BREAKING NEWS

ದೇಶದಲ್ಲಿ ಅತಿ ಹೆಚ್ಚು ಆದಾಯ ತರುವ ಸ್ಮಾರಕವಾಗಿ ಹೊರಹೊಮ್ಮಿದ ತಾಜ್ ಮಹಲ್

ನವದೆಹಲಿ: ಪ್ರೇಮಸೌಧ ತಾಜ್ ಮಹಲ್ ಪ್ರವಾಸಿಗರ ಆಕರ್ಷಣೆಯಲ್ಲಿ ಮುಂಚೂಣಿಯಲ್ಲಿದ್ದು, ದೇಶದಲ್ಲಿಯೇ ಅತಿ ಹೆಚ್ಚು ಆದಾಯ ತರುವ ಸ್ಮಾರಕವಾಗಿ ಹೊರಹೊಮ್ಮಿದೆ.

ಪ್ರವಾಸೋದ್ಯಮ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ASI) ಮಾರಾಟ ಮಾಡಿದ ಟಿಕೆಟ್ ನಿಂದ ತಾಜ್ ಮಹಲ್ ಈ ವರ್ಷ 81.89 ಕೋಟಿ ರೂಪಾಯಿ ಆದಾಯ ಗಳಿಸಿದೆ.

2022-23ರಲ್ಲಿ ತಾಜ್ ಮಹಲ್ 81.89 ಕೋಟಿ ರೂ ಆದಾಯ ಗಳಿಸಿದೆ. ಇದು ಎಎಸ್‌ಐನ ಒಟ್ಟು ಟಿಕೆಟ್(252.85 ಕೋಟಿ ರೂಪಾಯಿ) ಮಾರಾಟದ ಸುಮಾರು ಮೂರನೇ ಒಂದು ಭಾಗದಷ್ಟು ಎಂದು ಅಂಕಿ ಅಂಶಗಳು ಬಹಿರಂಗಪಡಿಸಿವೆ.

ಆದಾಗ್ಯೂ, ಇದು ಕೋವಿಡ್‌ಗೂ ಮೊದಲು ದಾಖಲಿಸಿದ ಗರಿಷ್ಠ ವಾರ್ಷಿಕ ಆದಾಯ 106.83 ಕೋಟಿಗಿಂತ ಇನ್ನೂ ಕಡಿಮೆಯಾಗಿದೆ. ಸಾಂಕ್ರಾಮಿಕ ರೋಗದಿಂದಾಗಿ 2022-21ರ ಅವಧಿಯಲ್ಲಿ ದೇಶದ ಅತಿ ಹೆಚ್ಚು ಪ್ರವಾಸಿಗರು ಭೇಟಿ ತಾಜ್ ಮಹಲ್ ಆದಾಯ 11.29 ಕೋಟಿಗೆ ಕುಸಿದಿತ್ತು.

ಕೋವಿಡ್ ನಂತರ ಪ್ರೇಮ ಸೌಧಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, 2022-23ರಲ್ಲಿ ಟಿಕೆಟ್ ಮಾರಾಟದಿಂದ 81.89 ಕೋಟಿ ರೂಪಾಯಿ ಆದಾಯ ಗಳಿಸಿದೆ.

2022-23ರಲ್ಲಿ ಕೇವಲ 15.32 ಕೋಟಿ ರೂ.ಗಳನ್ನು ಸಂಗ್ರಹಿಸುವಲ್ಲಿ ಯಶಸ್ವಿಯಾದ ಅದೇ ನಗರದ ಆಗ್ರಾ ಕೋಟೆ ಆದಾಯ ಗಳಿಕೆಯಲ್ಲಿ ಎರಡನೆ ಸ್ಥಾನದಲ್ಲಿದೆ.

ಮೂರನೇ ಸ್ಥಾನದಲ್ಲಿರುವ ದೆಹಲಿಯ ಕುತುಬ್ ಮಿನಾರ್ 12.97 ಕೋಟಿ ಆದಾಯ ಗಳಿಸಿದೆ. ದೆಹಲಿಯ ಕೆಂಪು ಕೋಟೆ 12.88 ಕೋಟಿ ರೂಪಾಯಿ ಆದಾಯ ಗಳಿಸಿದೆ.

andolanait

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

4 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

4 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

5 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

6 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

6 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

6 hours ago