BREAKING NEWS

ಡಿಸೆಂಬರ್ 11 ಕ್ಕೆ ಆರ್ಟಿಕಲ್ 370 ರದ್ದತಿ ಕುರಿತು ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ : ಜಮ್ಮು-ಕಾಶ್ಮೀರದ ಆರ್ಟಿಕಲ್ 370 ರದ್ದತಿ ಕುರಿತು ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯ ತೀರ್ಪು ಸುಪ್ರೀಂ ಕೋರ್ಟ್‌ನಲ್ಲಿ ಡಿಸೆಂಬರ್ 11 ಕ್ಕೆ ಪ್ರಕಟವಾಗಲಿದೆ.

16 ದಿನಗಳ ವಿಚಾರಣೆಯ ನಂತರ ಸೆಪ್ಟೆಂಬರ್‌.05 ರಂದು ಸುಪ್ರೀಂ ಕೋರ್ಟ್ ಈ ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು. ಜಮ್ಮು-ಕಾಶ್ಮೀರದ ಆರ್ಟಿಕಲ್ 370 ರದ್ದತಿಯನ್ನು ವಿರೋಧಿಸಿ ಅರ್ಜಿ ಸಲ್ಲಿಸಿದ್ದವರ ಪರವಾಗಿ ಕಪಿಲ್ ಸಿಬಲ್, ಗೋಪಾಲ್ ಸುಬ್ರಹ್ಮಣೀಯಮ್, ರಾಜೀವ್ ಧವನ್, ಜಫರ್ ಶಾ, ದುಷ್ಯಂತ್ ದಾವೆ ವಾದಿಸಿದ್ದರು.

ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಪಂಚ ಸದಸ್ಯ ಪೀಠ ತೀರ್ಪು ಪ್ರಕಟಿಸಲಿದೆ ಎಂದು ಕೋರ್ಟ್ ವೆಬ್ ಸೈಟ್‌ನಲ್ಲಿ ತಿಳಿಸಲಾಗಿದೆ. ಪಂಚ ಸದಸ್ಯ ಪೀಠದಲ್ಲಿ ನ್ಯಾ. ಸಂಜಯ್ ಕಿಶನ್ ಕೌಲ್, ನ್ಯಾ. ಸಂಜೀವ್ ಖನ್ನಾ, ನ್ಯಾ. ಬಿಆರ್ ಗವಾಯಿ ಹಾಗೂ ನ್ಯಾ.ಸೂರ್ಯ ಕಾಂತ್ ಸಹ ಇದ್ದಾರೆ.

ಇತ್ತ ಕೇಂದ್ರ ಸರ್ಕಾರ ದಾಖಲೆ ಮೂಲಕ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿತ್ತು. ಆರ್ಟಿಕಲ್ 370 ರದ್ದಿನಿಂದ ಜಮ್ಮು ಮತ್ತು ಕಾಶ್ಮೀರದಲ್ಲಾದ ಬದಲಾವಣೆ ಮಾಹಿತಿಯನ್ನೂ ಕೋರ್ಟ್ ಮುಂದೆ ಇಟ್ಟಿತ್ತು. ವಿಶೇಷ ಸ್ಥಾನಮಾನ ರದ್ದತಿಯಿಂದ ಕಾಶ್ಮೀರದಲ್ಲಿ 890 ಕೇಂದ್ರೀಯ ಕಾನೂನು ಅಳವಡಿಸಲಾಗಿದೆ. ಇದರಿಂದ ಮೊದಲು ಹಕ್ಕುಗಳಿಂದ ವಂಚಿತರಾದವರು ಈಗ ಸರ್ಕಾರಿ ಉದ್ಯೋಗಗಳನ್ನು ಪಡೆಯಬಹುದಾಗಿದೆ. ಆಸ್ತಿ ಖರೀದಿಸಬಹುದಾಗಿದೆ. ಇದಲ್ಲದೇ ಅನ್ಯಾಯ, ತಾರತಮ್ಯ ಮಾಡುವ 250 ರಾಜ್ಯ ಕಾನೂನುಗಳನ್ನು ರದ್ದುಗೊಳಿಸಲಾಗಿದೆ. ಇದರಿಂದ ಕಾಶ್ಮೀರದಲ್ಲಿ ಕೈಗಾರಿಕಾ ಸ್ಥಾಪನೆಯ ಹಾದಿ ಸುಲಭವಾಗಿದ್ದು, ಹೂಡಿಕೆ ಪರಿಸರ ನಿರ್ಮಾಣವಾಗಿದೆ ಎಂದಿತ್ತು.

