ನವದೆಹಲಿ: ದಿಲ್ಲಿಯಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ನಡೆಸುತ್ತಿದ್ದ ಅಗ್ರಗೇಟರ್ಗಳಾದ ರ್ಯಾಪಿಡೋ ಹಾಗೂ ಉಬರ್ಗೆ ಸುಪ್ರೀಂ ಕೋರ್ಟ್ನ ಸೋಮವಾರದ ತೀರ್ಪು ತಣ್ಣೀರೆರೆಚಿದೆ.
ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಮತಿ ನೀಡಿ ದಿಲ್ಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ.
ಇದು ರಾಷ್ಟ್ರ ರಾಜಧಾನಿಯಲ್ಲಿ ಬೈಕ್ ಟ್ಯಾಕ್ಸಿ ಸೇವೆ ನೀಡುತ್ತಿದ್ದ ರ್ಯಾಪಿಡೋ ಹಾಗೂ ಉಬರ್ಗೆ ಭಾರೀ ಹಿನ್ನಡೆ ಉಂಟು ಮಾಡಿವೆ. ರ್ಯಾಪಿಡೋ ಮತ್ತು ಉಬರ್ ಕಂಪನಿಗಳಿಗೆ ಅಂತಿಮ ನೀತಿಯನ್ನು ಪ್ರಕಟಿಸುವವರೆಗೆ ಅಗ್ರಿಗೇಟರ್ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸಲು ತನ್ನ ತೀರ್ಪಿನಲ್ಲಿ ದಿಲ್ಲಿ ಹೈಕೋರ್ಟ್ ಅನುಮತಿ ನೀಡಿತ್ತು. ಈ ತೀರ್ಪನ್ನೀಗ ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಆಪ್ ಮೂಲಕ ಬೈಕ್ ಸೇವೆ ನೀಡುತ್ತಿದ್ದ ಕಂಪನಿಗಳಿಗೆ ನಿರಾಸೆಯಾಗಿದೆ.
ಜುಲೈ ಅಂತ್ಯದೊಳಗೆ ಬೈಕ್ ಅಗ್ರಿಗೇಟರ್ಗಳ ಕಾರ್ಯಾಚರಣೆಯನ್ನು ನಿಯಂತ್ರಿಸಲು ಮಾರ್ಗಸೂಚಿಗಳು ಮತ್ತು ಪರವಾನಗಿ ನೀತಿಗಳನ್ನು ರೂಪಿಸುವುದಾಗಿ ದಿಲ್ಲಿಯ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರ ಸುಪ್ರೀಂ ಕೋರ್ಟ್ಗೆ ಭರವಸೆ ನೀಡಿದೆ.
ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ರಾಜೇಶ್ ಬಿಂದಾಲ್ ಅವರನ್ನೊಳಗೊಂಡ ರಜಾಕಾಲದ ಪೀಠವು ದಿಲ್ಲಿ ಹೈಕೋರ್ಟ್ನಲ್ಲಿ ತಮ್ಮ ಅರ್ಜಿಯ ತುರ್ತು ವಿಚಾರಣೆಗೆ ಕೋರುವ ಅವಕಾಶವನ್ನು ಎರಡೂ ಕಂಪನಿಗಳಿಗೆ ನೀಡಿದೆ. ದಿಲ್ಲಿ ಹೈಕೋರ್ಟ್ನ ಮೇ 26ರ ಆದೇಶದ ಅನುಷ್ಠಾನವನ್ನು ಸುಪ್ರೀಂ ಕೋರ್ಟ್ನ ಪೀಠವು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, ಜುಲೈ ಅಂತ್ಯದೊಳಗೆ ಅಂತಿಮ ನೀತಿಯನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ದಿಲ್ಲಿ ಸರ್ಕಾರವನ್ನು ಪ್ರತಿನಿಧಿಸುವ ವಕೀಲರು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.
ಅಂತಿಮ ನೀತಿಯನ್ನು ಬಿಡುಗಡೆ ಮಾಡುವವರೆಗೆ ರ್ಯಾಪಿಡೋ ಹಾಗೂ ಉಬರ್ ಸೇರಿದಂತೆ ಬೈಕ್ ಟ್ಯಾಕ್ಸಿ ಅಗ್ರಿಗೇಟರ್ಗಳ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳದಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದ ಹೈಕೋರ್ಟ್ನ ಮೇ 26ರ ಆದೇಶವನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷದ ಸರ್ಕಾರವು ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಪರಿಗಣಿಸಿತ್ತು.
ಕಳೆದ ವಾರ ದೆಹಲಿ ಸರ್ಕಾರ ಸಲ್ಲಿಸಿದ ಎರಡೂ ಅರ್ಜಿಗಳಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ಕೇಳಿತ್ತು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…