ಸೆಂಚುರಿಯನ್, ದಕ್ಷಿಣ ಆಫ್ರಿಕಾ: ದಕ್ಷಿಣ ಆಫ್ರಿಕಾ ತಂಡ ದವರು ಟಿ20 ಕ್ರಿಕೆಟ್ನಲ್ಲಿ ಅತಿದೊಡ್ಡ ಮೊತ್ತವನ್ನು ಬೆನ್ನಟ್ಟಿ ಗೆಲುವು ಪಡೆದು ವಿಶ್ವದಾಖಲೆ ಮಾಡಿದರು.
ಭಾನುವಾರ ನಡೆದ ಪಂದ್ಯದಲ್ಲಿ ಏಡನ್ ಮರ್ಕರಂ ಬಳಗ ಆರು ವಿಕೆಟ್ ಗಳಿಂದ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿತು.
ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್ಗಳಲ್ಲಿ 5 ವಿಕೆಟ್ ಗಳಿಗೆ 258 ರನ್ ಪೇರಿಸಿತು. ಜಾನ್ಸನ್ ಚಾರ್ಲ್ಸ್ (118 ರನ್, 46 ಎ., 4X10, 6X11) ಮತ್ತು ಕೈಲ್ ಮೇಯರ್ಸ್ (51 ರನ್, 27 ಎ., 4X5, 6X4) ಅವರು ಅಬ್ಬರದ ಆಟವಾಡಿದರು.
ದಕ್ಷಿಣ ಆಫ್ರಿಕಾ 18.5 ಓವರ್ಗಳಲ್ಲಿ 4 ವಿಕೆಟ್ಗಳಿಗೆ 259 ರನ್ ಗಳಿಸಿ ಗೆದ್ದಿತು. ಕ್ವಿಂಟನ್ ಡಿಕಾಕ್ (100 ರನ್, 44 ಎ., 4X9, 6X8) ಮತ್ತು ರೀಜಾ ಹೆಂಡ್ರಿಕ್ಸ್ (68 ರನ್, 28 ಎ., 4X11, 6X2) ಅವರ ಸ್ಫೋಟಕ ಬ್ಯಾಟಿಂಗ್ ತಂಡದ ಗೆಲುವಿಗೆ ಕಾರಣವಾಯಿತು.
ಕಳೆದ ವರ್ಷ ನಡೆದಿದ್ದ ಪಂದ್ಯದಲ್ಲಿ ಬೆಲ್ಜಿಯಂ ತಂಡವು ಸರ್ಬಿಯಾ ನೀಡಿದ್ದ 246ರನ್ಗಳ ಗುರಿ ಬೆನ್ನಟ್ಟಿ ಗೆಲುವು ಸಾಧಿಸಿದ್ದು ಇದುವರೆಗಿನ ದಾಖಲೆಯಾಗಿತ್ತು.
ಸಂಕ್ಷಿಪ್ತ ಸ್ಕೋರ್:
ವೆಸ್ಟ್ ಇಂಡೀಸ್: 20 ಓವರ್ಗಳಲ್ಲಿ 5 ವಿಕೆಟ್ಗಳಿಗೆ 258 (ಕೈಲ್ ಮೇಯರ್ಸ್ 51, ಜಾನ್ಸನ್ ಚಾರ್ಲ್ಸ್ 118, ರೊಮಾರಿಯೊ ಶೆಫರ್ಡ್ ಔಟಾಗದೆ 41, ಮಾರ್ಕೊ ಜೆನ್ಸೆನ್ 52ಕ್ಕೆ 3, ವೇಯ್ನ್ ಪಾರ್ನೆಲ್ 43ಕ್ಕೆ 2)
ದಕ್ಷಿಣ ಆಫ್ರಿಕಾ: 18.5 ಓವರ್ಗಳಲ್ಲಿ 4 ವಿಕೆಟ್ಗಳಿಗೆ 259 (ಕ್ವಿಂಟನ್ ಡಿಕಾಕ್ 100, ರೀಜಾ ಹೆಂಡ್ರಿಕ್ಸ್ 68, ಏಡನ್ ಮರ್ಕರಂ ಔಟಾಗದೆ 38, ರೊವ್ಮನ್ ಪೊವೆಲ್ 27ಕ್ಕೆ 1)
ಫಲಿತಾಂಶ: ದಕ್ಷಿಣ ಆಫ್ರಿಕಾಕ್ಕೆ 6 ವಿಕೆಟ್ ಗೆಲುವು
ಬೆಂಗಳೂರು: ಕೆಎಸ್ಆರ್ಟಿಸಿ ಬಸ್ಗಳಿಗೆ ತಕ್ಷಣಕ್ಕೆ ಡೀಸೆಲ್ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್-ಇಸ್ರೇಲ್ ಸಂಘರ್ಷ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಜರುಗಿದ ಗೌತಮ ಪಂಚಮಹಾರಥೋತ್ಸವದಲ್ಲಿ ಕಾಲ್ತುಳಿತ ಸಂಭವಿಸಿದ ಪರಿಣಾಮ ಇಬ್ಬರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ನಂಜನಗೂಡಿನ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ…
ಟೆಹರಾನ್: ಕುವೈತ್ ವಿದ್ಯುತ್ ಸ್ಥಾವರದ ಮೇಲೆ ಇರಾನ್ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…
ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…