BREAKING NEWS

ಮುಸ್ಲಿಮರ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂ ತಡೆ : ಸರ್ಕಾರಕ್ಕೆ ಮುಖಭಂಗ

ನವದೆಹಲಿ : ಮುಸ್ಲಿಂ ಮೀಸಲಾತಿ 2ಬಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ರಾಜ್ಯ ಸರ್ಕಾರದ 2ಬಿ ಮೀಸಲಾತಿ ರದ್ದತಿಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ನ್ಯಾಯಾಲಯದ ಆದೇಶದಿಂದ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ.
ಇತರೆ ಹಿಂದುಳಿದ ವರ್ಗಗಳ (ಒಬಿಸಿ) ವಿಭಾಗದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಸುಮಾರು ಮೂರು ದಶಕಗಳಷ್ಟು ಹಿಂದಿನ ಶೇ 4ರ ಮೀಸಲಾತಿಯನ್ನು ರದ್ದುಗೊಳಿಸಿದ ಕರ್ನಾಟಕದಲ್ಲಿನ ಬಿಜೆಪಿ ನೇತೃತ್ವದ ಸರ್ಕಾರದ ವಿವಾದಾತ್ಮಕ ನಿರ್ಧಾರದ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿ ಸರ್ಕಾರದ ಆದೇಶಕ್ಕೆ ತಡೆ ನೀಡಿ, ವಿಚಾರಣೆಯನ್ನು ಮೇ 9 ಕ್ಕೆ ಮುಂದೂಡಿದೆ.

ಮುಸ್ಲಿಮರ ಶೇ 4ರ ಒಬಿಸಿ ಕೋಟಾವನ್ನು ರದ್ದುಪಡಿಸಿ, ಒಕ್ಕಲಿಗರು ಹಾಗೂ ಲಿಂಗಾಯತರ ಮೀಸಲಾತಿಯನ್ನು ತಲಾ ಶೇ 2ರಷ್ಟು ಹೆಚ್ಚಿಸುವ ನಿರ್ಧಾರವು ಮೇಲ್ನೋಟಕ್ಕೆ ಅಸ್ಥಿರ ಹಾಗೂ ದೋಷಪೂರಿತ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಸುಮಾರು ನಾಲ್ಕು ದಶಕಗಳಿಂದ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ರಾಜ್ಯ ಸರ್ಕಾರ ಮುಸ್ಲಿಮರ ಮೀಸಲಾತಿ ಕಿತ್ತುಕೊಂಡು ಒಕ್ಕಲಿಗ ಮತ್ತು ಲಿಂಗಾಯತರಿಗೆ ತಲಾ ಶೇ. 2ರಷ್ಟು ಮೀಸಲಾತಿ ಹಂಚಿಕೆ ಮಾಡಿತ್ತು.

ಈ ಕುರಿತು ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ಎಂ ಜೋಸೆಫ್ ಅವರ ನೇತೃತ್ವದ ಪೀಠ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ. ಮೀಸಲಾತಿ ಪರಿಷ್ಕರಣೆ ವೇಳೆ ಮುಸ್ಲಿಮರಿಗೆ ರಾಜ್ಯ ಸರ್ಕಾರ ಶೇ. 4ರ ಮೀಸಲಾತಿ ರದ್ದು ಮಾಡಿತ್ತು. ಸರ್ಕಾರದ ಈ ಆದೇಶ ಸಾಮಾಜಿಕ ವಲಯದಲ್ಲಿ ಹೆಚ್ಚು ಚರ್ಚೆಗೀಡಾಗಿತ್ತು.

ಇದೀಗ ಸುಪ್ರೀಂಕೋರ್ಟ್ ಸರ್ಕಾರದ ಆದೇಶಕ್ಕೆ `ಬ್ರೇಕ್’ ಹಾಕಿದೆ. ಸುಪ್ರೀಂಕೋರ್ಟ್ ಆದೇಶದಿಂದಾಗಿ ಈಗ ಒಕ್ಕಲಿಗ ಮತ್ತು ಲಿಂಗಾಯತ ಮೀಸಲಾತಿ ಹೆಚ್ಚಳದ ಮೇಲೆ ಪರಿಣಾಮ ಬೀಳಲಿದೆ.

lokesh

Recent Posts

ಅಜ್ಜೀಪುರದಿಂದ ಶಕ್ತಿಸೌಧಕ್ಕೆ ಪಾದಯಾತ್ರೆ : ರೈತ ಸಂಘಟನೆಗಳ ಬೆಂಬಲಕ್ಕೆ ಮನವಿ

ಹನೂರು : ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ ನೀರು ತುಂಬಿಸಲು 491 ಕೋಟಿ ವೆಚ್ಚದ…

2 mins ago

ಕಾಡುಕೋಣ ಡಿಕ್ಕಿ : ಪಲ್ಟಿಯಾದ ಗೂಡ್ಸ್‌ ವಾಹನ

ಸಿದ್ದಾಪುರ : ಕಾಡುಕೋಣ ಡಿಕ್ಕಿ ಹೊಡೆದ ಪರಿಣಾಮ ವಾಹನ ಪಲ್ಟಿಯಾದ ಘಟನೆ ಸಮೀಪದ ಕರಡಿಗೋಡು ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.…

18 mins ago

ದೇವಾಲಯಗಳಲ್ಲಿ ರೀಲ್ಸ್‌ಗೆ ಶುಲ್ಕ

ಬೆಂಗಳೂರು : ಇಂದಿನ ಯುವ ಜನಾಂಗದಲ್ಲಿ ಹೆಚ್ಚುತ್ತಿರುವ ರೀಲ್ಸ್ ಹುಚ್ಚನ್ನು ಎನ್‍ಕ್ಯಾಶ್ ಮಾಡಿಕೊಳ್ಳುವ ಹೊಸ ಐಡಿಯಾವನ್ನು ಮುಜರಾಯಿ ಇಲಾಖೆ ಕಂಡುಕೊಂಡಿದೆ.…

55 mins ago

ಸ್ನೇಹಮಯಿ ಕೃಷ್ಣ ಸಿಸಿಬಿ ಪೊಲೀಸ್ ವಶಕ್ಕೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ಪ್ರಮುಖ ದೂರುದಾರ ಮತ್ತು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು…

1 hour ago

ಏಪ್ರಿಲ್‌ನಿಂದ ವಿದ್ಯುತ್‌ ದರ ಹೆಚ್ಚಳ

ಬೆಂಗಳೂರು : ಮುಂಬರುವ ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಾಗಲಿದ್ದು, ಪ್ರತಿ ಯೂನಿಟ್‍ಗೆ 12ರಿಂದ 15 ಪೈಸೆ ಹೆಚ್ಚುವರಿ ಶುಲ್ಕ…

2 hours ago

ಮೈಸೂರು | ಅನಧಿಕೃತ ಪ್ಲೇಕ್ಸ್, ಬ್ಯಾನರ್ ತೆರವುಗೊಳಿಸಿ ; ಜಿಲ್ಲಾಧಿಕಾರಿ ಆದೇಶ

ಮೈಸೂರು : ಸಂಘ ಸಂಸ್ಥೆ, ಸಂಘಟನೆಗಳು, ಸಾರ್ವಜನಿಕರು ಹಾಗೂ ಇತರರು ಸಾರ್ವಜನಿಕ ಪ್ರದೇಶದಲ್ಲಿ ಪ್ಲೇಕ್ಸ್ ಮತ್ತು ಬ್ಯಾನರ್ ಗಳನ್ನು ಅಳವಡಿಸಬೇಕಾದ್ದಲ್ಲಿ…

2 hours ago