ವಿಜಯಪುರ : ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡುವಾಗ ಸ್ವಾಮೀಜಿಯೊಬ್ಬರು ಅಚಾತುರ್ಯ ಎಸಗಿದ್ದಾರೆ. ಭಾನುವಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿ ತಾವೇ ಸರ್ಕಾರಿ ಬಸ್ ಚಲಾಯಿಸಿದ್ದಾರೆ.
ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಘಟನೆ ನಡೆದಿದ್ದು, ಸುಮಾರು 5 ಕಿ.ಮೀ ವರೆಗೆ ಸರ್ಕಾರಿ ಬಸ್ನ್ನು ಸ್ವಾಮೀಜಿ ಚಲಾಯಿಸಿದ್ದಾರೆ. ಕೊಲ್ಹಾರದ ದಿಗಂಬರೇಶ್ವರ ಮಠದ ಕಲ್ಲಿನಾಥ್ ಸ್ವಾಮೀಜಿ ಬಸ್ ಚಲಾಯಿಸಿ ಅಚಾತುರ್ಯ ಎಸಗಿದ್ದಾರೆ.
ಸರ್ಕಾರಿ ಅಧಿಕಾರಿಗಳ ಸಮ್ಮುಖದಲ್ಲೇ ಬಸ್ ತೆಗೆದುಕೊಂಡು ಹೋಗಿ ಕೊಲ್ಹಾರ ಪಟ್ಟಣದಲ್ಲಿ ಸ್ವಾಮೀಜಿ ಸುತ್ತಾಡಿಸಿದ್ದಾರೆ. ಸ್ವಾಮೀಜಿ ಬಸ್ ಜಲಾಯಿಸುತ್ತಿದ್ದಂತೆ ಆತಂಕದಲ್ಲೇ ಪ್ರಯಾಣಿಕರು ಪ್ರಯಾಣಿಸಿದ್ದಾರೆ.
ನಿಯಮದಂತೆ ಸರ್ಕಾರಿ ಚಾಲಕ ಬಿಟ್ಟು ಬೇರೆಯವರು ಸರ್ಕಾರಿ ಬಸ್ ಚಲಾಯಿಸುವಂತಿಲ್ಲ. ಬಸ್ ಚಲಾಯಿಸುವವರು ಕಡ್ಡಾಯವಾಗಿ ಹೇವಿ ಲೈಸನ್ಸ್ ಪಡೆದಿರಬೇಕು. ಸರ್ಕಾರಿ ನಿಯಮಗಳನ್ನ ಗಾಳಿಗೆ ತೂರಿ ಸರ್ಕಾರಿ ಬಸ್ನ್ನು ಕಲ್ಲಿನಾಥ ಸ್ವಾಮೀಜಿ ಚಲಾಯಿಸಿದ್ದಾರೆ. ಸ್ವಾಮೀಜಿಯ ಅಚಾತುರ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…