BREAKING NEWS

ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷರಾಗಿ ಸುನೀಲ್ ತಟ್ಕರೆ ನೇಮಿಸಿದ ಪ್ರಫುಲ್ ಪಟೇಲ್

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಕಾರ್ಯಾಧ್ಯಕ್ಷ ಸ್ಥಾನದಿಂದ ವಜಾಗೊಂಡ ಬೆನ್ನಲ್ಲೇ, ಪ್ರಫುಲ್ ಪಟೇಲ್ ಅವರು ಸೋಮವಾರ ಸಂಜೆ ಸಂಸದ ಸುನೀಲ್ ತಟ್ಕರೆ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಿರುವುದಾಗಿ ಘೋಷಿಸಿದ್ದಾರೆ.

ಮಹಾರಾಷ್ಟ್ರ ಎನ್‌ಸಿಪಿ ಅಧ್ಯಕ್ಷರಾಗಿದ್ದ ಜಯಂತ್ ಪಾಟೀಲ್ ಅವರನ್ನು ವಜಾಗೊಳಿಸಿ, ಅವರ ಸ್ಥಾನ ತಟ್ಕರೆ ಅವರನ್ನು ನೇಮಕ ಮಾಡಲಾಗಿದೆ ಮತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಎನ್ ಸಿಪಿ ಶಾಸಕಾಂಗ ಪಕ್ಷಧ ನಾಯಕರನ್ನಾಗಿ ನೇಮಿಸಲಾಗಿದೆ.

ಇದಕ್ಕೂ ಮೊದಲು, ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಪಕ್ಷದ ವಿರುದ್ಧ ಬಂಡಾಯವೆದ್ದ ಅಜಿತ್ ಪವಾರ್ ಪರ ನಿಂತ ಪ್ರಫುಲ್ ಪಟೇಲ್ ಮತ್ತು ತಟ್ಕರೆ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದರು.

ಕಳೆದ ತಿಂಗಳು ಎನ್‌ಸಿಪಿ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ರಾಜ್ಯಸಭಾ ಸದಸ್ಯ ಪಟೇಲ್ ಅವರು ಮುಂಬೈನಲ್ಲಿ ಪತ್ರಿಕಾಗೋಷ್ಠಿಯ ನಡೆಸಿ, ತಟ್ಕರೆ ಅವರಿಗೆ ಅಧಿಕಾರ ಹಸ್ತಾಂತರಿಸುವಂತೆ ಜಯಂತ್ ಪಾಟೀಲ್ ಅವರಿಗೆ ಸೂಚಿಸಿರುವುದಾಗಿ ಹೇಳಿದ್ದಾರೆ.

ಅಜಿತ್ ಪವಾರ್ ಎನ್‌ಸಿಪಿಯ ಶಾಸಕಾಂಗ ಪಕ್ಷದ ನಾಯಕರಾಗಲಿದ್ದಾರೆ ಎಂದು ಪಟೇಲ್ ತಿಳಿಸಿದ್ದಾರೆ.

“ಇಂದು ಗುರು ಪೂರ್ಣಿಮೆ; ಶರದ್ ಪವಾರ್ ನಮ್ಮನ್ನು ಆಶೀರ್ವದಿಸಲಿ ಎಂದು ನಾವೆಲ್ಲರೂ ಬಯಸುತ್ತೇವೆ” ಎಂದು ಪಟೇಲ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು, ತಮ್ಮೊಂದಿಗೆ ಅತಿ ಹೆಚ್ಚು ಎನ್‌ಸಿಪಿ ಶಾಸಕರು ಇದ್ದು, ಪಕ್ಷದ ಇತರ ಶಾಸಕರಾದ ಜಯಂತ್ ಪಾಟೀಲ್ ಮತ್ತು ಜಿತೇಂದ್ರ ಅವದ್ ಅವರನ್ನು ಅನರ್ಹಗೊಳಿಸುವಂತೆ ವಿಧಾನಸಭಾ ಸ್ಪೀಕರ್‌ಗೆ ಪತ್ರ ನೀಡಿರುವುದಾಗಿ ತಿಳಿಸಿದ್ದಾರೆ.

ಪಕ್ಷ ಮತ್ತು ಶಾಸಕರು ತಮ್ಮೊಂದಿಗಿದ್ದು, ತಮ್ಮ ಹಾಗೂ ಹೊಸದಾಗಿ ಪ್ರಮಾಣ ವಚನ ಸ್ವೀಕರಿಸಿದ ಎಂಟು ಸಚಿವರ ಅನರ್ಹತೆಗೆ ನೋಟಿಸ್ ನೀಡಿರುವುದು ಅರ್ಥಹೀನ ಎಂದು ಅಜಿತ್ ಪವಾರ್ ಹೇಳಿದ್ದಾರೆ.

andolanait

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

7 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

8 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

19 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

19 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

19 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

19 hours ago