BREAKING NEWS

ಟಿ20: ವೆಸ್ಟ್‌ ಇಂಡೀಸ್‌ ವಿರುದ್ದ ದಕ್ಷಿಣ ಆಫ್ರಿಕಾಕ್ಕೆ ʼವಿಶ್ವದಾಖಲೆʼ ಜಯ

ಸೆಂಚುರಿಯನ್‌, ದಕ್ಷಿಣ ಆಫ್ರಿಕಾ: ದಕ್ಷಿಣ ಆಫ್ರಿಕಾ ತಂಡ ದವರು ಟಿ20 ಕ್ರಿಕೆಟ್‌ನಲ್ಲಿ ಅತಿದೊಡ್ಡ ಮೊತ್ತವನ್ನು ಬೆನ್ನಟ್ಟಿ ಗೆಲುವು ಪಡೆದು ವಿಶ್ವದಾಖಲೆ ಮಾಡಿದರು.

ಭಾನುವಾರ ನಡೆದ ಪಂದ್ಯದಲ್ಲಿ ಏಡನ್‌ ಮರ್ಕರಂ ಬಳಗ ಆರು ವಿಕೆಟ್‌ ಗಳಿಂದ ವೆಸ್ಟ್‌ ಇಂಡೀಸ್‌ ತಂಡವನ್ನು ಮಣಿಸಿತು.

ಮೊದಲು ಬ್ಯಾಟ್‌ ಮಾಡಿದ ವೆಸ್ಟ್‌ ಇಂಡೀಸ್‌ 20 ಓವರ್‌ಗಳಲ್ಲಿ 5 ವಿಕೆಟ್‌ ಗಳಿಗೆ 258 ರನ್‌ ಪೇರಿಸಿತು. ಜಾನ್ಸನ್‌ ಚಾರ್ಲ್ಸ್‌ (118 ರನ್‌, 46 ಎ., 4X10, 6X11) ಮತ್ತು ಕೈಲ್‌ ಮೇಯರ್ಸ್‌ (51 ರನ್‌, 27 ಎ., 4X5, 6X4) ಅವರು ಅಬ್ಬರದ ಆಟವಾಡಿದರು.

ದಕ್ಷಿಣ ಆಫ್ರಿಕಾ 18.5 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 259 ರನ್‌ ಗಳಿಸಿ ಗೆದ್ದಿತು. ಕ್ವಿಂಟನ್‌ ಡಿಕಾಕ್‌ (100 ರನ್‌, 44 ಎ., 4X9, 6X8) ಮತ್ತು ರೀಜಾ ಹೆಂಡ್ರಿಕ್ಸ್‌ (68 ರನ್, 28 ಎ., 4X11, 6X2) ಅವರ ಸ್ಫೋಟಕ ಬ್ಯಾಟಿಂಗ್‌ ತಂಡದ ಗೆಲುವಿಗೆ ಕಾರಣವಾಯಿತು.

ಕಳೆದ ವರ್ಷ ನಡೆದಿದ್ದ ಪಂದ್ಯದಲ್ಲಿ ಬೆಲ್ಜಿಯಂ ತಂಡವು ಸರ್ಬಿಯಾ ನೀಡಿದ್ದ 246ರನ್‌ಗಳ ಗುರಿ ಬೆನ್ನಟ್ಟಿ ಗೆಲುವು ಸಾಧಿಸಿದ್ದು ಇದುವರೆಗಿನ ದಾಖಲೆಯಾಗಿತ್ತು.

ಸಂಕ್ಷಿಪ್ತ ಸ್ಕೋರ್‌:

ವೆಸ್ಟ್‌ ಇಂಡೀಸ್‌: 20 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 258 (ಕೈಲ್‌ ಮೇಯರ್ಸ್‌ 51, ಜಾನ್ಸನ್ ಚಾರ್ಲ್ಸ್‌ 118, ರೊಮಾರಿಯೊ ಶೆಫರ್ಡ್‌ ಔಟಾಗದೆ 41, ಮಾರ್ಕೊ ಜೆನ್ಸೆನ್‌ 52ಕ್ಕೆ 3, ವೇಯ್ನ್‌ ಪಾರ್ನೆಲ್‌ 43ಕ್ಕೆ 2)

ದಕ್ಷಿಣ ಆಫ್ರಿಕಾ: 18.5 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 259 (ಕ್ವಿಂಟನ್‌ ಡಿಕಾಕ್‌ 100, ರೀಜಾ ಹೆಂಡ್ರಿಕ್ಸ್‌ 68, ಏಡನ್‌ ಮರ್ಕರಂ ಔಟಾಗದೆ 38, ರೊವ್ಮನ್‌ ಪೊವೆಲ್‌ 27ಕ್ಕೆ 1)

ಫಲಿತಾಂಶ: ದಕ್ಷಿಣ ಆಫ್ರಿಕಾಕ್ಕೆ 6 ವಿಕೆಟ್‌ ಗೆಲುವು

andolanait

Recent Posts

ಲಂಚಕ್ಕೆ ಬೇಡಿಕೆ : ಪಿಎಸ್ಐ ಚೇತನ್ ಲೋಕಾ ಬಲೆಗೆ

ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…

3 hours ago

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

3 hours ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

4 hours ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

4 hours ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

5 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

5 hours ago