BREAKING NEWS

ಟಿ20: ವೆಸ್ಟ್‌ ಇಂಡೀಸ್‌ ವಿರುದ್ದ ದಕ್ಷಿಣ ಆಫ್ರಿಕಾಕ್ಕೆ ʼವಿಶ್ವದಾಖಲೆʼ ಜಯ

ಸೆಂಚುರಿಯನ್‌, ದಕ್ಷಿಣ ಆಫ್ರಿಕಾ: ದಕ್ಷಿಣ ಆಫ್ರಿಕಾ ತಂಡ ದವರು ಟಿ20 ಕ್ರಿಕೆಟ್‌ನಲ್ಲಿ ಅತಿದೊಡ್ಡ ಮೊತ್ತವನ್ನು ಬೆನ್ನಟ್ಟಿ ಗೆಲುವು ಪಡೆದು ವಿಶ್ವದಾಖಲೆ ಮಾಡಿದರು.

ಭಾನುವಾರ ನಡೆದ ಪಂದ್ಯದಲ್ಲಿ ಏಡನ್‌ ಮರ್ಕರಂ ಬಳಗ ಆರು ವಿಕೆಟ್‌ ಗಳಿಂದ ವೆಸ್ಟ್‌ ಇಂಡೀಸ್‌ ತಂಡವನ್ನು ಮಣಿಸಿತು.

ಮೊದಲು ಬ್ಯಾಟ್‌ ಮಾಡಿದ ವೆಸ್ಟ್‌ ಇಂಡೀಸ್‌ 20 ಓವರ್‌ಗಳಲ್ಲಿ 5 ವಿಕೆಟ್‌ ಗಳಿಗೆ 258 ರನ್‌ ಪೇರಿಸಿತು. ಜಾನ್ಸನ್‌ ಚಾರ್ಲ್ಸ್‌ (118 ರನ್‌, 46 ಎ., 4X10, 6X11) ಮತ್ತು ಕೈಲ್‌ ಮೇಯರ್ಸ್‌ (51 ರನ್‌, 27 ಎ., 4X5, 6X4) ಅವರು ಅಬ್ಬರದ ಆಟವಾಡಿದರು.

ದಕ್ಷಿಣ ಆಫ್ರಿಕಾ 18.5 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 259 ರನ್‌ ಗಳಿಸಿ ಗೆದ್ದಿತು. ಕ್ವಿಂಟನ್‌ ಡಿಕಾಕ್‌ (100 ರನ್‌, 44 ಎ., 4X9, 6X8) ಮತ್ತು ರೀಜಾ ಹೆಂಡ್ರಿಕ್ಸ್‌ (68 ರನ್, 28 ಎ., 4X11, 6X2) ಅವರ ಸ್ಫೋಟಕ ಬ್ಯಾಟಿಂಗ್‌ ತಂಡದ ಗೆಲುವಿಗೆ ಕಾರಣವಾಯಿತು.

ಕಳೆದ ವರ್ಷ ನಡೆದಿದ್ದ ಪಂದ್ಯದಲ್ಲಿ ಬೆಲ್ಜಿಯಂ ತಂಡವು ಸರ್ಬಿಯಾ ನೀಡಿದ್ದ 246ರನ್‌ಗಳ ಗುರಿ ಬೆನ್ನಟ್ಟಿ ಗೆಲುವು ಸಾಧಿಸಿದ್ದು ಇದುವರೆಗಿನ ದಾಖಲೆಯಾಗಿತ್ತು.

ಸಂಕ್ಷಿಪ್ತ ಸ್ಕೋರ್‌:

ವೆಸ್ಟ್‌ ಇಂಡೀಸ್‌: 20 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 258 (ಕೈಲ್‌ ಮೇಯರ್ಸ್‌ 51, ಜಾನ್ಸನ್ ಚಾರ್ಲ್ಸ್‌ 118, ರೊಮಾರಿಯೊ ಶೆಫರ್ಡ್‌ ಔಟಾಗದೆ 41, ಮಾರ್ಕೊ ಜೆನ್ಸೆನ್‌ 52ಕ್ಕೆ 3, ವೇಯ್ನ್‌ ಪಾರ್ನೆಲ್‌ 43ಕ್ಕೆ 2)

ದಕ್ಷಿಣ ಆಫ್ರಿಕಾ: 18.5 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 259 (ಕ್ವಿಂಟನ್‌ ಡಿಕಾಕ್‌ 100, ರೀಜಾ ಹೆಂಡ್ರಿಕ್ಸ್‌ 68, ಏಡನ್‌ ಮರ್ಕರಂ ಔಟಾಗದೆ 38, ರೊವ್ಮನ್‌ ಪೊವೆಲ್‌ 27ಕ್ಕೆ 1)

ಫಲಿತಾಂಶ: ದಕ್ಷಿಣ ಆಫ್ರಿಕಾಕ್ಕೆ 6 ವಿಕೆಟ್‌ ಗೆಲುವು

andolanait

Recent Posts

ಸ್ವಾತಂತ್ರ್ಯ ಚಳುವಳಿಗೆ ವಂದೇ ಮಾತರಂ ಶಕ್ತಿ ತುಂಬಿತು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…

31 mins ago

ಸಿಎಂ ಸಿದ್ದರಾಮಯ್ಯಗೆ ಬಿಗ್‌ಶಾಕ್‌ ಕೊಟ್ಟ ಸುಪ್ರೀಂಕೋರ್ಟ್‌

ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…

34 mins ago

ಬೆಳಗಾವಿ ಚಳಿಗಾಲದ ಅಧಿವೇಶನ: ಮೊದಲಿಗೆ ಅಗಲಿದ ಗಣ್ಯರಿಗೆ ಸಂತಾಪ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…

60 mins ago

ಮುಂದುವರಿದ ಇಂಡಿಗೋ ಸಮಸ್ಯೆ: ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…

1 hour ago

ನಟಿ ಮೇಲೆ ಅತ್ಯಾಚಾರ ಕೇಸ್‌: ಮಲಯಾಳಂ ಸ್ಟಾರ್‌ ನಟ ದಿಲೀಪ್‌ ಖುಲಾಸೆ

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…

2 hours ago

ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋದ ನಟ ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…

2 hours ago