BREAKING NEWS

ಟಿ20: ವೆಸ್ಟ್‌ ಇಂಡೀಸ್‌ ವಿರುದ್ದ ದಕ್ಷಿಣ ಆಫ್ರಿಕಾಕ್ಕೆ ʼವಿಶ್ವದಾಖಲೆʼ ಜಯ

ಸೆಂಚುರಿಯನ್‌, ದಕ್ಷಿಣ ಆಫ್ರಿಕಾ: ದಕ್ಷಿಣ ಆಫ್ರಿಕಾ ತಂಡ ದವರು ಟಿ20 ಕ್ರಿಕೆಟ್‌ನಲ್ಲಿ ಅತಿದೊಡ್ಡ ಮೊತ್ತವನ್ನು ಬೆನ್ನಟ್ಟಿ ಗೆಲುವು ಪಡೆದು ವಿಶ್ವದಾಖಲೆ ಮಾಡಿದರು.

ಭಾನುವಾರ ನಡೆದ ಪಂದ್ಯದಲ್ಲಿ ಏಡನ್‌ ಮರ್ಕರಂ ಬಳಗ ಆರು ವಿಕೆಟ್‌ ಗಳಿಂದ ವೆಸ್ಟ್‌ ಇಂಡೀಸ್‌ ತಂಡವನ್ನು ಮಣಿಸಿತು.

ಮೊದಲು ಬ್ಯಾಟ್‌ ಮಾಡಿದ ವೆಸ್ಟ್‌ ಇಂಡೀಸ್‌ 20 ಓವರ್‌ಗಳಲ್ಲಿ 5 ವಿಕೆಟ್‌ ಗಳಿಗೆ 258 ರನ್‌ ಪೇರಿಸಿತು. ಜಾನ್ಸನ್‌ ಚಾರ್ಲ್ಸ್‌ (118 ರನ್‌, 46 ಎ., 4X10, 6X11) ಮತ್ತು ಕೈಲ್‌ ಮೇಯರ್ಸ್‌ (51 ರನ್‌, 27 ಎ., 4X5, 6X4) ಅವರು ಅಬ್ಬರದ ಆಟವಾಡಿದರು.

ದಕ್ಷಿಣ ಆಫ್ರಿಕಾ 18.5 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 259 ರನ್‌ ಗಳಿಸಿ ಗೆದ್ದಿತು. ಕ್ವಿಂಟನ್‌ ಡಿಕಾಕ್‌ (100 ರನ್‌, 44 ಎ., 4X9, 6X8) ಮತ್ತು ರೀಜಾ ಹೆಂಡ್ರಿಕ್ಸ್‌ (68 ರನ್, 28 ಎ., 4X11, 6X2) ಅವರ ಸ್ಫೋಟಕ ಬ್ಯಾಟಿಂಗ್‌ ತಂಡದ ಗೆಲುವಿಗೆ ಕಾರಣವಾಯಿತು.

ಕಳೆದ ವರ್ಷ ನಡೆದಿದ್ದ ಪಂದ್ಯದಲ್ಲಿ ಬೆಲ್ಜಿಯಂ ತಂಡವು ಸರ್ಬಿಯಾ ನೀಡಿದ್ದ 246ರನ್‌ಗಳ ಗುರಿ ಬೆನ್ನಟ್ಟಿ ಗೆಲುವು ಸಾಧಿಸಿದ್ದು ಇದುವರೆಗಿನ ದಾಖಲೆಯಾಗಿತ್ತು.

ಸಂಕ್ಷಿಪ್ತ ಸ್ಕೋರ್‌:

ವೆಸ್ಟ್‌ ಇಂಡೀಸ್‌: 20 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 258 (ಕೈಲ್‌ ಮೇಯರ್ಸ್‌ 51, ಜಾನ್ಸನ್ ಚಾರ್ಲ್ಸ್‌ 118, ರೊಮಾರಿಯೊ ಶೆಫರ್ಡ್‌ ಔಟಾಗದೆ 41, ಮಾರ್ಕೊ ಜೆನ್ಸೆನ್‌ 52ಕ್ಕೆ 3, ವೇಯ್ನ್‌ ಪಾರ್ನೆಲ್‌ 43ಕ್ಕೆ 2)

ದಕ್ಷಿಣ ಆಫ್ರಿಕಾ: 18.5 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 259 (ಕ್ವಿಂಟನ್‌ ಡಿಕಾಕ್‌ 100, ರೀಜಾ ಹೆಂಡ್ರಿಕ್ಸ್‌ 68, ಏಡನ್‌ ಮರ್ಕರಂ ಔಟಾಗದೆ 38, ರೊವ್ಮನ್‌ ಪೊವೆಲ್‌ 27ಕ್ಕೆ 1)

ಫಲಿತಾಂಶ: ದಕ್ಷಿಣ ಆಫ್ರಿಕಾಕ್ಕೆ 6 ವಿಕೆಟ್‌ ಗೆಲುವು

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago