BREAKING NEWS

‘ಅಮಾನತುಗೊಂಡ ಸಂಸದ’: ಟ್ವಿಟರ್ ಬಯೋ ಬದಲಿಸಿದ ಆಪ್ ನಾಯಕ ರಾಘವ್ ಚಡ್ಡಾ

ನವದೆಹಲಿ : ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಅವರು, ತಮ್ಮ ಎಕ್ಸ್ (ಟ್ವಿಟರ್) ಬಯೋವನ್ನು ‘ಅಮಾನತುಗೊಂಡ ಸಂಸದ’ ಎಂದು ಬದಲಿಸಿದ್ದಾರೆ.

“ನಿಯಮಗಳ ಉಲ್ಲಂಘನೆ, ಅನುಚಿತ ವರ್ತನೆ, ಉದ್ಧಟತನದ ಪ್ರವೃತ್ತಿ ಹಾಗೂ ಮಾನಹಾನಿಯಾಗುವಂತಹ ವರ್ತನೆ”ಗಾಗಿ ರಾಜ್ಯಸಭೆಯಿಂದ ರಾಘವ್ ಚಡ್ಡಾ ಅವರನ್ನು ಅಮಾನತುಗೊಳಿಸಲಾಗಿತ್ತು. ಈ ನಡುವೆ ರಾಘವ್ ಚಡ್ಡಾ ವಿರುದ್ಧದ ಆರೋಪದ ಕುರಿತು ಹಕ್ಕುಚ್ಯುತಿ ಸಮಿತಿಯು ಇನ್ನಷ್ಟೇ ವರದಿ ನೀಡಬೇಕಿದೆ.

ಪ್ರಸ್ತಾವಿತ ರಾಷ್ಟ್ರೀಯ ರಾಜಧಾನಿ ದಿಲ್ಲಿ ಕೇಂದ್ರಾಡಳಿತ ಪ್ರದೇಶದ ಸರ್ಕಾರ (ತಿದ್ದುಪಡಿ) ಮಸೂದೆ, 2023ರ ಆಯ್ಕೆ ಸಮಿತಿಯಲ್ಲಿ ರಾಜ್ಯಸಭೆಯ ಕೆಲವು ಸದಸ್ಯರ ಹೆಸರನ್ನು ಅವರ ಒಪ್ಪಿಗೆ ಇಲ್ಲದೆ ಸೇರ್ಪಡೆ ಮಾಡಿರುವ ಆಪ್ ನಾಯಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಭಾನಾಯಕರಾಗಿದ್ದ ಪಿಯೂಷ್ ಗೋಯಲ್ ಅವರು ಶುಕ್ರವಾರ ರಾಘವ್ ಚಡ್ಡಾ ಅವರ ವಿರುದ್ಧ ಅಮಾನತು ನಿರ್ಣಯವನ್ನು ಮಂಡಿಸಿದ್ದರು.

ಇದಕ್ಕೆ ಪ್ರತಿಯಾಗಿ, ಶುಕ್ರವಾರ ರಾತ್ರಿ ಪ್ರತಿಕ್ರಿಯಿಸಿದ್ದ ರಾಘವ್ ಚಡ್ಡಾ, “ನೀವು ಪ್ರಶ್ನೆಗಳನ್ನು ಕೇಳುವ ಧೈರ್ಯ ಪ್ರದರ್ಶಿಸಿದರೆ, ನಿಮ್ಮ ಧ್ವನಿಯನ್ನು ಹತ್ತಿಕ್ಕಲಾಗುವುದು ಎಂಬ ಸಂದೇಶವನ್ನು ನನ್ನ ಅಮಾನತು ಆದೇಶವು ಯುವಜನರಿಗೆ ತಲುಪಿಸಿದೆ. ದಿಲ್ಲಿ ಸೇವೆ ಮಸೂದೆಯ ಕುರಿತು ನಾನು ಕೇಳಿದ ಕಠಿಣ ಪ್ರಶ್ನೆಗಳಿಗೆ ವಿಶ್ವದ ಅತಿ ದೊಡ್ಡ ಪಕ್ಷವಾದ ಬಿಜೆಪಿಯ ಬಳಿ ಉತ್ತರವಿಲ್ಲದೆ ಇದ್ದುದರಿಂದ ನನ್ನನ್ನು ಅಮಾನತುಗೊಳಿಸಲಾಗಿದೆ” ಎಂದು ಆರೋಪಿಸಿದ್ದಾರೆ.

ಜುಲೈ 20ರಂದು ಪ್ರಾರಂಭವಾಗಿ ಶುಕ್ರವಾರ ಅಂತ್ಯಗೊಂಡ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಅಮಾನತುಗೊಂಡಿರುವ ಎರಡನೆಯ ಆಪ್ ನಾಯಕ ರಾಘವ್ ಚಡ್ಡಾ ಆಗಿದ್ದಾರೆ. ಇದಕ್ಕೂ ಮುನ್ನ ಆಪ್ ಪಕ್ಷದ ಹಿರಿಯ ನಾಯಕ ಸಂಜಯ್ ಸಿಂಗ್ ಅವರನ್ನು ಜುಲೈ 24ರಂದು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿತ್ತು. ಅವರ ಅಮಾನತು ಅವಧಿಯನ್ನು ಮುಂದುವರಿಸಲು ಸದನವು ಶುಕ್ರವಾರ ಸಮ್ಮತಿ ಸೂಚಿಸಿತ್ತು. ಅವರ ವಿರುದ್ಧದ ಹಕ್ಕುಚ್ಯುತಿ ಸಮಿತಿಯ ವರದಿಯು ಇನ್ನೂ ಬಾಕಿ ಇದೆ.

andolanait

Recent Posts

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

29 mins ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

1 hour ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

1 hour ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

2 hours ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

3 hours ago

ಬೈಲಕುಪ್ಪೆ ಹಿಟ್‌ ಅಂಡ್‌ ರನ್‌ ಕೇಸ್‌ ; ರಸ್ತೆ ತಡೆದು ಪ್ರತಿಭಟನೆ ನಡೆಸಿದ ಸ್ಥಳೀಯರು

ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…

3 hours ago