BREAKING NEWS

ಮಣಿಪುರ ಹಿಂಸಾಚಾರ ತನಿಖೆಗೆ ತ್ರಿಸದಸ್ಯರ ಸಮಿತಿ ಪ್ರಸ್ತಾಪಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ : ಮಣಿಪುರ ಹಿಂಸಾಚಾರದ ಪ್ರಕರಣದ ತನಿಖೆ ಸಹಿತ ಸಂತ್ರಸ್ತರ ಪುನರ್ವಸತಿ ಮತ್ತಿತರ ವಿಚಾರಗಳ ಬಗ್ಗೆ ಪರಿಶೀಲಿಸಲು ಹೈಕೋರ್ಟಿನ ಮೂವರು ಮಾಜಿ ನ್ಯಾಯಾಧೀಶರುಗಳನ್ನೊಳಗೊಂಡ ಸಮಿತಿಯನ್ನು ಸುಪ್ರೀಂ ಕೋರ್ಟ್‌ ಇಂದು ಪ್ರಸ್ತಾಪಿಸಿದೆ.

“ಕಾನೂನಿನ ಮೇಲೆ ಜನರ ವಿಶ್ವಾಸ ಮರುಸ್ಥಾಪಿಸುವ ಉದ್ದೇಶ ನಮ್ಮದಾಗಿದೆ. ಮೂವರು ಮಾಜಿ ಹೈಕೋರ್ಟ್‌ ನ್ಯಾಯಾಧೀಶರ ಸಮಿತಿ ರಚಿಸುತ್ತೇವೆ. ತನಿಖೆ ಹೊರತಾಗಿ ಪರಿಹಾರ, ಪರಿಹಾರೋಪಾಯಗಳ ಕುರಿತು ಅದು ಪರಿಶೀಲಿಸಲಿದೆ,” ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಈ ಸಮಿತಿಯಲ್ಲಿ ಜಮ್ಮು ಕಾಶ್ಮೀರ ಹೈಕೋರ್ಟಿನ ಮಾಜಿ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್‌, ಬಾಂಬೆ ಹೈಕೋರ್ಟಿನ ಮಾಜಿ ನ್ಯಾಯಾಧೀಶೆ ಶಾಲಿನಿ ಜೋಷಿ ಮತ್ತು ದಿಲ್ಲಿ ಹೈಕೋರ್ಟಿನ ಮಾಜಿ ನ್ಯಾಯಾಧೀಶೆ ಆಶಾ ಮೆನನ್‌ ಇರಲಿದ್ದಾರೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಮಾಜಿ ಐಪಿಎಸ್‌ ಅಧಿಕಾರಿ ದತ್ತಾತ್ರೇಯ ಪಡ್ಸಲ್ಗಿಕರ್‌ ಅವರು ಸಿಬಿಐ ತನಿಖೆಯ ಮೇಲುಸ್ತುವಾರಿ ನಡೆಸಲಿದ್ದಾರೆ ಹಾಗೂ ಕನಿಷ್ಠ ಡಿವೈಎಸ್ಪಿ ಶ್ರೇಣಿಯ ಐದು ಅಧಿಕಾರಿಗಳನ್ನು ವಿವಿಧ ರಾಜ್ಯಗಳಿಂದ ಸಿಬಿಐಗೆ ತರಲಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

“ಸಿಬಿಐಗೆ ವರ್ಗಾಯಿಸದ ಪ್ರಕರಣಗಳನ್ನು ತನಿಖೆ ನಡೆಸಲು 42 ವಿಶೇಷ ತನಿಖಾ ತಂಡಗಳಿರಲಿವೆ. ಹಾಗೂ ಈ SIT ಗಳನ್ನು ಮಣಿಪುರದ ಹೊರಗಿನ ಡಿಐಜಿ ಶ್ರೇಣಿಯ ಅಧಿಕಾರಿಗಳು ಮೇಲುಸ್ತುವಾರಿ ನಡೆಸಲಿದ್ದಾರೆ. ಪ್ರತಿ ಅಧಿಕಾರಿ ಆರು SITಗಳ ಉಸ್ತುವಾರಿ ವಹಿಸಿ ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದೆಯೇ ಎಂದು ನೋಡಲಿದ್ದಾರೆ,” ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಇದಕ್ಕೂ ಮುಂಚೆ ಸರ್ಕಾರದ ಪರ ವಕೀಲರು ಮಾತನಾಡಿ ಪ್ರಕರಣಗಳ ತನಿಖೆ ನಡೆಸಲು ಜಿಲ್ಲಾವಾರು ವಿಶೇಷ ತನಿಖಾ ತಂಡಗಳನ್ನು ರಚಿಸಲಾಗುವುದು ಎಂದರು. ಮಣಿಪುರ ಹಿಂಸಾಚಾರ ಕುರಿತಂತೆ ಕೋರ್ಟ್‌ ಉಸ್ತುವಾರಿಯ ತನಿಖೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ಮೇಳಿನ ತೀರ್ಪನ್ನು ಸುಪ್ರೀಂ ಕೋರ್ಟ್‌ ಕಾಯ್ದಿರಿಸಿದೆ.

ಮಣಿಪುರ ಹಿಂಸಾಚಾರ ಕುರಿತಂತೆ ನ್ಯಾಯಾಲಯದ ಪ್ರಶ್ನೆಗಳಿಗೆ ಉತ್ತರಿಸಲು ಇಂದು ಕೋರ್ಟ್‌ ನಿರ್ದೇಶನದಂತೆ ಮಣಿಪುರ ಡಿಐಜಿ ರಾಜೀವ್‌ ಸಿಂಗ್‌ ಹಾಜರಿದ್ದರು.

ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಇದಕ್ಕೂ ಮುನ್ನ ಆಗಸ್ಟ್‌ 1ರಂದು ನಡೆದ ವಿಚಾರಣೆಯಲ್ಲಿ ಕೋರ್ಟ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.

ಪರಿಹಾರ, ಕೋರ್ಟ್‌ ಮೇಲುಸ್ತುವಾರಿಯಲ್ಲಿ ತನಿಖೆ, ಪುನರ್ವಸತಿ ಮತ್ತಿತರ ಕೋರಿಕೆಗಳೊಂದಿಗೆ ಸಲ್ಲಿಸಲಾಗಿದ್ದ ಮಣಿಪುರ ಕುರಿತಾದ ಸುಮಾರು 10 ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಇಂದು ವಿಚಾರಣೆಗೆ ಕೈಗೆತ್ತಿಕೊಂಡಿತ್ತು.

andolanait

Recent Posts

WPL Champions | 2ನೇ ಬಾರಿ ಚಾಂಪಿಯನ್‌ ಆದ ಆರ್‌ಸಿಬಿ

ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…

7 hours ago

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

8 hours ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

9 hours ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

10 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

10 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

10 hours ago