BREAKING NEWS

ಟಿ20: ವೆಸ್ಟ್‌ ಇಂಡೀಸ್‌ ವಿರುದ್ದ ದಕ್ಷಿಣ ಆಫ್ರಿಕಾಕ್ಕೆ ʼವಿಶ್ವದಾಖಲೆʼ ಜಯ

ಸೆಂಚುರಿಯನ್‌, ದಕ್ಷಿಣ ಆಫ್ರಿಕಾ: ದಕ್ಷಿಣ ಆಫ್ರಿಕಾ ತಂಡ ದವರು ಟಿ20 ಕ್ರಿಕೆಟ್‌ನಲ್ಲಿ ಅತಿದೊಡ್ಡ ಮೊತ್ತವನ್ನು ಬೆನ್ನಟ್ಟಿ ಗೆಲುವು ಪಡೆದು ವಿಶ್ವದಾಖಲೆ ಮಾಡಿದರು.

ಭಾನುವಾರ ನಡೆದ ಪಂದ್ಯದಲ್ಲಿ ಏಡನ್‌ ಮರ್ಕರಂ ಬಳಗ ಆರು ವಿಕೆಟ್‌ ಗಳಿಂದ ವೆಸ್ಟ್‌ ಇಂಡೀಸ್‌ ತಂಡವನ್ನು ಮಣಿಸಿತು.

ಮೊದಲು ಬ್ಯಾಟ್‌ ಮಾಡಿದ ವೆಸ್ಟ್‌ ಇಂಡೀಸ್‌ 20 ಓವರ್‌ಗಳಲ್ಲಿ 5 ವಿಕೆಟ್‌ ಗಳಿಗೆ 258 ರನ್‌ ಪೇರಿಸಿತು. ಜಾನ್ಸನ್‌ ಚಾರ್ಲ್ಸ್‌ (118 ರನ್‌, 46 ಎ., 4X10, 6X11) ಮತ್ತು ಕೈಲ್‌ ಮೇಯರ್ಸ್‌ (51 ರನ್‌, 27 ಎ., 4X5, 6X4) ಅವರು ಅಬ್ಬರದ ಆಟವಾಡಿದರು.

ದಕ್ಷಿಣ ಆಫ್ರಿಕಾ 18.5 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 259 ರನ್‌ ಗಳಿಸಿ ಗೆದ್ದಿತು. ಕ್ವಿಂಟನ್‌ ಡಿಕಾಕ್‌ (100 ರನ್‌, 44 ಎ., 4X9, 6X8) ಮತ್ತು ರೀಜಾ ಹೆಂಡ್ರಿಕ್ಸ್‌ (68 ರನ್, 28 ಎ., 4X11, 6X2) ಅವರ ಸ್ಫೋಟಕ ಬ್ಯಾಟಿಂಗ್‌ ತಂಡದ ಗೆಲುವಿಗೆ ಕಾರಣವಾಯಿತು.

ಕಳೆದ ವರ್ಷ ನಡೆದಿದ್ದ ಪಂದ್ಯದಲ್ಲಿ ಬೆಲ್ಜಿಯಂ ತಂಡವು ಸರ್ಬಿಯಾ ನೀಡಿದ್ದ 246ರನ್‌ಗಳ ಗುರಿ ಬೆನ್ನಟ್ಟಿ ಗೆಲುವು ಸಾಧಿಸಿದ್ದು ಇದುವರೆಗಿನ ದಾಖಲೆಯಾಗಿತ್ತು.

ಸಂಕ್ಷಿಪ್ತ ಸ್ಕೋರ್‌:

ವೆಸ್ಟ್‌ ಇಂಡೀಸ್‌: 20 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 258 (ಕೈಲ್‌ ಮೇಯರ್ಸ್‌ 51, ಜಾನ್ಸನ್ ಚಾರ್ಲ್ಸ್‌ 118, ರೊಮಾರಿಯೊ ಶೆಫರ್ಡ್‌ ಔಟಾಗದೆ 41, ಮಾರ್ಕೊ ಜೆನ್ಸೆನ್‌ 52ಕ್ಕೆ 3, ವೇಯ್ನ್‌ ಪಾರ್ನೆಲ್‌ 43ಕ್ಕೆ 2)

ದಕ್ಷಿಣ ಆಫ್ರಿಕಾ: 18.5 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 259 (ಕ್ವಿಂಟನ್‌ ಡಿಕಾಕ್‌ 100, ರೀಜಾ ಹೆಂಡ್ರಿಕ್ಸ್‌ 68, ಏಡನ್‌ ಮರ್ಕರಂ ಔಟಾಗದೆ 38, ರೊವ್ಮನ್‌ ಪೊವೆಲ್‌ 27ಕ್ಕೆ 1)

ಫಲಿತಾಂಶ: ದಕ್ಷಿಣ ಆಫ್ರಿಕಾಕ್ಕೆ 6 ವಿಕೆಟ್‌ ಗೆಲುವು

andolanait

Recent Posts

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

1 hour ago

​ಮೈಸೂರು ವಿ.ವಿ | ಸಂಶೋಧಕರ ಶಿಷ್ಯವೇತನ ಬಿಕ್ಕಟ್ಟು ಬಗೆಹರಿಸಿದ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…

1 hour ago

ಮೈಸೂರು | ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ ; ಫುಟ್‌ಪಾತ್ ಆಕ್ರಮಿಸಿದ್ದ 30 ಅಂಗಡಿಗಳಿಗೆ ಶಾಕ್‌

ಮೈಸೂರು : ಫುಟ್‌ಪಾತ್‌ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…

4 hours ago

ರಸ್ತೆ ವೈಟ್‌ ಟಾಪಿಂಗ್‌ ; ಟೆಂಡರ್‌ ಶುವರ್‌ ಮಾದರಿ ಕಡ್ಡಾಯ

ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್‌ ಜೋನ್‌ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್‌ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಪೈರಸಿ ನಿಗ್ರಹಕ್ಕೆ ಟೆಲಿಗ್ರಾಮ್‌ ಆಪ್‌ಗೆ ಅವಧಿ ನೀಡಿದ ಕೇಂದ್ರ

ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 10 ಶುಕ್ರವಾರ

7 hours ago