BREAKING NEWS

ದೇಶದಲ್ಲಿ ಅತಿ ಹೆಚ್ಚು ಆದಾಯ ತರುವ ಸ್ಮಾರಕವಾಗಿ ಹೊರಹೊಮ್ಮಿದ ತಾಜ್ ಮಹಲ್

ನವದೆಹಲಿ: ಪ್ರೇಮಸೌಧ ತಾಜ್ ಮಹಲ್ ಪ್ರವಾಸಿಗರ ಆಕರ್ಷಣೆಯಲ್ಲಿ ಮುಂಚೂಣಿಯಲ್ಲಿದ್ದು, ದೇಶದಲ್ಲಿಯೇ ಅತಿ ಹೆಚ್ಚು ಆದಾಯ ತರುವ ಸ್ಮಾರಕವಾಗಿ ಹೊರಹೊಮ್ಮಿದೆ.

ಪ್ರವಾಸೋದ್ಯಮ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ASI) ಮಾರಾಟ ಮಾಡಿದ ಟಿಕೆಟ್ ನಿಂದ ತಾಜ್ ಮಹಲ್ ಈ ವರ್ಷ 81.89 ಕೋಟಿ ರೂಪಾಯಿ ಆದಾಯ ಗಳಿಸಿದೆ.

2022-23ರಲ್ಲಿ ತಾಜ್ ಮಹಲ್ 81.89 ಕೋಟಿ ರೂ ಆದಾಯ ಗಳಿಸಿದೆ. ಇದು ಎಎಸ್‌ಐನ ಒಟ್ಟು ಟಿಕೆಟ್(252.85 ಕೋಟಿ ರೂಪಾಯಿ) ಮಾರಾಟದ ಸುಮಾರು ಮೂರನೇ ಒಂದು ಭಾಗದಷ್ಟು ಎಂದು ಅಂಕಿ ಅಂಶಗಳು ಬಹಿರಂಗಪಡಿಸಿವೆ.

ಆದಾಗ್ಯೂ, ಇದು ಕೋವಿಡ್‌ಗೂ ಮೊದಲು ದಾಖಲಿಸಿದ ಗರಿಷ್ಠ ವಾರ್ಷಿಕ ಆದಾಯ 106.83 ಕೋಟಿಗಿಂತ ಇನ್ನೂ ಕಡಿಮೆಯಾಗಿದೆ. ಸಾಂಕ್ರಾಮಿಕ ರೋಗದಿಂದಾಗಿ 2022-21ರ ಅವಧಿಯಲ್ಲಿ ದೇಶದ ಅತಿ ಹೆಚ್ಚು ಪ್ರವಾಸಿಗರು ಭೇಟಿ ತಾಜ್ ಮಹಲ್ ಆದಾಯ 11.29 ಕೋಟಿಗೆ ಕುಸಿದಿತ್ತು.

ಕೋವಿಡ್ ನಂತರ ಪ್ರೇಮ ಸೌಧಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, 2022-23ರಲ್ಲಿ ಟಿಕೆಟ್ ಮಾರಾಟದಿಂದ 81.89 ಕೋಟಿ ರೂಪಾಯಿ ಆದಾಯ ಗಳಿಸಿದೆ.

2022-23ರಲ್ಲಿ ಕೇವಲ 15.32 ಕೋಟಿ ರೂ.ಗಳನ್ನು ಸಂಗ್ರಹಿಸುವಲ್ಲಿ ಯಶಸ್ವಿಯಾದ ಅದೇ ನಗರದ ಆಗ್ರಾ ಕೋಟೆ ಆದಾಯ ಗಳಿಕೆಯಲ್ಲಿ ಎರಡನೆ ಸ್ಥಾನದಲ್ಲಿದೆ.

ಮೂರನೇ ಸ್ಥಾನದಲ್ಲಿರುವ ದೆಹಲಿಯ ಕುತುಬ್ ಮಿನಾರ್ 12.97 ಕೋಟಿ ಆದಾಯ ಗಳಿಸಿದೆ. ದೆಹಲಿಯ ಕೆಂಪು ಕೋಟೆ 12.88 ಕೋಟಿ ರೂಪಾಯಿ ಆದಾಯ ಗಳಿಸಿದೆ.

andolanait

Recent Posts

ಟಿ.ನರಸೀಪುರ| ಯುಗಾದಿ ಸಂಭ್ರಮ: ತ್ರಿವೇಣಿ ಸಂಗಮಕ್ಕೆ ಹರಿದುಬಂದ ಭಕ್ತಸಾಗರ

ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…

16 mins ago

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಒದ್ದಾಡಿದ ಕಾಡಾನೆ

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…

28 mins ago

ಮೈಸೂರು ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…

47 mins ago

ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ: ಹಳ್ಳಿಗಳಲ್ಲಿ ಹೊನ್ನೇರು ಕಟ್ಟಿ ಸಂಭ್ರಮಿಸಿದ ಅನ್ನದಾತರು

ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…

1 hour ago

ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ

ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ…

1 hour ago

ಓದುಗರ ಪತ್ರ: ಮೈಸೂರಿನಲ್ಲಿ ಸುಸಜ್ಜಿತ ಫುಡ್ ಸ್ಟ್ರೀಟ್ ನಿರ್ಮಾಣವಾಗಲಿ

ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್‌ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ.…

1 hour ago