BREAKING NEWS

ಮಣಿಪುರ ಹಿಂಸಾಚಾರ ತನಿಖೆಗೆ ತ್ರಿಸದಸ್ಯರ ಸಮಿತಿ ಪ್ರಸ್ತಾಪಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ : ಮಣಿಪುರ ಹಿಂಸಾಚಾರದ ಪ್ರಕರಣದ ತನಿಖೆ ಸಹಿತ ಸಂತ್ರಸ್ತರ ಪುನರ್ವಸತಿ ಮತ್ತಿತರ ವಿಚಾರಗಳ ಬಗ್ಗೆ ಪರಿಶೀಲಿಸಲು ಹೈಕೋರ್ಟಿನ ಮೂವರು ಮಾಜಿ ನ್ಯಾಯಾಧೀಶರುಗಳನ್ನೊಳಗೊಂಡ ಸಮಿತಿಯನ್ನು ಸುಪ್ರೀಂ ಕೋರ್ಟ್‌ ಇಂದು ಪ್ರಸ್ತಾಪಿಸಿದೆ.

“ಕಾನೂನಿನ ಮೇಲೆ ಜನರ ವಿಶ್ವಾಸ ಮರುಸ್ಥಾಪಿಸುವ ಉದ್ದೇಶ ನಮ್ಮದಾಗಿದೆ. ಮೂವರು ಮಾಜಿ ಹೈಕೋರ್ಟ್‌ ನ್ಯಾಯಾಧೀಶರ ಸಮಿತಿ ರಚಿಸುತ್ತೇವೆ. ತನಿಖೆ ಹೊರತಾಗಿ ಪರಿಹಾರ, ಪರಿಹಾರೋಪಾಯಗಳ ಕುರಿತು ಅದು ಪರಿಶೀಲಿಸಲಿದೆ,” ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಈ ಸಮಿತಿಯಲ್ಲಿ ಜಮ್ಮು ಕಾಶ್ಮೀರ ಹೈಕೋರ್ಟಿನ ಮಾಜಿ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್‌, ಬಾಂಬೆ ಹೈಕೋರ್ಟಿನ ಮಾಜಿ ನ್ಯಾಯಾಧೀಶೆ ಶಾಲಿನಿ ಜೋಷಿ ಮತ್ತು ದಿಲ್ಲಿ ಹೈಕೋರ್ಟಿನ ಮಾಜಿ ನ್ಯಾಯಾಧೀಶೆ ಆಶಾ ಮೆನನ್‌ ಇರಲಿದ್ದಾರೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಮಾಜಿ ಐಪಿಎಸ್‌ ಅಧಿಕಾರಿ ದತ್ತಾತ್ರೇಯ ಪಡ್ಸಲ್ಗಿಕರ್‌ ಅವರು ಸಿಬಿಐ ತನಿಖೆಯ ಮೇಲುಸ್ತುವಾರಿ ನಡೆಸಲಿದ್ದಾರೆ ಹಾಗೂ ಕನಿಷ್ಠ ಡಿವೈಎಸ್ಪಿ ಶ್ರೇಣಿಯ ಐದು ಅಧಿಕಾರಿಗಳನ್ನು ವಿವಿಧ ರಾಜ್ಯಗಳಿಂದ ಸಿಬಿಐಗೆ ತರಲಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

“ಸಿಬಿಐಗೆ ವರ್ಗಾಯಿಸದ ಪ್ರಕರಣಗಳನ್ನು ತನಿಖೆ ನಡೆಸಲು 42 ವಿಶೇಷ ತನಿಖಾ ತಂಡಗಳಿರಲಿವೆ. ಹಾಗೂ ಈ SIT ಗಳನ್ನು ಮಣಿಪುರದ ಹೊರಗಿನ ಡಿಐಜಿ ಶ್ರೇಣಿಯ ಅಧಿಕಾರಿಗಳು ಮೇಲುಸ್ತುವಾರಿ ನಡೆಸಲಿದ್ದಾರೆ. ಪ್ರತಿ ಅಧಿಕಾರಿ ಆರು SITಗಳ ಉಸ್ತುವಾರಿ ವಹಿಸಿ ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದೆಯೇ ಎಂದು ನೋಡಲಿದ್ದಾರೆ,” ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಇದಕ್ಕೂ ಮುಂಚೆ ಸರ್ಕಾರದ ಪರ ವಕೀಲರು ಮಾತನಾಡಿ ಪ್ರಕರಣಗಳ ತನಿಖೆ ನಡೆಸಲು ಜಿಲ್ಲಾವಾರು ವಿಶೇಷ ತನಿಖಾ ತಂಡಗಳನ್ನು ರಚಿಸಲಾಗುವುದು ಎಂದರು. ಮಣಿಪುರ ಹಿಂಸಾಚಾರ ಕುರಿತಂತೆ ಕೋರ್ಟ್‌ ಉಸ್ತುವಾರಿಯ ತನಿಖೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ಮೇಳಿನ ತೀರ್ಪನ್ನು ಸುಪ್ರೀಂ ಕೋರ್ಟ್‌ ಕಾಯ್ದಿರಿಸಿದೆ.

ಮಣಿಪುರ ಹಿಂಸಾಚಾರ ಕುರಿತಂತೆ ನ್ಯಾಯಾಲಯದ ಪ್ರಶ್ನೆಗಳಿಗೆ ಉತ್ತರಿಸಲು ಇಂದು ಕೋರ್ಟ್‌ ನಿರ್ದೇಶನದಂತೆ ಮಣಿಪುರ ಡಿಐಜಿ ರಾಜೀವ್‌ ಸಿಂಗ್‌ ಹಾಜರಿದ್ದರು.

ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಇದಕ್ಕೂ ಮುನ್ನ ಆಗಸ್ಟ್‌ 1ರಂದು ನಡೆದ ವಿಚಾರಣೆಯಲ್ಲಿ ಕೋರ್ಟ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.

ಪರಿಹಾರ, ಕೋರ್ಟ್‌ ಮೇಲುಸ್ತುವಾರಿಯಲ್ಲಿ ತನಿಖೆ, ಪುನರ್ವಸತಿ ಮತ್ತಿತರ ಕೋರಿಕೆಗಳೊಂದಿಗೆ ಸಲ್ಲಿಸಲಾಗಿದ್ದ ಮಣಿಪುರ ಕುರಿತಾದ ಸುಮಾರು 10 ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಇಂದು ವಿಚಾರಣೆಗೆ ಕೈಗೆತ್ತಿಕೊಂಡಿತ್ತು.

andolanait

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

5 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

5 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

5 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

5 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

5 hours ago