ಬೆಂಗಳೂರು : ತಕ್ಷಣದ ವಿದ್ಯುತ್ ಬೇಡಿಕೆಯನ್ನು ಪರಿಹರಿಸಲು ಇಂಧನ ಕಂಪನಿಗಳು ಖಾಸಗಿ ವಿದ್ಯುತ್ ಉತ್ಪಾದಕರಿಂದ ಮುಂದಿನ ಮೂರು ದಿನಗಳಲ್ಲಿ 1,100 ಮೆಗಾವ್ಯಾಟ್ ಹೆಚ್ಚುವರಿ ವಿದ್ಯುತ್ ಅನ್ನು ಪಡೆಯಲಿವೆ. ರಾಜ್ಯ ಸರ್ಕಾರ ವಿದ್ಯುತ್ ಕಾಯ್ದೆಯ ಸೆಕ್ಷನ್ 11ರ ಅಡಿಯಲ್ಲಿ ಖಾಸಗಿ ವಿದ್ಯುತ್ ಉತ್ಪಾದಕರಿಂದ ವಿದ್ಯುತ್ ಪಡೆಯಲು ಮುಂದಾಗಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಇಂಧನ ಸಚಿವ ಕೆಜೆ ಜಾರ್ಜ್, ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಸರ್ಕಾರವೂ ಗ್ರಿಡ್ನಿಂದ ವಿದ್ಯುತ್ ಖರೀದಿಸುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ವಿದ್ಯುತ್ ಉತ್ಪಾದನೆ ಶೇ 40ರಷ್ಟು ಹೆಚ್ಚಿದ್ದರೂ, 1,500 ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ ಎಂದರು.
ರೈತರಿಗೆ ದಿನಕ್ಕೆ ಐದು ಗಂಟೆ ತ್ರೀಫೇಸ್ ವಿದ್ಯುತ್ ನೀಡಲಾಗುವುದು. ರಾತ್ರಿ ಹಾಗೂ ಹಗಲು ವೇಳೆಯಲ್ಲಿ ರೊಟೇಷನ್ ಪದ್ದತಿ ಅನುಸರಿಸಿ ವಿದ್ಯುತ್ ನೀಡಲಾಗುವುದು. ನೀರಾವರಿ ಪಂಪ್ ಸೆಟ್ಗಳು (ಐಪಿ ಸೆಟ್ಗಳು) ರಾಜ್ಯದಲ್ಲಿ ಅತಿ ಹೆಚ್ಚು ವಿದ್ಯುತ್ ಗ್ರಾಹಕಗಳಾಗಿವೆ ಎಂದು ಹೇಳಿದರು.
ಐಪಿ ಸೆಟ್ಗಳಿಗೆ ಸೋಲಾರ್ ಪ್ಯಾನೆಲ್ಗಳನ್ನು ಒದಗಿಸಲು ಸಚಿವ ಸಂಪುಟದಲ್ಲಿ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ರಾಜ್ಯದಲ್ಲಿ 3.5 ಲಕ್ಷ ರೈತರಿದ್ದಾರೆ. 3,000 ಮೆಗಾವ್ಯಾಟ್ ವಿದ್ಯುತ್ನೊಂದಿಗೆ 400 ಉಪ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಗ್ರಿಡ್ನಿಂದ 500 ಮೀಟರ್ ದೂರದಲ್ಲಿ ಉಪ ಕೇಂದ್ರವಿದ್ದರೆ, ಅಲ್ಲಿ ಸೋಲಾರ್ ಉಪ ಕೇಂದ್ರ ಸ್ಥಾಪಿಸಬೇಕು ಎಂದು ನಿರ್ಧರಿಸಲಾಗಿದೆ ಎಂದು ಹೇಳಿದರು.
ಸರ್ಕಾರವು ಭೂಮಿಯನ್ನು ಗುತ್ತಿಗೆಗೆ ತೆಗೆದುಕೊಳ್ಳುತ್ತದೆ ಮತ್ತು 1 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ ಐದು ಎಕರೆ ಜಾಗವನ್ನು ಹುಡುಕುತ್ತಿದೆ. ಅಕ್ಟೋಬರ್ 20ರೊಳಗೆ ಇದಕ್ಕಾಗಿ ಟೆಂಡರ್ ಕರೆಯಲಾಗುವುದು. ಪಾವಗಡದಲ್ಲಿ ಸೌರ ವಿದ್ಯುತ್ ಪಾರ್ಕ್ ಅನ್ನು 10,000 ಎಕರೆಗೆ ವಿಸ್ತರಿಸುವ ಕೆಲಸವೂ ನಡೆಯುತ್ತಿದೆ. ಅಲ್ಲಿ ರೈತರಿಂದ ಭೂಮಿಯನ್ನು ಗುತ್ತಿಗೆಗೆ ತೆಗೆದುಕೊಳ್ಳಲಾಗುತ್ತದೆ. ಗದಗ ಮತ್ತು ಕಲಬುರ್ಗಿಯಲ್ಲೂ ಸೌರ ವಿದ್ಯುತ್ ಪಾರ್ಕ್ಗಳನ್ನು ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದರು.
ಪರಿಸ್ಥಿತಿಯ ಅವಲೋಕನಕ್ಕಾಗಿ ಇಂಧನ ಪೂರೈಕೆ ನಿಗಮಗಳ (ಎಸ್ಕಾಂ) ಮುಖ್ಯಸ್ಥರೊಂದಿಗೆ ಸಚಿವ ಜಾರ್ಜ್ ಪರಿಶೀಲನಾ ಸಭೆ ನಡೆಸಿದರು.
