BREAKING NEWS

‘ಅಮಾನತುಗೊಂಡ ಸಂಸದ’: ಟ್ವಿಟರ್ ಬಯೋ ಬದಲಿಸಿದ ಆಪ್ ನಾಯಕ ರಾಘವ್ ಚಡ್ಡಾ

ನವದೆಹಲಿ : ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಅವರು, ತಮ್ಮ ಎಕ್ಸ್ (ಟ್ವಿಟರ್) ಬಯೋವನ್ನು ‘ಅಮಾನತುಗೊಂಡ ಸಂಸದ’ ಎಂದು ಬದಲಿಸಿದ್ದಾರೆ.

“ನಿಯಮಗಳ ಉಲ್ಲಂಘನೆ, ಅನುಚಿತ ವರ್ತನೆ, ಉದ್ಧಟತನದ ಪ್ರವೃತ್ತಿ ಹಾಗೂ ಮಾನಹಾನಿಯಾಗುವಂತಹ ವರ್ತನೆ”ಗಾಗಿ ರಾಜ್ಯಸಭೆಯಿಂದ ರಾಘವ್ ಚಡ್ಡಾ ಅವರನ್ನು ಅಮಾನತುಗೊಳಿಸಲಾಗಿತ್ತು. ಈ ನಡುವೆ ರಾಘವ್ ಚಡ್ಡಾ ವಿರುದ್ಧದ ಆರೋಪದ ಕುರಿತು ಹಕ್ಕುಚ್ಯುತಿ ಸಮಿತಿಯು ಇನ್ನಷ್ಟೇ ವರದಿ ನೀಡಬೇಕಿದೆ.

ಪ್ರಸ್ತಾವಿತ ರಾಷ್ಟ್ರೀಯ ರಾಜಧಾನಿ ದಿಲ್ಲಿ ಕೇಂದ್ರಾಡಳಿತ ಪ್ರದೇಶದ ಸರ್ಕಾರ (ತಿದ್ದುಪಡಿ) ಮಸೂದೆ, 2023ರ ಆಯ್ಕೆ ಸಮಿತಿಯಲ್ಲಿ ರಾಜ್ಯಸಭೆಯ ಕೆಲವು ಸದಸ್ಯರ ಹೆಸರನ್ನು ಅವರ ಒಪ್ಪಿಗೆ ಇಲ್ಲದೆ ಸೇರ್ಪಡೆ ಮಾಡಿರುವ ಆಪ್ ನಾಯಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಭಾನಾಯಕರಾಗಿದ್ದ ಪಿಯೂಷ್ ಗೋಯಲ್ ಅವರು ಶುಕ್ರವಾರ ರಾಘವ್ ಚಡ್ಡಾ ಅವರ ವಿರುದ್ಧ ಅಮಾನತು ನಿರ್ಣಯವನ್ನು ಮಂಡಿಸಿದ್ದರು.

ಇದಕ್ಕೆ ಪ್ರತಿಯಾಗಿ, ಶುಕ್ರವಾರ ರಾತ್ರಿ ಪ್ರತಿಕ್ರಿಯಿಸಿದ್ದ ರಾಘವ್ ಚಡ್ಡಾ, “ನೀವು ಪ್ರಶ್ನೆಗಳನ್ನು ಕೇಳುವ ಧೈರ್ಯ ಪ್ರದರ್ಶಿಸಿದರೆ, ನಿಮ್ಮ ಧ್ವನಿಯನ್ನು ಹತ್ತಿಕ್ಕಲಾಗುವುದು ಎಂಬ ಸಂದೇಶವನ್ನು ನನ್ನ ಅಮಾನತು ಆದೇಶವು ಯುವಜನರಿಗೆ ತಲುಪಿಸಿದೆ. ದಿಲ್ಲಿ ಸೇವೆ ಮಸೂದೆಯ ಕುರಿತು ನಾನು ಕೇಳಿದ ಕಠಿಣ ಪ್ರಶ್ನೆಗಳಿಗೆ ವಿಶ್ವದ ಅತಿ ದೊಡ್ಡ ಪಕ್ಷವಾದ ಬಿಜೆಪಿಯ ಬಳಿ ಉತ್ತರವಿಲ್ಲದೆ ಇದ್ದುದರಿಂದ ನನ್ನನ್ನು ಅಮಾನತುಗೊಳಿಸಲಾಗಿದೆ” ಎಂದು ಆರೋಪಿಸಿದ್ದಾರೆ.

ಜುಲೈ 20ರಂದು ಪ್ರಾರಂಭವಾಗಿ ಶುಕ್ರವಾರ ಅಂತ್ಯಗೊಂಡ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಅಮಾನತುಗೊಂಡಿರುವ ಎರಡನೆಯ ಆಪ್ ನಾಯಕ ರಾಘವ್ ಚಡ್ಡಾ ಆಗಿದ್ದಾರೆ. ಇದಕ್ಕೂ ಮುನ್ನ ಆಪ್ ಪಕ್ಷದ ಹಿರಿಯ ನಾಯಕ ಸಂಜಯ್ ಸಿಂಗ್ ಅವರನ್ನು ಜುಲೈ 24ರಂದು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿತ್ತು. ಅವರ ಅಮಾನತು ಅವಧಿಯನ್ನು ಮುಂದುವರಿಸಲು ಸದನವು ಶುಕ್ರವಾರ ಸಮ್ಮತಿ ಸೂಚಿಸಿತ್ತು. ಅವರ ವಿರುದ್ಧದ ಹಕ್ಕುಚ್ಯುತಿ ಸಮಿತಿಯ ವರದಿಯು ಇನ್ನೂ ಬಾಕಿ ಇದೆ.

andolanait

Recent Posts

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

42 mins ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

59 mins ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

1 hour ago

ಪುಲ್ವಾಮಾ ದಾಳಿಯ ಮಾಸ್ಟರ್‌ ಮೈಂಡ್‌ ಹಮ್ಜಾ ಬುರ್ಹಾನ್‌ ಹತ್ಯೆ

ಇಸ್ಲಾಮಾಬಾದ್:‌ 2019ರ ಪುಲ್ವಾಮಾ ಉಗ್ರರ ದಾಳಿಯ ಮಾಸ್ಟರ್‌ ಮೈಂಡ್‌ ಹಮ್ಜಾ ಬುರ್ಹಾನ್‌ನನ್ನು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ…

1 hour ago

ಪೆಟ್ರೋಲ್‌, ಡೀಸೆಲ್‌ ಮೇಲಿನ ತೆರಿಗೆ ಕಡಿತ ಮಾಡಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ಮೇಲಿನ ತೆರಿಗೆಯನ್ನು ಕಡಿತ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು,…

2 hours ago

ಧಾರ್ಮಿಕ ಪ್ರದೇಶದ ಪುಣ್ಯಭೂಮಿ ಚಾಮರಾಜನಗರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸುಳ್ಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ…

3 hours ago