BREAKING NEWS

ಡಿಸೆಂಬರ್ 11 ಕ್ಕೆ ಆರ್ಟಿಕಲ್ 370 ರದ್ದತಿ ಕುರಿತು ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ : ಜಮ್ಮು-ಕಾಶ್ಮೀರದ ಆರ್ಟಿಕಲ್ 370 ರದ್ದತಿ ಕುರಿತು ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯ ತೀರ್ಪು ಸುಪ್ರೀಂ ಕೋರ್ಟ್‌ನಲ್ಲಿ ಡಿಸೆಂಬರ್ 11 ಕ್ಕೆ ಪ್ರಕಟವಾಗಲಿದೆ.

16 ದಿನಗಳ ವಿಚಾರಣೆಯ ನಂತರ ಸೆಪ್ಟೆಂಬರ್‌.05 ರಂದು ಸುಪ್ರೀಂ ಕೋರ್ಟ್ ಈ ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು. ಜಮ್ಮು-ಕಾಶ್ಮೀರದ ಆರ್ಟಿಕಲ್ 370 ರದ್ದತಿಯನ್ನು ವಿರೋಧಿಸಿ ಅರ್ಜಿ ಸಲ್ಲಿಸಿದ್ದವರ ಪರವಾಗಿ ಕಪಿಲ್ ಸಿಬಲ್, ಗೋಪಾಲ್ ಸುಬ್ರಹ್ಮಣೀಯಮ್, ರಾಜೀವ್ ಧವನ್, ಜಫರ್ ಶಾ, ದುಷ್ಯಂತ್ ದಾವೆ ವಾದಿಸಿದ್ದರು.

ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಪಂಚ ಸದಸ್ಯ ಪೀಠ ತೀರ್ಪು ಪ್ರಕಟಿಸಲಿದೆ ಎಂದು ಕೋರ್ಟ್ ವೆಬ್ ಸೈಟ್‌ನಲ್ಲಿ ತಿಳಿಸಲಾಗಿದೆ. ಪಂಚ ಸದಸ್ಯ ಪೀಠದಲ್ಲಿ ನ್ಯಾ. ಸಂಜಯ್ ಕಿಶನ್ ಕೌಲ್, ನ್ಯಾ. ಸಂಜೀವ್ ಖನ್ನಾ, ನ್ಯಾ. ಬಿಆರ್ ಗವಾಯಿ ಹಾಗೂ ನ್ಯಾ.ಸೂರ್ಯ ಕಾಂತ್ ಸಹ ಇದ್ದಾರೆ.

ಇತ್ತ ಕೇಂದ್ರ ಸರ್ಕಾರ ದಾಖಲೆ ಮೂಲಕ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿತ್ತು. ಆರ್ಟಿಕಲ್ 370 ರದ್ದಿನಿಂದ ಜಮ್ಮು ಮತ್ತು ಕಾಶ್ಮೀರದಲ್ಲಾದ ಬದಲಾವಣೆ ಮಾಹಿತಿಯನ್ನೂ ಕೋರ್ಟ್ ಮುಂದೆ ಇಟ್ಟಿತ್ತು. ವಿಶೇಷ ಸ್ಥಾನಮಾನ ರದ್ದತಿಯಿಂದ ಕಾಶ್ಮೀರದಲ್ಲಿ 890 ಕೇಂದ್ರೀಯ ಕಾನೂನು ಅಳವಡಿಸಲಾಗಿದೆ. ಇದರಿಂದ ಮೊದಲು ಹಕ್ಕುಗಳಿಂದ ವಂಚಿತರಾದವರು ಈಗ ಸರ್ಕಾರಿ ಉದ್ಯೋಗಗಳನ್ನು ಪಡೆಯಬಹುದಾಗಿದೆ. ಆಸ್ತಿ ಖರೀದಿಸಬಹುದಾಗಿದೆ. ಇದಲ್ಲದೇ ಅನ್ಯಾಯ, ತಾರತಮ್ಯ ಮಾಡುವ 250 ರಾಜ್ಯ ಕಾನೂನುಗಳನ್ನು ರದ್ದುಗೊಳಿಸಲಾಗಿದೆ. ಇದರಿಂದ ಕಾಶ್ಮೀರದಲ್ಲಿ ಕೈಗಾರಿಕಾ ಸ್ಥಾಪನೆಯ ಹಾದಿ ಸುಲಭವಾಗಿದ್ದು, ಹೂಡಿಕೆ ಪರಿಸರ ನಿರ್ಮಾಣವಾಗಿದೆ ಎಂದಿತ್ತು.

2021ರಲ್ಲಿ ಕಾಶ್ಮೀರದಲ್ಲಿ ಒಳನುಸುಳುವಿಕೆ ಪ್ರಮಾಣ ಶೇ. 33ಕ್ಕೆ ಇಳಿಕೆಯಾಗಿದೆ. ಕದನ ವಿರಾಮ ಉಲ್ಲಂಘನೆಯಲ್ಲಿ ಶೇ. 90ರಷ್ಟು ಇಳಿಕೆ, ಶೇ.61ರಷ್ಟು ಭಯೋತ್ಪಾದಕ ಕೃತ್ಯಗಳಲ್ಲಿ ಇಳಿಕೆ ಹಾಗೂ ಉಗ್ರರಿಂದ ಅಪಹರಣಕ್ಕೊಳಗಾಗುವ ಪ್ರಮಾಣ ಶೇ.80 ರಷ್ಟು ಇಳಿಕೆಯಾಗಿದೆ ಎಂದು ಮಾಹಿತಿ ನೀಡಿತ್ತು.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

15 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

15 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

15 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

15 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

15 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

15 hours ago