಸಿಪಿ ಶಾಸಕರು ಇದ್ದು, ಪಕ್ಷದ ಇತರ ಶಾಸಕರಾದ ಜಯಂತ್ ಪಾಟೀಲ್ ಮತ್ತು ಜಿತೇಂದ್ರ ಅವದ್ ಅವರನ್ನು ಅನರ್ಹಗೊಳಿಸುವಂತೆ ವಿಧಾನಸಭಾ ಸ್ಪೀಕರ್‌ಗೆ ಪತ್ರ ನೀಡಿರುವುದಾಗಿ ತಿಳಿಸಿದ್ದಾರೆ.

ಪಕ್ಷ ಮತ್ತು ಶಾಸಕರು ತಮ್ಮೊಂದಿಗಿದ್ದು, ತಮ್ಮ ಹಾಗೂ ಹೊಸದಾಗಿ ಪ್ರಮಾಣ ವಚನ ಸ್ವೀಕರಿಸಿದ ಎಂಟು ಸಚಿವರ ಅನರ್ಹತೆಗೆ ನೋಟಿಸ್ ನೀಡಿರುವುದು ಅರ್ಥಹೀನ ಎಂದು ಅಜಿತ್ ಪವಾರ್ ಹೇಳಿದ್ದಾರೆ.

andolanait

Recent Posts

ಆಕಸ್ಮಿಕ ಬೆಂಕಿ : ಒಕ್ಕಲೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

54 mins ago

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು-ಪೇರು ; ಸದನ ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…

1 hour ago

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…

1 hour ago

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…

1 hour ago

ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…

1 hour ago

ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…

1 hour ago