ವಿಜಯಪುರ : ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡುವಾಗ ಸ್ವಾಮೀಜಿಯೊಬ್ಬರು ಅಚಾತುರ್ಯ ಎಸಗಿದ್ದಾರೆ. ಭಾನುವಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿ ತಾವೇ ಸರ್ಕಾರಿ ಬಸ್ ಚಲಾಯಿಸಿದ್ದಾರೆ.
ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಘಟನೆ ನಡೆದಿದ್ದು, ಸುಮಾರು 5 ಕಿ.ಮೀ ವರೆಗೆ ಸರ್ಕಾರಿ ಬಸ್ನ್ನು ಸ್ವಾಮೀಜಿ ಚಲಾಯಿಸಿದ್ದಾರೆ. ಕೊಲ್ಹಾರದ ದಿಗಂಬರೇಶ್ವರ ಮಠದ ಕಲ್ಲಿನಾಥ್ ಸ್ವಾಮೀಜಿ ಬಸ್ ಚಲಾಯಿಸಿ ಅಚಾತುರ್ಯ ಎಸಗಿದ್ದಾರೆ.
ಸರ್ಕಾರಿ ಅಧಿಕಾರಿಗಳ ಸಮ್ಮುಖದಲ್ಲೇ ಬಸ್ ತೆಗೆದುಕೊಂಡು ಹೋಗಿ ಕೊಲ್ಹಾರ ಪಟ್ಟಣದಲ್ಲಿ ಸ್ವಾಮೀಜಿ ಸುತ್ತಾಡಿಸಿದ್ದಾರೆ. ಸ್ವಾಮೀಜಿ ಬಸ್ ಜಲಾಯಿಸುತ್ತಿದ್ದಂತೆ ಆತಂಕದಲ್ಲೇ ಪ್ರಯಾಣಿಕರು ಪ್ರಯಾಣಿಸಿದ್ದಾರೆ.
ನಿಯಮದಂತೆ ಸರ್ಕಾರಿ ಚಾಲಕ ಬಿಟ್ಟು ಬೇರೆಯವರು ಸರ್ಕಾರಿ ಬಸ್ ಚಲಾಯಿಸುವಂತಿಲ್ಲ. ಬಸ್ ಚಲಾಯಿಸುವವರು ಕಡ್ಡಾಯವಾಗಿ ಹೇವಿ ಲೈಸನ್ಸ್ ಪಡೆದಿರಬೇಕು. ಸರ್ಕಾರಿ ನಿಯಮಗಳನ್ನ ಗಾಳಿಗೆ ತೂರಿ ಸರ್ಕಾರಿ ಬಸ್ನ್ನು ಕಲ್ಲಿನಾಥ ಸ್ವಾಮೀಜಿ ಚಲಾಯಿಸಿದ್ದಾರೆ. ಸ್ವಾಮೀಜಿಯ ಅಚಾತುರ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…