ನವದೆಹಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹಿಂಪಡೆಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ಡಿಕೆ ಶಿವಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಪ್ರಶ್ನಿಸಿ ಕೇಂದ್ರೀಯ ತನಿಖಾ ದಳ (ಸಿಬಿಐ) ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನಿರುದ್ಧ್ ಬೋಸ್ ಮತ್ತು ಬೇಲಾ ಎಂ. ತ್ರಿವೇದಿ ಅವರನ್ನೊಳಗೊಂಡ ಪೀಠವು, ಸಿಬಿಐ ಮೇಲ್ಮನವಿಯ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಇದಕ್ಕೂ ಮುನ್ನ ಜುಲೈನಲ್ಲಿ ಕಾಂಗ್ರೆಸ್ ನಾಯಕನ ವಿರುದ್ಧ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.
ಫೆಬ್ರುವರಿಯಲ್ಲಿ, ಡಿಕೆ ಶಿವಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತು ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಕ್ರಮ ಕೈಗೊಂಡ ಬಗ್ಗೆ ವರದಿ ಸಲ್ಲಿಸುವಂತೆ ತನಿಖಾ ಸಂಸ್ಥೆಗೆ ಸೂಚಿಸಿತ್ತು.
ಏನಿದು ಪ್ರಕರಣ?
ಡಿಕೆ ಶಿವಕುಮಾರ್ ಅವರು 2013 ರಿಂದ 2018ರ ನಡುವಿನ ಅವಧಿಯಲ್ಲಿ ತಮ್ಮ ಆದಾಯಕ್ಕೂ ಮೀರಿದ ಸಂಪತ್ತು ಗಳಿಸಿದ್ದಾರೆ ಎಂದು ಆರೋಪಿಸಿ ಸಿಬಿಐ, ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ವಿವಿಧ ಕಲಂಗಳ ಅಡಿಯಲ್ಲಿ 2020ರ ಅಕ್ಟೋಬರ್ 3 ರಂದು ಪ್ರಕರಣ ದಾಖಲಿಸಿದೆ.
2017ರಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧದ ಬಳಿಕ ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಾಗಿತ್ತು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…