ಕೇಂದ್ರದ ಗ್ರಿಡ್ನಲ್ಲಿ ಕರ್ನಾಟಕದ ಪಾಲನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಆದರೆ, ಇದು ಡಿಸೆಂಬರ್ 1 ರಿಂದ ಕಾರ್ಯರೂಪಕ್ಕೆ ಬರುತ್ತದೆ. ತಕ್ಷಣದ ವಿದ್ಯುತ್ ಉತ್ಪಾದನೆಗೆ ವಿದ್ಯುತ್ ಕಾಯ್ದೆಯ ಸೆಕ್ಷನ್ 11 ಅನ್ನು ಅನ್ವಯಿಸಲಾಗಿದೆ ಮತ್ತು ತಕ್ಷಣವೇ 1,000-1,100 ಮೆಗಾವ್ಯಾಟ್ ಅನ್ನು ಪಡೆಯುವ ಗುರಿಯನ್ನು ಹೊಂದಿದೆ ಎಂದರು.
ಕಳೆದ ವರ್ಷ ಆಗಸ್ಟ್-ಸೆಪ್ಟೆಂಬರ್ ಅವಧಿಯಲ್ಲಿ 8,000- 8,500 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಇತ್ತು. ಈ ವರ್ಷ ಈ ಬೇಡಿಕೆ 15,000- 16,000 ಮೆಗಾವ್ಯಾಟ್ಗೆ ಏರಿಕೆಯಾಗಿದೆ. ಸದ್ಯ ಥರ್ಮಲ್ ಮತ್ತು ಹೈಡ್ರೊದಿಂದ ರಾಜ್ಯದಲ್ಲಿ 1,100- 1,300 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಈ ವರ್ಷದ ಏಪ್ರಿಲ್ 1 ರಿಂದ ಅಕ್ಟೋಬರ್ 15 ರವರೆಗೆ, ವಿದ್ಯುತ್ ವಿನಿಮಯದ ಮೂಲಕ ಇತರ ಮೂಲಗಳಿಂದ 1,627 ಮಿಲಿಯನ್ ಯೂನಿಟ್ಸ್ ವಿದ್ಯುತ್ ಖರೀದಿಸಲು ರಾಜ್ಯವು 1,102 ಕೋಟಿ ರೂ. ಖರ್ಚು ಮಾಡಿದೆ. ಅದೇ ಅವಧಿಯಲ್ಲಿ ಹೆಚ್ಚುವರಿ ಉತ್ಪಾದನೆ ಇದ್ದಾಗ 636 ಮಿಲಿಯನ್ ಯೂನಿಟ್ಸ್ ಅನ್ನು ಮಾರಾಟ ಮಾಡಿದ ನಂತರ ರಾಜ್ಯಕ್ಕೆ 265 ಕೋಟಿ ರೂ. ಬಂದಿದೆ ಎಂದು ಜಾರ್ಜ್ ತಿಳಿಸಿದರು.
ಗುಣಮಟ್ಟವನ್ನು ಕಾಪಾಡಿಕೊಳ್ಳಲು ಆಮದು ಮಾಡಿಕೊಂಡ ಕಲ್ಲಿದ್ದಲಿನ ಶೇ 10 ರಷ್ಟನ್ನು ಸ್ಥಳೀಯವಾಗಿ ಸಂಗ್ರಹಿಸಿದ ಕಲ್ಲಿದ್ದಲಿನೊಂದಿಗೆ ಮಿಶ್ರಣ ಮಾಡಲು ಸರ್ಕಾರ ನಿರ್ಧರಿಸಿದೆ. ಶರಾವತಿಯಲ್ಲಿ ಪಂಪ್ಡ್ ಸ್ಟೋರೇಜ್ ಹೌಸ್ಗಳನ್ನು ಸ್ಥಾಪಿಸಲು ಮತ್ತು ಜಿಂದಾಲ್ ಸೇರಿದಂತೆ ವಿವಿಧ ಸಂಸ್ಥೆಗಳೊಂದಿಗೆ ಪಿಪಿಪಿ ಮಾದರಿಯಲ್ಲಿ ಸರ್ಕಾರವು ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…
ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…
ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಔಷದ ದರ ನಿಯಂತ್ರಣ ಪ್ರಾಧಿಕಾರ (ಎನ್ಪಿಪಿಎ) ೩೯ ಅಗತ್ಯ ಔಷಧಗಳ ಬೆಲೆ ಇಳಿಕೆಗೆ ಮಹತ್ವದ…
ಕುಗ್ರಾಮಗಳಲ್ಲಿ ವೈದ್ಯಕೀಯ ಶಿಬಿರಗಳ ಆಯೋಜನೆ ಬಿಹಾರದ ಪಟ್ನಾ ಜಿಲ್ಲೆಯ ದರ್ಭಾಂಗಾದ ಭುರವನ್ ಗ್ರಾಮದ ರಮಣ್ ಕಿಶೋರ್ ಅವರದ್ದು ಒಂದು ಸಾಧಾರಣ…
ಕೆ.ಬಿ.ರಮೇಶನಾಯಕ ಧಾರ್ಮಿಕತೆ ಹೆಸರಿನಲ್ಲಿ ನಿಷೇಧ ಹೇರಿದ್ದ ವಿಡಿಯೋ, ಫೋಟೋ ಚಿತ್ರೀಕರಣಕ್ಕೂ ಅವಕಾಶ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿರುವ ಹೆಸರಾಂತ ದೇವಸ್ಥಾನಗಳಿಗೆ…
ಹೇಮಂತ್ಕುಮಾರ್ ಮಂಡ್ಯ: ಜಿಲ್ಲೆಯಲ್ಲಿ ಮಳೆ ಅಭಾವದಿಂದಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರು ಸರಬರಾಜಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಈಗಾಗಲೇ ಸಮಸ್ಯೆ…