BREAKING NEWS

ಮಣಿಪುರ ವೈರಲ್ ವಿಡಿಯೋ ಕುರಿತು ಕೇಂದ್ರ, ರಾಜ್ಯ ಸರ್ಕಾರಕ್ಕೆ ಸುಪ್ರೀಂ ತರಾಟೆ

ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ ಮತ್ತು ಮೇ 4 ರಂದು ನಡೆದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಘಟನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಮತ್ತು ಮಣಿಪುರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಮಣಿಪುರದಲ್ಲಿ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದ ವಿಡಿಯೋ “ಭಯಾನಕ” ಎಂದು ಆಕ್ರೋಶ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಪೊಲೀಸರು ಏನು ಮಾಡುತ್ತಿದ್ದರು?, ಎಫ್‌ಐಆರ್‌ಗೆ ಸಂಬಂಧಿಸಿದಂತೆ ಇದುವರೆಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ವಾಸ್ತವಿಕವಾಗಿ ಪೊಲೀಸರೇ ಮಹಿಳೆಯರನ್ನು ಗಲಭೆಕೋರರ ಗುಂಪಿಗೆ ಒಪ್ಪಿಸಿರುವುದರಿಂದ ರಾಜ್ಯ ಪೊಲೀಸರು ಈ ವಿಷಯವನ್ನು ತನಿಖೆ ಮಾಡಲು ಬಯಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಕಿಡಿ ಕಾರಿದೆ.

ಹಿಂಸಾಚಾರ ಪೀಡಿತ ರಾಜ್ಯದ ಪರಿಸ್ಥಿತಿಯನ್ನು ಮೇಲ್ವಿಚಾರಣೆ ನಡೆಸಲು ನಾಳೆ ಕೇಂದ್ರ ಮತ್ತು ಮಣಿಪುರವನ್ನು ಪ್ರತಿನಿಧಿಸುವ ಕಾನೂನು ಅಧಿಕಾರಿಗಳನ್ನು ಒಳಗೊಂಡ ಎಸ್‌ಐಟಿ ಅಥವಾ ಮಾಜಿ ನ್ಯಾಯಾಧೀಶರನ್ನು ಒಳಗೊಂಡ ಸಮಿತಿ ರಚಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ವೈರಲ್ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿದ್ದಕ್ಕಾಗಿ ಮಣಿಪುರ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, “ಮೇ 4 ರಂದು ನಡೆದ ಭಯಾನಕ ಘಟನೆಯ ಬಗ್ಗೆ ತಕ್ಷಣ ಎಫ್‌ಐಆರ್ ಏಕೆ ದಾಖಲಿಸಲಿಲ್ಲ ಮತ್ತು ಎಫ್‌ಐಆರ್ ದಾಖಲಿಸಲು ರಾಜ್ಯ ಪೊಲೀಸರಿಗೆ 14 ದಿನಗಳು ಏಕೆ ಬೇಕಾಯಿತು? ಎಂದು ಪ್ರಶ್ನಿಸಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ, ವಿಡಿಯೋದಲ್ಲಿ ತೋರಿಸಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಘಟನೆಯು ಪ್ರತ್ಯೇಕ ಘಟನೆಯಲ್ಲ ಮತ್ತು ಅಂತಹ ಹಲವಾರು ಘಟನೆಗಳು ನಡೆದಿರಬಹು ಎಂದು ಊಹಿಸಿದೆ.

ಮೇ 4ರಂದು ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 18 ರಂದು ಎಫ್ಐಆರ್ ದಾಖಲಾಗಿತ್ತು. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ಬಳಿಕವಷ್ಟೇ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಅಪ್ರಾಪ್ತ ಸೇರಿದಂತೆ ಏಳು ಆರೋಪಿಗಳನ್ನು ಬಂಧಿಸಲಾಗಿದೆ.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

5 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

6 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

6 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

8 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

8 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

8 hours ago