BREAKING NEWS

‘ಅಮಾನತುಗೊಂಡ ಸಂಸದ’: ಟ್ವಿಟರ್ ಬಯೋ ಬದಲಿಸಿದ ಆಪ್ ನಾಯಕ ರಾಘವ್ ಚಡ್ಡಾ

ನವದೆಹಲಿ : ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಅವರು, ತಮ್ಮ ಎಕ್ಸ್ (ಟ್ವಿಟರ್) ಬಯೋವನ್ನು ‘ಅಮಾನತುಗೊಂಡ ಸಂಸದ’ ಎಂದು ಬದಲಿಸಿದ್ದಾರೆ.

“ನಿಯಮಗಳ ಉಲ್ಲಂಘನೆ, ಅನುಚಿತ ವರ್ತನೆ, ಉದ್ಧಟತನದ ಪ್ರವೃತ್ತಿ ಹಾಗೂ ಮಾನಹಾನಿಯಾಗುವಂತಹ ವರ್ತನೆ”ಗಾಗಿ ರಾಜ್ಯಸಭೆಯಿಂದ ರಾಘವ್ ಚಡ್ಡಾ ಅವರನ್ನು ಅಮಾನತುಗೊಳಿಸಲಾಗಿತ್ತು. ಈ ನಡುವೆ ರಾಘವ್ ಚಡ್ಡಾ ವಿರುದ್ಧದ ಆರೋಪದ ಕುರಿತು ಹಕ್ಕುಚ್ಯುತಿ ಸಮಿತಿಯು ಇನ್ನಷ್ಟೇ ವರದಿ ನೀಡಬೇಕಿದೆ.

ಪ್ರಸ್ತಾವಿತ ರಾಷ್ಟ್ರೀಯ ರಾಜಧಾನಿ ದಿಲ್ಲಿ ಕೇಂದ್ರಾಡಳಿತ ಪ್ರದೇಶದ ಸರ್ಕಾರ (ತಿದ್ದುಪಡಿ) ಮಸೂದೆ, 2023ರ ಆಯ್ಕೆ ಸಮಿತಿಯಲ್ಲಿ ರಾಜ್ಯಸಭೆಯ ಕೆಲವು ಸದಸ್ಯರ ಹೆಸರನ್ನು ಅವರ ಒಪ್ಪಿಗೆ ಇಲ್ಲದೆ ಸೇರ್ಪಡೆ ಮಾಡಿರುವ ಆಪ್ ನಾಯಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಭಾನಾಯಕರಾಗಿದ್ದ ಪಿಯೂಷ್ ಗೋಯಲ್ ಅವರು ಶುಕ್ರವಾರ ರಾಘವ್ ಚಡ್ಡಾ ಅವರ ವಿರುದ್ಧ ಅಮಾನತು ನಿರ್ಣಯವನ್ನು ಮಂಡಿಸಿದ್ದರು.

ಇದಕ್ಕೆ ಪ್ರತಿಯಾಗಿ, ಶುಕ್ರವಾರ ರಾತ್ರಿ ಪ್ರತಿಕ್ರಿಯಿಸಿದ್ದ ರಾಘವ್ ಚಡ್ಡಾ, “ನೀವು ಪ್ರಶ್ನೆಗಳನ್ನು ಕೇಳುವ ಧೈರ್ಯ ಪ್ರದರ್ಶಿಸಿದರೆ, ನಿಮ್ಮ ಧ್ವನಿಯನ್ನು ಹತ್ತಿಕ್ಕಲಾಗುವುದು ಎಂಬ ಸಂದೇಶವನ್ನು ನನ್ನ ಅಮಾನತು ಆದೇಶವು ಯುವಜನರಿಗೆ ತಲುಪಿಸಿದೆ. ದಿಲ್ಲಿ ಸೇವೆ ಮಸೂದೆಯ ಕುರಿತು ನಾನು ಕೇಳಿದ ಕಠಿಣ ಪ್ರಶ್ನೆಗಳಿಗೆ ವಿಶ್ವದ ಅತಿ ದೊಡ್ಡ ಪಕ್ಷವಾದ ಬಿಜೆಪಿಯ ಬಳಿ ಉತ್ತರವಿಲ್ಲದೆ ಇದ್ದುದರಿಂದ ನನ್ನನ್ನು ಅಮಾನತುಗೊಳಿಸಲಾಗಿದೆ” ಎಂದು ಆರೋಪಿಸಿದ್ದಾರೆ.

ಜುಲೈ 20ರಂದು ಪ್ರಾರಂಭವಾಗಿ ಶುಕ್ರವಾರ ಅಂತ್ಯಗೊಂಡ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಅಮಾನತುಗೊಂಡಿರುವ ಎರಡನೆಯ ಆಪ್ ನಾಯಕ ರಾಘವ್ ಚಡ್ಡಾ ಆಗಿದ್ದಾರೆ. ಇದಕ್ಕೂ ಮುನ್ನ ಆಪ್ ಪಕ್ಷದ ಹಿರಿಯ ನಾಯಕ ಸಂಜಯ್ ಸಿಂಗ್ ಅವರನ್ನು ಜುಲೈ 24ರಂದು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿತ್ತು. ಅವರ ಅಮಾನತು ಅವಧಿಯನ್ನು ಮುಂದುವರಿಸಲು ಸದನವು ಶುಕ್ರವಾರ ಸಮ್ಮತಿ ಸೂಚಿಸಿತ್ತು. ಅವರ ವಿರುದ್ಧದ ಹಕ್ಕುಚ್ಯುತಿ ಸಮಿತಿಯ ವರದಿಯು ಇನ್ನೂ ಬಾಕಿ ಇದೆ.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

1 hour ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

2 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

2 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

4 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

4 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

5 hours ago