2021ರಲ್ಲಿ ಕಾಶ್ಮೀರದಲ್ಲಿ ಒಳನುಸುಳುವಿಕೆ ಪ್ರಮಾಣ ಶೇ. 33ಕ್ಕೆ ಇಳಿಕೆಯಾಗಿದೆ. ಕದನ ವಿರಾಮ ಉಲ್ಲಂಘನೆಯಲ್ಲಿ ಶೇ. 90ರಷ್ಟು ಇಳಿಕೆ, ಶೇ.61ರಷ್ಟು ಭಯೋತ್ಪಾದಕ ಕೃತ್ಯಗಳಲ್ಲಿ ಇಳಿಕೆ ಹಾಗೂ ಉಗ್ರರಿಂದ ಅಪಹರಣಕ್ಕೊಳಗಾಗುವ ಪ್ರಮಾಣ ಶೇ.80 ರಷ್ಟು ಇಳಿಕೆಯಾಗಿದೆ ಎಂದು ಮಾಹಿತಿ ನೀಡಿತ್ತು.

andolanait

Recent Posts

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಕಾಡಾನೆ ದಾಳಿ

ರಾಮನಗರ : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು…

32 mins ago

ಕೊಡಗು | ಜಿಲ್ಲೆಯಲ್ಲಿ 2-3 ಸಾವಿರ ಅನಧಿಕೃತ ಹೋಂಸ್ಟೇ!

ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮಕ್ಕೆ ಒತ್ತಾಯ ; ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮಕ್ಕೆ ಆಗ್ರಹ  ನವೀನ್…

59 mins ago

ಕೋಟೆ | ರೆಸಾರ್ಟ್‌, ಹೋಂ ಸ್ಟೇಗಳ ಮೇಲೆ ಹೆಚ್ಚಿನ ನಿಗಾ

ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ…

1 hour ago

ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ | ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ಅಸ್ಪೃಶ್ಯರನ್ನು ಅವರ ನೋವುಗಳಿಂದ ಮುಕ್ತಗೊಳಿಸಲು ಶ್ರಮಿಸಿದ ಮಹಾತ್ಮ ಯಾವುದೇ ಸಮಸ್ಯೆಗೆ ಆಯುಧಗಳು ಮಾತ್ರ ಉತ್ತರವಲ್ಲ ಎಂದು ಮಹಾತ್ಮ ಗಾಂಧಿ ಯಾವಾಗಲೂ…

2 hours ago

ಇರುವೆ ಕಚ್ಚಿ ಶಿಶು ಸಾವು ಪ್ರಕರಣ ; ವೈದ್ಯರು ಸೇರಿ 7 ಮಂದಿಗೆ ಶೋಕಾಸ್‌ ನೋಟಿಸ್

ಮೈಸೂರು : ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಸಿಯುನ ಉಸ್ತುವಾರಿ ವೈದ್ಯರು…

2 hours ago

ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ | ಗಾಂಧಿ ಆತ್ಮಕತೆಯ ಆಯ್ದ ತುಣುಕು ; ಬಾಲ್ಯ ವಿವಾಹವೆಂಬ ನಾಚಿಕೆಗೇಡಿನ ಸಂಗತಿ

ನನ್ನ ಮದುವೆ, ನನ್ನ ಹದಿಮೂರನೆಯ ವಯಸ್ಸಿನಲ್ಲಿ ನಡೆಯಿತೆಂಬುದನ್ನು ನಾನು ವ್ಯಥೆಯಿಂದ ಇಲ್ಲಿ ಬರೆಯಬೇಕಾಗಿದೆ. ನಾನು ಮಾತಾಪಿತೃ ನಿಷ್ಠೆಯಿಂದ ಕೂಡಿದ್ದೆ. ಆದರೆ…

2 hours ago